AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಅಂತಿಮ ಟೆಸ್ಟ್​ನಲ್ಲಿ ಪಿಚ್​ ಯಾರಿಗೆ ಹೆಚ್ಚು ನೆರವಾಗಲಿದೆ? ಹವಾಮಾನ ಮುನ್ಸೂಚನೆ ಏನು? ಇಲ್ಲಿದೆ ಮಾಹಿತಿ

India vs England: 3ನೇ ಟೆಸ್ಟ್​ ಪಂದ್ಯದಂತೆ ಈ ಪಂದ್ಯದಲ್ಲೂ ಎಲ್ಲಾ ಐದು ದಿನಗಳಲ್ಲಿ ಅಹಮದಾಬಾದ್‌ನಲ್ಲಿ ಬಿಸಿಲು ಇರಲಿದೆ. ಸರಾಸರಿ ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ಇರಲಿದ್ದು. ಯಾವುದೇ ಮಳೆ ಅಡಚಣೆಗಳು ಸಂಭವಿಸುವ ಸಾಧ್ಯತೆಗಳಿಲ್ಲ.

India vs England: ಅಂತಿಮ ಟೆಸ್ಟ್​ನಲ್ಲಿ ಪಿಚ್​ ಯಾರಿಗೆ ಹೆಚ್ಚು ನೆರವಾಗಲಿದೆ? ಹವಾಮಾನ ಮುನ್ಸೂಚನೆ ಏನು? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣ
ಪೃಥ್ವಿಶಂಕರ
|

Updated on:Mar 03, 2021 | 3:35 PM

Share

ಅಹಮದಾಬಾದ್‌: ಮಾರ್ಚ್ 4 ರ ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆಯಲಿರುವ ಪೇಟಿಎಂ ಟೆಸ್ಟ್ ಸರಣಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಎರಡು ದಿನಗಳಲ್ಲಿ ಮುಕ್ತಾಯವಾದ ವಿವಾದಾತ್ಮಕ ಪಿಂಕ್​ ಬಾಲ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಜಯ ಗಳಿಸಿ, ಅಂತಿಮ ಟೆಸ್ಟ್​ಗೆ ಎಲ್ಲಾ ರೀತಿಯ ತಯಾರಿ ನಡೆಸುತ್ತಿದೆ.

3ನೇ ಟೆಸ್ಟ್​ನ ಮೊದಲ ದಿನ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್‌ ತಂಡವನ್ನು 112 ರನ್‌ಗಳಿಗೆ ಆಲ್​ಔಟ್​ ಮಾಡಿದರು. ನಂತರ ಟೀಂ ಇಂಡಿಯಾ ಇನ್ನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಅವರ ಅಮೋಘ ಪ್ರದರ್ಶನ ಟೀಂ ಇಂಡಿಯಾ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸುವಂತೆ ಮಾಡಿತು. ಹಾಗಿದ್ದರೂ, ಇಂಗ್ಲೆಂಡ್​ನ ಜ್ಯಾಕ್ ಲೀಚ್ ಮತ್ತು ಜೋ ರೂಟ್ ಅವರ ಅದ್ಭುತ ಬೌಲಿಂಗ್​ ಟೀಂ ಇಂಡಿಯಾದ ಕುಸಿತಕ್ಕೆ ಕಾರಣವಾಯಿತು. ಪರಿಣಾಮವಾಗಿ ದಿ ಮೆನ್ ಇನ್ ಬ್ಲೂಸ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 33 ರನ್‌ಗಳ ಮುನ್ನಡೆ ಸಾಧಿಸಿತು.

ಆದರೆ 2ನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಪ್ರತಾಪ ತೋರಿ, ಇಂಗ್ಲೆಂಡ್​ ತಂಡವನ್ನು ಕೇವಲ 81 ರನ್​ ಗಳಿಗೆ ಆಲ್​ಔಟ್​ ಮಾಡಿತು. ನಂತರ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಉತ್ತಮ ಆಟವಾಡಿ ಎಂಟು ಓವರ್‌ಗಳಲ್ಲಿ 49 ರನ್‌ಗಳ ಗುರಿ ತಲುಪಿ ಭಾರತಕ್ಕೆ ಜಯ ತಂದುಕೊಟ್ಟರು.

ಆ ಫಲಿತಾಂಶದೊಂದಿಗೆ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಇನ್ನೊಂದು ಮೆಟ್ಟಿಲು ಮಾತ್ರ ಬಾಕಿ ಇದೆ. ಆದರೆ ಇಂಗ್ಲೆಂಡ್ ಫೈನಲ್​ನಿಂದ ಹೊರನಡೆಯಿತು. ಹೀಗಾಗಿ ಇಂಗ್ಲೆಂಡ್​ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಗೊಳಿಸಲು ನೋಡುತ್ತದೆ.

ಹವಾಮಾನ ವರದಿ.. 3ನೇ ಟೆಸ್ಟ್​ ಪಂದ್ಯದಂತೆ ಈ ಪಂದ್ಯದಲ್ಲೂ ಎಲ್ಲಾ ಐದು ದಿನಗಳಲ್ಲಿ ಅಹಮದಾಬಾದ್‌ನಲ್ಲಿ ಬಿಸಿಲು ಇರಲಿದೆ. ಸರಾಸರಿ ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ಇರಲಿದ್ದು. ಯಾವುದೇ ಮಳೆ ಅಡಚಣೆಗಳು ಸಂಭವಿಸುವ ಸಾಧ್ಯತೆಗಳಿಲ್ಲ.

ಪಿಚ್ ವರದಿ.. ನಾಲ್ಕನೇ ಟೆಸ್ಟ್‌ನ ವಿಕೆಟ್ , ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಕಳೆದ ಪಂದ್ಯವಾದ ಪಿಂಕ್​ ಬಾಲ್​ ಟೆಸ್ಟ್​ನಲ್ಲಿ ಪಿಚ್​, ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡಿತ್ತು. ಇದರಿಂದಾಗಿ 2 ತಂಡಗಳಲ್ಲೂ ಸ್ಪಿನ್ನರ್‌ಗಳು ಮಿಂಚಿದರು. ಟೀಂ ಇಂಡಿಯಾ ಪಾಳಯದಲ್ಲಿ ಅಶ್ವಿನ್​ ಹಾಗೂ ಅಕ್ಷರ್​ ಇಂಗ್ಲೆಂಡ್​ ಆಟಗಾರರನ್ನು ಇನ್ನಿಲ್ಲದಂತೆ ಕಾಡಿದ್ದರು. ಹಾಗೆಯೇ ಇಂಗ್ಲೆಂಡ್ ತಂಡದಲ್ಲಿ ಲೀಚ್​ ಹಾಗೂ ನಾಯಕ ರೂಟ್​ ತಮ್ಮ ಕೈಚಳಕ ತೋರಿದ್ದರು. ಅಂತಿಮ ಟೆಸ್ಟ್​ನಲ್ಲಿ ಪಿಚ್​, ಹೆಚ್ಚು ಟರ್ನ್​ ಆಗುವ ಸಾಧ್ಯತೆಯಿಲ್ಲದಿದ್ದರೂ, ನಾಲ್ಕನೇ ಟೆಸ್ಟ್‌ನ ವಿಕೆಟ್ ಮತ್ತೊಮ್ಮೆ ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಎಂದು ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಚೆಂಡು ಮೊದಲನೇ ದಿನದಿಂದ ಬಲಕ್ಕೆ ತಿರುಗಲು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಹೀಗಾಗಿ 2 ತಂಡಗಳಲ್ಲೂ ಹೆಚ್ಚಾಗಿ ಸ್ಪಿನ್ನರ್‌ಗಳನ್ನ ಕಾಣಬಹುದಾಗಿದೆ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಕೇವಲ ಒಬ್ಬ ಸ್ಪಿನ್ನರ್‌ ಜೊತೆಗೆ ಕಣಕ್ಕಿಳಿದಿತ್ತು. ಹೀಗಾಗಿ ಪಿಚ್​ ಹೆಚ್ಚಾಗಿ ಸ್ಪಿನ್ನರ್​ಗಳಿಗೆ ನೆರವಾಗುವುದನ್ನ ಗಮನಿಸಿದ ರೂಟ್​ ಬೌಲಿಂಗ್​ಗೆ ಇಳಿದಿದ್ದರು. ಅದರ ಪ್ರತಿಫಲವನ್ನು ಪಡೆದರು. ಆದರೆ ಜಾಣ್ಮೆಯ ನಡೆ ಪ್ರದರ್ಶಿಸಿದ ಟೀಂ ಇಂಡಿಯಾ ಮೂವರು ಸ್ಪಿನ್ನರ್​ಗಳನ್ನ ಕಣಕ್ಕಿಳಿಸಿ ಪಂದ್ಯವನ್ನ ಗೆದ್ದುಕೊಂಡಿತ್ತು.

Published On - 3:29 pm, Wed, 3 March 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್