AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ
ಪಂದ್ಯದ ವ್ಯಕ್ತಿ ಭುವನೇಶ್ವರ್ ಕುಮಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 20, 2021 | 11:25 PM

Share

ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟಿ20 ಸರಣಿಯ 5ನೇ ಮತ್ತು ಕೊನೆಯ ಪಂದ್ಯದಲ್ಲಿ ಪ್ರವಾಸಿ ತಂಡವನ್ನು ಸುಲಭವಾಗಿ 36 ರನ್​ಗಳಿಂದ ಸೋಲಿಸಿದ ಭಾರತ ಸರಣಿಯನ್ನು 3-2 ಅಂತರದಿಂದ ತನ್ನದಾಗಿಸಿಕೊಂಡಿದೆ. ಗೆಲ್ಲಲು 225ರನ್ ಗಳಿಸಬೇಕಿದ್ದ ಆಂಗ್ಲರಿಗೆ ನಿಗದಿತ 20 ಓವರ್​ಗಳಲ್ಲಿ 188/8 ಗಳಿಸಲು ಮಾತ್ರ ಸಾಧ್ಯವಾಯಿತು.  ಇಂಗ್ಲೆಂಡ್ ಪರ ಕೇವಲ ದಾವಿದ್ ಮಲಾನ್ (68, 46 ಎಸೆತ 9 ಬೌಂಡರಿ 2 ಸಿಕ್ಸ್) ಮತ್ತು ಜೋಸ್ ಬಟ್ಲರ್ 52 ( 34 ಎಸೆತ 2 ಬೌಂಡರಿ 4 ಸಿಕ್ಸ್) ಮಾತ್ರ ಹೋರಾಟ ಪ್ರದರ್ಶಿಸಿದರು. 45 ರನ್​ಗ​ಳಿಗೆ 3 ವಿಕೆಟ್​   ಶಾರ್ದುಲ್ ಠಾಕೂರ್ ಭಾರತದ ಯಶಸ್ವೀ ಬೌಲರ್ ಎನಿಸಿದರು.

ಆದರೆ, ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು.

ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿಶ್ದ ನಂಬರ್ ವನ್ ತಂಡ ಎನಿಸಿದೆ. ಮೂರನೇ ಌಂಕಿನ ಭಾರತ ಅದನ್ನು ಸೋಲಿಸಿ ಅಕ್ಟೋಬರ್-ನವೆಂಬರ್​ ನಡೆಯುವ ಟಿ20 ವಿಶ್ವಕಪ್​ಗೆ ಮುಂಚೆ ತನ್ನ ಆತ್ಮವಿಶ್ವಾಸವನ್ನು ಮುಗಿಲೆತ್ತರಕ್ಕೆ ಏರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಭಾರತ 224/2 ಮೊತ್ತ ಗಳಿಸಿತು. ನಾಯಕ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ ಅಜೇಯ 80 ರನ್ (7 ಬೌಂಡರಿ 2 ಸಿಕ್ಸರ್) ಬಾರಿಸಿದರು. ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮ ಕೇವಲ 34 ಎಸೆತಗಳಲ್ಲಿ 64 ರನ್ (4 ಬೌಂಡರಿ 5 ಸಿಕ್ಸ್ ) ಬಾರಿಸಿದರು, ನಾಯಕ ಮತ್ತು ಉಪನಾಯಕ ಮೊದಲ ವಿಕೆಟ್​ಗೆ 9 ಓವರ್​ಗಳಲ್ಲಿ 94 ರನ್ ಸೇರಿಸಿದರು .

ಮೂರನೇ ಕ್ರಮಾಂಕದಲ್ಲಿ ಆಡಲು ಬಂದ  ಸೂರ್ಯಕುಮಾರ್ ಯಾದವ್ 17 ಎಸೆತಗಳಲ್ಲಿ 32 ರನ್ ಗಳಿಸಿದರು, ಅವರ ಸ್ಕೋರಿನಲ್ಲಿ 3 ಬೌಂಡರಿ 2 ಸಿಕ್ಸ್ ಇದ್ದವು.

ಈ ಪಂದ್ಯಕ್ಕೆ ರಾಹುಲ್ ಅವರನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ವೇಗದ ಬೌಲರ್ ಟಿ ನಟರಾಜನ್ ಅವರನ್ನು ಆಡಿಸಲಾಯಿತು.

ಅಂತಿಮ ಸ್ಕೋರ್:

ಭಾರತ: 224/2 (20 ಓವರ್​ಗಳಲ್ಲಿ)

ಇಂಗ್ಲೆಂಡ್: 188/8 (20 ಓವರ್​ಗಳಲ್ಲಿ)

Published On - 10:55 pm, Sat, 20 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ