AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 3rd test: ಸಿರಾಜ್ ಮೇಲೆ ಚೆಂಡಿನ ದಾಳಿ: ಮುಂದುವರೆದ ಇಂಗ್ಲೆಂಡ್ ಪ್ರೇಕ್ಷಕರ ಪುಂಡಾಟ

Mohammed Siraj: ಲಾರ್ಡ್ಸ್​​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಕೂಡ ಇಂಗ್ಲೆಂಡ್ ಪ್ರೇಕ್ಷಕರು ಇಂತಹ ಪುಂಡಾಟ ನಡೆಸಿದ್ದರು. ಬೌಂಡರಿ ಬಳಿ ಫೀಲ್ಡಿಂಗ್​ನಲ್ಲಿದ್ದ ಕೆಎಲ್ ರಾಹುಲ್ ಮೇಲೆ ಬಾಟಲ್ ಕಾರ್ಕ್​ಗಳನ್ನು ಎಸೆದು ಕೆಣಕಿದ್ದರು.

India vs England 3rd test: ಸಿರಾಜ್ ಮೇಲೆ ಚೆಂಡಿನ ದಾಳಿ: ಮುಂದುವರೆದ ಇಂಗ್ಲೆಂಡ್ ಪ್ರೇಕ್ಷಕರ ಪುಂಡಾಟ
Siraj
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 28, 2021 | 2:28 PM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ (3rd Test) ಪಂದ್ಯ ನಾಲ್ಕನೇ ದಿನದಾಟದತ್ತ ಸಾಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಮ್ ಇಂಡಿಯಾ (Team India) ಕೇವಲ 78 ರನ್​ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಮೊದಲ ದಿನವೇ ಬೌಲಿಂಗ್ ಕೂಡ ಮಾಡಿದ್ದರು. ಅತ್ತ ಕೇವಲ 78 ರನ್​ಗಳಿಗೆ ಸರ್ವಪತನ ಕಂಡಿದ್ದ ಟೀಮ್ ಇಂಡಿಯಾವನ್ನು ಇಂಗ್ಲೆಂಡ್ (England) ಪ್ರೇಕ್ಷಕರು ಹೀಯಾಳಿಸಿದ್ದರು. ಅದರಲ್ಲೂ ಬೌಂಡರಿ ಲೈನ್​ ಬಳಿಯಿದ್ದ ಮೊಹಮ್ಮದ್ ಸಿರಾಜ್ (Mohammed Siraj) ಅವರೊಂದಿಗೆ ನಿಮ್ಮ ಸ್ಕೋರ್ ಎಷ್ಟು ಎಂದು ಪದೇ ಪದೇ ಪಶ್ನಿಸಿ ವ್ಯಂಗ್ಯವಾಡಿದ್ದರು. ಈ ವೇಳೆ 1-0 ಎಂದೇಳುವ ಮೂಲಕ ಖಡಕ್ ತಿರುಗೇಟು ನೀಡಿದ್ದರು ಸಿರಾಜ್. ಆದರೆ ಇಂಗ್ಲೆಂಡ್ ಪ್ರೇಕ್ಷಕರ ಈ ದುರ್ವತನೆ ಅಲ್ಲಿಗೆ ಮುಗಿದಿರಲಿಲ್ಲ.

ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಸಿರಾಜ್ ಮೇಲೆ ಬಾಲ್ ಎಸೆದಿದ್ದಾರೆ. ಆರಂಭದಲ್ಲಿ ವಾಗ್ದಾಳಿ ನಡೆಸುತ್ತಿದ್ದ ಇಂಗ್ಲೆಂಡ್ ಪ್ರೇಕ್ಷಕರು ಬಳಿಕ ಪಾಸ್ಟಿಕ್​ ಚೆಂಡೆಸೆಯುವ ಮೂಲಕ ಕೆಣಕಿದ್ದಾರೆ. ಈ ವಿಷಯವನ್ನು ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಬಹಿರಂಗಪಡಿಸಿದ್ದು, ಪ್ರೇಕ್ಷಕರ ಇಂತಹ ವರ್ತನೆಯಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಿರಾಸೆಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಆಟದ ವೇಳೆ ವಾಗ್ದಾಳಿಗಳು ಸಹಜ. ಆದರೆ ಫೀಲ್ಡರ್​ಗಳ ಮೇಲೆ ವಸ್ತುಗಳನ್ನು ಎಸೆಯುವುದು ಖಂಡಿತ ತಪ್ಪು. ಇದು ಕ್ರಿಕೆಟ್​ ವಿಚಾರದಲ್ಲಿ ಒಳ್ಳೆಯದಲ್ಲ ಎಂದು ಪಂತ್ ಹೇಳಿದರು.

ಇನ್ನು ಲಾರ್ಡ್ಸ್​​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಕೂಡ ಇಂಗ್ಲೆಂಡ್ ಪ್ರೇಕ್ಷಕರು ಇಂತಹ ಪುಂಡಾಟ ನಡೆಸಿದ್ದರು. ಬೌಂಡರಿ ಬಳಿ ಫೀಲ್ಡಿಂಗ್​ನಲ್ಲಿದ್ದ ಕೆಎಲ್ ರಾಹುಲ್ ಮೇಲೆ ಬಾಟಲ್ ಕಾರ್ಕ್​ಗಳನ್ನು ಎಸೆದು ಕೆಣಕಿದ್ದರು. ಇದೀಗ ಸಿರಾಜ್ ಅವರನ್ನು ಇಂಗ್ಲೆಂಡ್ ಪ್ರೇಕ್ಷಕರು ಗುರಿಯಾಗಿಸಿಕೊಂಡಿದ್ದಾರೆ.

ಈ ಹಿಂದೆ ಆಸ್ಟ್ರೇಲಿಯಾ ಸರಣಿ ವೇಳೆ ಆಸೀಸ್‌ ಪ್ರೇಕ್ಷಕರಿಂದ ಸಿರಾಜ್ ಜನಾಂಗೀಯ ನಿಂದನೆಗೆ ಗುರಿಯಾಗಿದ್ದರು. ಆ ಬಳಿಕ ಕಾಂಗರೂ ನಾಡಿನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಸರಣಿಯಲ್ಲಿ ಗರಿಷ್ಠ ವಿಕೆಟ್ ಕಬಳಿ ಭಾರತ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಷ್ಟೇ ಅಲ್ಲದೆ ಲಾರ್ಡ್ಸ್​ನಲ್ಲಿ ನಡೆದ 2ನೇ ಪಂದ್ಯದಲ್ಲಿ 8 ವಿಕೆಟ್ ಉರುಳಿಸಿ ಐತಿಹಾಸಿಕ ಟೆಸ್ಟ್ ಪಂದ್ಯ ಗೆಲ್ಲುವಲ್ಲಿ ಕಾರಣರಾಗಿದ್ದರು. ಇದೀಗ ಭರ್ಜರಿ ಪ್ರದರ್ಶನ ನೀಡಿದ್ದ ಸಿರಾಜ್ ಮೇಲೆ ಇಂಗ್ಲೆಂಡ್ ಪ್ರೇಕ್ಷಕರು ಗುರಿಯಿಟ್ಟುಕೊಂಡಿದ್ದಾರೆ.

ಇದನ್ನೂ ಓದಿ: IPL 2021: ಮಾಜಿ RCB ಆಟಗಾರ, ವಿಶ್ವದ ನಂಬರ್ 1 ಬೌಲರ್ ರಾಜಸ್ಥಾನ್ ರಾಯಲ್ಸ್ ಪಾಲು

ಇದನ್ನೂ ಓದಿ: George Garton: RCB ತಂಡಕ್ಕೆ ಎಂಟ್ರಿ ಕೊಟ್ಟಿರುವ ಜಾರ್ಜ್ ಗಾರ್ಟನ್ ಯಾರು..?

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(India vs England 3rd test: Ball thrown at Mohammed Siraj by Headingley crowd)

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​