AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಅಂತಿಮ ಟೆಸ್ಟ್​ನಲ್ಲಿ ಪಿಚ್​ ಯಾರಿಗೆ ಹೆಚ್ಚು ನೆರವಾಗಲಿದೆ? ಹವಾಮಾನ ಮುನ್ಸೂಚನೆ ಏನು? ಇಲ್ಲಿದೆ ಮಾಹಿತಿ

India vs England: 3ನೇ ಟೆಸ್ಟ್​ ಪಂದ್ಯದಂತೆ ಈ ಪಂದ್ಯದಲ್ಲೂ ಎಲ್ಲಾ ಐದು ದಿನಗಳಲ್ಲಿ ಅಹಮದಾಬಾದ್‌ನಲ್ಲಿ ಬಿಸಿಲು ಇರಲಿದೆ. ಸರಾಸರಿ ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ಇರಲಿದ್ದು. ಯಾವುದೇ ಮಳೆ ಅಡಚಣೆಗಳು ಸಂಭವಿಸುವ ಸಾಧ್ಯತೆಗಳಿಲ್ಲ.

India vs England: ಅಂತಿಮ ಟೆಸ್ಟ್​ನಲ್ಲಿ ಪಿಚ್​ ಯಾರಿಗೆ ಹೆಚ್ಚು ನೆರವಾಗಲಿದೆ? ಹವಾಮಾನ ಮುನ್ಸೂಚನೆ ಏನು? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣ
ಪೃಥ್ವಿಶಂಕರ
|

Updated on:Mar 03, 2021 | 3:35 PM

Share

ಅಹಮದಾಬಾದ್‌: ಮಾರ್ಚ್ 4 ರ ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆಯಲಿರುವ ಪೇಟಿಎಂ ಟೆಸ್ಟ್ ಸರಣಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಎರಡು ದಿನಗಳಲ್ಲಿ ಮುಕ್ತಾಯವಾದ ವಿವಾದಾತ್ಮಕ ಪಿಂಕ್​ ಬಾಲ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಜಯ ಗಳಿಸಿ, ಅಂತಿಮ ಟೆಸ್ಟ್​ಗೆ ಎಲ್ಲಾ ರೀತಿಯ ತಯಾರಿ ನಡೆಸುತ್ತಿದೆ.

3ನೇ ಟೆಸ್ಟ್​ನ ಮೊದಲ ದಿನ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್‌ ತಂಡವನ್ನು 112 ರನ್‌ಗಳಿಗೆ ಆಲ್​ಔಟ್​ ಮಾಡಿದರು. ನಂತರ ಟೀಂ ಇಂಡಿಯಾ ಇನ್ನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಅವರ ಅಮೋಘ ಪ್ರದರ್ಶನ ಟೀಂ ಇಂಡಿಯಾ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸುವಂತೆ ಮಾಡಿತು. ಹಾಗಿದ್ದರೂ, ಇಂಗ್ಲೆಂಡ್​ನ ಜ್ಯಾಕ್ ಲೀಚ್ ಮತ್ತು ಜೋ ರೂಟ್ ಅವರ ಅದ್ಭುತ ಬೌಲಿಂಗ್​ ಟೀಂ ಇಂಡಿಯಾದ ಕುಸಿತಕ್ಕೆ ಕಾರಣವಾಯಿತು. ಪರಿಣಾಮವಾಗಿ ದಿ ಮೆನ್ ಇನ್ ಬ್ಲೂಸ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 33 ರನ್‌ಗಳ ಮುನ್ನಡೆ ಸಾಧಿಸಿತು.

ಆದರೆ 2ನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಪ್ರತಾಪ ತೋರಿ, ಇಂಗ್ಲೆಂಡ್​ ತಂಡವನ್ನು ಕೇವಲ 81 ರನ್​ ಗಳಿಗೆ ಆಲ್​ಔಟ್​ ಮಾಡಿತು. ನಂತರ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಉತ್ತಮ ಆಟವಾಡಿ ಎಂಟು ಓವರ್‌ಗಳಲ್ಲಿ 49 ರನ್‌ಗಳ ಗುರಿ ತಲುಪಿ ಭಾರತಕ್ಕೆ ಜಯ ತಂದುಕೊಟ್ಟರು.

ಆ ಫಲಿತಾಂಶದೊಂದಿಗೆ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಇನ್ನೊಂದು ಮೆಟ್ಟಿಲು ಮಾತ್ರ ಬಾಕಿ ಇದೆ. ಆದರೆ ಇಂಗ್ಲೆಂಡ್ ಫೈನಲ್​ನಿಂದ ಹೊರನಡೆಯಿತು. ಹೀಗಾಗಿ ಇಂಗ್ಲೆಂಡ್​ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಗೊಳಿಸಲು ನೋಡುತ್ತದೆ.

ಹವಾಮಾನ ವರದಿ.. 3ನೇ ಟೆಸ್ಟ್​ ಪಂದ್ಯದಂತೆ ಈ ಪಂದ್ಯದಲ್ಲೂ ಎಲ್ಲಾ ಐದು ದಿನಗಳಲ್ಲಿ ಅಹಮದಾಬಾದ್‌ನಲ್ಲಿ ಬಿಸಿಲು ಇರಲಿದೆ. ಸರಾಸರಿ ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ಇರಲಿದ್ದು. ಯಾವುದೇ ಮಳೆ ಅಡಚಣೆಗಳು ಸಂಭವಿಸುವ ಸಾಧ್ಯತೆಗಳಿಲ್ಲ.

ಪಿಚ್ ವರದಿ.. ನಾಲ್ಕನೇ ಟೆಸ್ಟ್‌ನ ವಿಕೆಟ್ , ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಕಳೆದ ಪಂದ್ಯವಾದ ಪಿಂಕ್​ ಬಾಲ್​ ಟೆಸ್ಟ್​ನಲ್ಲಿ ಪಿಚ್​, ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡಿತ್ತು. ಇದರಿಂದಾಗಿ 2 ತಂಡಗಳಲ್ಲೂ ಸ್ಪಿನ್ನರ್‌ಗಳು ಮಿಂಚಿದರು. ಟೀಂ ಇಂಡಿಯಾ ಪಾಳಯದಲ್ಲಿ ಅಶ್ವಿನ್​ ಹಾಗೂ ಅಕ್ಷರ್​ ಇಂಗ್ಲೆಂಡ್​ ಆಟಗಾರರನ್ನು ಇನ್ನಿಲ್ಲದಂತೆ ಕಾಡಿದ್ದರು. ಹಾಗೆಯೇ ಇಂಗ್ಲೆಂಡ್ ತಂಡದಲ್ಲಿ ಲೀಚ್​ ಹಾಗೂ ನಾಯಕ ರೂಟ್​ ತಮ್ಮ ಕೈಚಳಕ ತೋರಿದ್ದರು. ಅಂತಿಮ ಟೆಸ್ಟ್​ನಲ್ಲಿ ಪಿಚ್​, ಹೆಚ್ಚು ಟರ್ನ್​ ಆಗುವ ಸಾಧ್ಯತೆಯಿಲ್ಲದಿದ್ದರೂ, ನಾಲ್ಕನೇ ಟೆಸ್ಟ್‌ನ ವಿಕೆಟ್ ಮತ್ತೊಮ್ಮೆ ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಎಂದು ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಚೆಂಡು ಮೊದಲನೇ ದಿನದಿಂದ ಬಲಕ್ಕೆ ತಿರುಗಲು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಹೀಗಾಗಿ 2 ತಂಡಗಳಲ್ಲೂ ಹೆಚ್ಚಾಗಿ ಸ್ಪಿನ್ನರ್‌ಗಳನ್ನ ಕಾಣಬಹುದಾಗಿದೆ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಕೇವಲ ಒಬ್ಬ ಸ್ಪಿನ್ನರ್‌ ಜೊತೆಗೆ ಕಣಕ್ಕಿಳಿದಿತ್ತು. ಹೀಗಾಗಿ ಪಿಚ್​ ಹೆಚ್ಚಾಗಿ ಸ್ಪಿನ್ನರ್​ಗಳಿಗೆ ನೆರವಾಗುವುದನ್ನ ಗಮನಿಸಿದ ರೂಟ್​ ಬೌಲಿಂಗ್​ಗೆ ಇಳಿದಿದ್ದರು. ಅದರ ಪ್ರತಿಫಲವನ್ನು ಪಡೆದರು. ಆದರೆ ಜಾಣ್ಮೆಯ ನಡೆ ಪ್ರದರ್ಶಿಸಿದ ಟೀಂ ಇಂಡಿಯಾ ಮೂವರು ಸ್ಪಿನ್ನರ್​ಗಳನ್ನ ಕಣಕ್ಕಿಳಿಸಿ ಪಂದ್ಯವನ್ನ ಗೆದ್ದುಕೊಂಡಿತ್ತು.

Published On - 3:29 pm, Wed, 3 March 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ