AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 3rd T20I Live Score: ಕೊಹ್ಲಿ ಶ್ರಮ ವ್ಯರ್ಥ, ಭಾರತಕ್ಕೆ 8 ವಿಕೆಟ್​ ಸೋಲು

ಗೆಲ್ಲಲು 157 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 2 ವಿಕೆಟ್​ ಕಳೆದುಕೊಂಡು ಪಂದ್ಯವನ್ನು ಜಯಿಸಿತು. ಆರಂಭ ಆಟಗಾರ ಜೋಸ್ ಬಟ್ಲರ್  ಅಜೇಯ 83 (52 ಎಸೆತ, 5 ಬೌಂಡರಿ 4 ಸಿಕ್ಸ್) ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

India vs England 3rd T20I Live Score: ಕೊಹ್ಲಿ ಶ್ರಮ ವ್ಯರ್ಥ, ಭಾರತಕ್ಕೆ 8 ವಿಕೆಟ್​ ಸೋಲು
ಜೋಸ್ ಬಟ್ಲರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 16, 2021 | 11:14 PM

Share

ಅಹಮದಾಬಾದ: ಭಾರತ ಮತ್ತು ಇಂಗ್ಲೆಂಡ್​ ನಡುವೆ ಅಹಮದಾಬಾದಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಮೂರನೇ ಪಂದ್ಯವನ್ನು ಪ್ರವಾಸಿ ತಂಡ 8 ವಿಕೆಟ್​ಗಳ ಅಧಿಕಾರಯುತವಾಗಿ ಗೆದ್ದು 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಗೆಲ್ಲಲು 157 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 2 ವಿಕೆಟ್​ ಕಳೆದುಕೊಂಡು ಪಂದ್ಯವನ್ನು ಜಯಿಸಿತು. ಆರಂಭ ಆಟಗಾರ ಜೋಸ್ ಬಟ್ಲರ್  ಅಜೇಯ 83 (52 ಎಸೆತ, 5 ಬೌಂಡರಿ 4 ಸಿಕ್ಸ್) ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಜಾನಿ ಬೇರ್​ಸ್ಟೋ 28 ಎಸೆತಗಳಲ್ಲಿ ಅಜೇಯ 40 ರನ್ ಬಾರಿಸಿದರು, ಇವರಿಬ್ಬರ ಜೊತೆಯಾಟದಲ್ಲಿ 78 ರನ್ ಬಂದವು,

ಭಾರತದ ಪರ ಸ್ಪಿನ್ನರ್​ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಯುಜ್ವೇಂದ್ರ ಚಹಲ್ ತಲಾ ಒಂದು ವಿಕೆಟ್​ ಪಡೆದರು.

Virat Kohli

ವಿರಾಟ್ ಕೊಹ್ಲಿ

ಇದಕ್ಕೆ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲು ಬಂದ  ಭಾರತದ ಆರಂಭ ಕೆಟ್ಟದ್ದಾಗಿತ್ತು. ಮೊದಲ 6 ಓವರ್​ಗಳಲ್ಲಿ  3 ವಿಕೆಟ್​ಗಳ ಪತನವಾಯಿತು. ನಾಯಕ ಕೊಹ್ಲಿ ಮತ್ತು ರಿಷಭ್ ಪಂತ್ ನಡುವೆ ಉತ್ತಮ ಜೊತೆಯಾಟ ಬರುತ್ತಿದ್ದಾಗಲೇ ಪಂತ್ 25 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ಅದ್ಭುತ ಆಟವಾಡಿದ್ದ ಶ್ರೇಯಸ್ ಅಯ್ಯರ್ ಕೇವಲ 9 ರನ್ ಗಳಿಸಿ ಔಟಾದರು.

ಅದರೆ 6ನೇ ವಿಕೆಟ್​ಗೆ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಬಿರುಗಾಳಿ ವೇಗದಲ್ಲಿ ರನ್ ಗಳಿಸಿ ತಂಡದ ಮೊತ್ತವನ್ನು 156/6 ತಲುಪಿಸಿದರು. ಸತತ ಎರಡನೇ ಅರ್ಧ ಶತಕ ಬಾರಿಸಿದ ಕೊಹ್ಲಿ ಅಂತಿಮವಾಗಿ 77 ರನ್ ( 46 ಎಸೆತ, 8 ಬೌಂಡರಿ 4 ಸಿಕ್ಸ್ ) ಗಳಿಸಿ ಅಜೇಯರಾಗಿ ಉಳಿದರು. 2 ಸಿಕ್ಸ್ ಬಾರಿಸಿದ ಪಾಂಡ್ಯ 17 ರನ್ ಗಳಿಸಿ ಇನ್ನಿಂಗ್ಸ್​ ಕೊನೆಯ ಎಸೆತದಲ್ಲಿ ಔಟಾದರು.

ಈ ಪಂದ್ಯಕ್ಕೆ ವಾಪಸ್ಸು ಬಂದ ವೇಗದ ಬೌಲರ್ ಮಾರ್ಕ್ ವುಡ್​ 31 ರನ್​ಗೆ 3 ವಿಕೆಟ್​ ಪಡೆದು ಯಶಸ್ವೀ ಬೌಲರ್ ಎನಿಸಿದರು. ಕ್ರಿಸ್ ಜೊರ್ಡನ್ 2 ವಿಕೆಟ್​ ಪಡೆದರು.

ಸರಣಿಯ ನಾಲ್ಕನೇ ಪಂದ್ಯ ಇದೇ ಮೈದಾನದಲ್ಲಿ ಗುರುವಾರದಂದು ನಡೆಯಲಿದೆ. ​

ಇದನ್ನೂ ಓದಿ: India vs England | ಧೋನಿಯೊಂದಿಗೆ ಹೋಲಿಸುವ ಮಟ್ಟಕ್ಕೆ ಪಂತ್ ಮತ್ತು ಕಿಷನ್ ಬೆಳೆದದ್ದು ಹೆಮ್ಮೆಯ ವಿಚಾರ: ಸಬಾ ಕರೀಮ್

Published On - 10:39 pm, Tue, 16 March 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​