AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ
ಪಂದ್ಯದ ವ್ಯಕ್ತಿ ಭುವನೇಶ್ವರ್ ಕುಮಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 20, 2021 | 11:25 PM

Share

ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟಿ20 ಸರಣಿಯ 5ನೇ ಮತ್ತು ಕೊನೆಯ ಪಂದ್ಯದಲ್ಲಿ ಪ್ರವಾಸಿ ತಂಡವನ್ನು ಸುಲಭವಾಗಿ 36 ರನ್​ಗಳಿಂದ ಸೋಲಿಸಿದ ಭಾರತ ಸರಣಿಯನ್ನು 3-2 ಅಂತರದಿಂದ ತನ್ನದಾಗಿಸಿಕೊಂಡಿದೆ. ಗೆಲ್ಲಲು 225ರನ್ ಗಳಿಸಬೇಕಿದ್ದ ಆಂಗ್ಲರಿಗೆ ನಿಗದಿತ 20 ಓವರ್​ಗಳಲ್ಲಿ 188/8 ಗಳಿಸಲು ಮಾತ್ರ ಸಾಧ್ಯವಾಯಿತು.  ಇಂಗ್ಲೆಂಡ್ ಪರ ಕೇವಲ ದಾವಿದ್ ಮಲಾನ್ (68, 46 ಎಸೆತ 9 ಬೌಂಡರಿ 2 ಸಿಕ್ಸ್) ಮತ್ತು ಜೋಸ್ ಬಟ್ಲರ್ 52 ( 34 ಎಸೆತ 2 ಬೌಂಡರಿ 4 ಸಿಕ್ಸ್) ಮಾತ್ರ ಹೋರಾಟ ಪ್ರದರ್ಶಿಸಿದರು. 45 ರನ್​ಗ​ಳಿಗೆ 3 ವಿಕೆಟ್​   ಶಾರ್ದುಲ್ ಠಾಕೂರ್ ಭಾರತದ ಯಶಸ್ವೀ ಬೌಲರ್ ಎನಿಸಿದರು.

ಆದರೆ, ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು.

ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿಶ್ದ ನಂಬರ್ ವನ್ ತಂಡ ಎನಿಸಿದೆ. ಮೂರನೇ ಌಂಕಿನ ಭಾರತ ಅದನ್ನು ಸೋಲಿಸಿ ಅಕ್ಟೋಬರ್-ನವೆಂಬರ್​ ನಡೆಯುವ ಟಿ20 ವಿಶ್ವಕಪ್​ಗೆ ಮುಂಚೆ ತನ್ನ ಆತ್ಮವಿಶ್ವಾಸವನ್ನು ಮುಗಿಲೆತ್ತರಕ್ಕೆ ಏರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಭಾರತ 224/2 ಮೊತ್ತ ಗಳಿಸಿತು. ನಾಯಕ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ ಅಜೇಯ 80 ರನ್ (7 ಬೌಂಡರಿ 2 ಸಿಕ್ಸರ್) ಬಾರಿಸಿದರು. ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮ ಕೇವಲ 34 ಎಸೆತಗಳಲ್ಲಿ 64 ರನ್ (4 ಬೌಂಡರಿ 5 ಸಿಕ್ಸ್ ) ಬಾರಿಸಿದರು, ನಾಯಕ ಮತ್ತು ಉಪನಾಯಕ ಮೊದಲ ವಿಕೆಟ್​ಗೆ 9 ಓವರ್​ಗಳಲ್ಲಿ 94 ರನ್ ಸೇರಿಸಿದರು .

ಮೂರನೇ ಕ್ರಮಾಂಕದಲ್ಲಿ ಆಡಲು ಬಂದ  ಸೂರ್ಯಕುಮಾರ್ ಯಾದವ್ 17 ಎಸೆತಗಳಲ್ಲಿ 32 ರನ್ ಗಳಿಸಿದರು, ಅವರ ಸ್ಕೋರಿನಲ್ಲಿ 3 ಬೌಂಡರಿ 2 ಸಿಕ್ಸ್ ಇದ್ದವು.

ಈ ಪಂದ್ಯಕ್ಕೆ ರಾಹುಲ್ ಅವರನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ವೇಗದ ಬೌಲರ್ ಟಿ ನಟರಾಜನ್ ಅವರನ್ನು ಆಡಿಸಲಾಯಿತು.

ಅಂತಿಮ ಸ್ಕೋರ್:

ಭಾರತ: 224/2 (20 ಓವರ್​ಗಳಲ್ಲಿ)

ಇಂಗ್ಲೆಂಡ್: 188/8 (20 ಓವರ್​ಗಳಲ್ಲಿ)

Published On - 10:55 pm, Sat, 20 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ