AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 3rd T20I Live Score: ಕೊಹ್ಲಿ ಶ್ರಮ ವ್ಯರ್ಥ, ಭಾರತಕ್ಕೆ 8 ವಿಕೆಟ್​ ಸೋಲು

ಗೆಲ್ಲಲು 157 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 2 ವಿಕೆಟ್​ ಕಳೆದುಕೊಂಡು ಪಂದ್ಯವನ್ನು ಜಯಿಸಿತು. ಆರಂಭ ಆಟಗಾರ ಜೋಸ್ ಬಟ್ಲರ್  ಅಜೇಯ 83 (52 ಎಸೆತ, 5 ಬೌಂಡರಿ 4 ಸಿಕ್ಸ್) ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

India vs England 3rd T20I Live Score: ಕೊಹ್ಲಿ ಶ್ರಮ ವ್ಯರ್ಥ, ಭಾರತಕ್ಕೆ 8 ವಿಕೆಟ್​ ಸೋಲು
ಜೋಸ್ ಬಟ್ಲರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 16, 2021 | 11:14 PM

Share

ಅಹಮದಾಬಾದ: ಭಾರತ ಮತ್ತು ಇಂಗ್ಲೆಂಡ್​ ನಡುವೆ ಅಹಮದಾಬಾದಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಮೂರನೇ ಪಂದ್ಯವನ್ನು ಪ್ರವಾಸಿ ತಂಡ 8 ವಿಕೆಟ್​ಗಳ ಅಧಿಕಾರಯುತವಾಗಿ ಗೆದ್ದು 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಗೆಲ್ಲಲು 157 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 2 ವಿಕೆಟ್​ ಕಳೆದುಕೊಂಡು ಪಂದ್ಯವನ್ನು ಜಯಿಸಿತು. ಆರಂಭ ಆಟಗಾರ ಜೋಸ್ ಬಟ್ಲರ್  ಅಜೇಯ 83 (52 ಎಸೆತ, 5 ಬೌಂಡರಿ 4 ಸಿಕ್ಸ್) ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಜಾನಿ ಬೇರ್​ಸ್ಟೋ 28 ಎಸೆತಗಳಲ್ಲಿ ಅಜೇಯ 40 ರನ್ ಬಾರಿಸಿದರು, ಇವರಿಬ್ಬರ ಜೊತೆಯಾಟದಲ್ಲಿ 78 ರನ್ ಬಂದವು,

ಭಾರತದ ಪರ ಸ್ಪಿನ್ನರ್​ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಯುಜ್ವೇಂದ್ರ ಚಹಲ್ ತಲಾ ಒಂದು ವಿಕೆಟ್​ ಪಡೆದರು.

Virat Kohli

ವಿರಾಟ್ ಕೊಹ್ಲಿ

ಇದಕ್ಕೆ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲು ಬಂದ  ಭಾರತದ ಆರಂಭ ಕೆಟ್ಟದ್ದಾಗಿತ್ತು. ಮೊದಲ 6 ಓವರ್​ಗಳಲ್ಲಿ  3 ವಿಕೆಟ್​ಗಳ ಪತನವಾಯಿತು. ನಾಯಕ ಕೊಹ್ಲಿ ಮತ್ತು ರಿಷಭ್ ಪಂತ್ ನಡುವೆ ಉತ್ತಮ ಜೊತೆಯಾಟ ಬರುತ್ತಿದ್ದಾಗಲೇ ಪಂತ್ 25 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ಅದ್ಭುತ ಆಟವಾಡಿದ್ದ ಶ್ರೇಯಸ್ ಅಯ್ಯರ್ ಕೇವಲ 9 ರನ್ ಗಳಿಸಿ ಔಟಾದರು.

ಅದರೆ 6ನೇ ವಿಕೆಟ್​ಗೆ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಬಿರುಗಾಳಿ ವೇಗದಲ್ಲಿ ರನ್ ಗಳಿಸಿ ತಂಡದ ಮೊತ್ತವನ್ನು 156/6 ತಲುಪಿಸಿದರು. ಸತತ ಎರಡನೇ ಅರ್ಧ ಶತಕ ಬಾರಿಸಿದ ಕೊಹ್ಲಿ ಅಂತಿಮವಾಗಿ 77 ರನ್ ( 46 ಎಸೆತ, 8 ಬೌಂಡರಿ 4 ಸಿಕ್ಸ್ ) ಗಳಿಸಿ ಅಜೇಯರಾಗಿ ಉಳಿದರು. 2 ಸಿಕ್ಸ್ ಬಾರಿಸಿದ ಪಾಂಡ್ಯ 17 ರನ್ ಗಳಿಸಿ ಇನ್ನಿಂಗ್ಸ್​ ಕೊನೆಯ ಎಸೆತದಲ್ಲಿ ಔಟಾದರು.

ಈ ಪಂದ್ಯಕ್ಕೆ ವಾಪಸ್ಸು ಬಂದ ವೇಗದ ಬೌಲರ್ ಮಾರ್ಕ್ ವುಡ್​ 31 ರನ್​ಗೆ 3 ವಿಕೆಟ್​ ಪಡೆದು ಯಶಸ್ವೀ ಬೌಲರ್ ಎನಿಸಿದರು. ಕ್ರಿಸ್ ಜೊರ್ಡನ್ 2 ವಿಕೆಟ್​ ಪಡೆದರು.

ಸರಣಿಯ ನಾಲ್ಕನೇ ಪಂದ್ಯ ಇದೇ ಮೈದಾನದಲ್ಲಿ ಗುರುವಾರದಂದು ನಡೆಯಲಿದೆ. ​

ಇದನ್ನೂ ಓದಿ: India vs England | ಧೋನಿಯೊಂದಿಗೆ ಹೋಲಿಸುವ ಮಟ್ಟಕ್ಕೆ ಪಂತ್ ಮತ್ತು ಕಿಷನ್ ಬೆಳೆದದ್ದು ಹೆಮ್ಮೆಯ ವಿಚಾರ: ಸಬಾ ಕರೀಮ್

Published On - 10:39 pm, Tue, 16 March 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್