AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England | 2ನೇ ಟೆಸ್ಟ್​ ಗೆದ್ದು ಬೀಗಿದ ಟೀಂ ಇಂಡಿಯಾ.. ಮಿಂಚಿದ ಅಶ್ವಿನ್​, ಅಕ್ಷರ್​; 1-1 ರಿಂದ ಸರಣಿ ಸಮ..!

India vs England: 2ನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶತಕ ಸಿಡಿಸಿ ಮಿಂಚಿದ ಅಶ್ವಿನ್​, ಬೌಲಿಂಗ್​ನಲ್ಲೂ ಕಮಾಲ್​ ಮಾಡಿದರು. 2ನೇ ಇನ್ನಿಂಗ್ಸ್​ನಲ್ಲಿ 106 ರನ್ ಸಿಡಿಸಿದ ಅಶ್ವಿನ್​ 3 ವಿಕೆಟ್​ ಪಡೆದು ಮಿಂಚಿದರು.

India vs England | 2ನೇ ಟೆಸ್ಟ್​ ಗೆದ್ದು ಬೀಗಿದ ಟೀಂ ಇಂಡಿಯಾ.. ಮಿಂಚಿದ ಅಶ್ವಿನ್​, ಅಕ್ಷರ್​; 1-1 ರಿಂದ ಸರಣಿ ಸಮ..!
ಗೆಲುವಿನ ಸಂಭ್ರಮದಲ್ಲಿ ಟೀಂ ಇಂಡಿಯಾ
ಪೃಥ್ವಿಶಂಕರ
| Edited By: |

Updated on:Feb 17, 2021 | 10:10 AM

Share

ಚೆನ್ನೈ: ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಇಂಡಿಯಾ- ಇಂಗ್ಲೆಂಡ್‌ ನಡುವಿನ 4 ಟೆಸ್ಟ್​ ಪಂದ್ಯಗಳ ಸರಣಿಯ 2ನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್​ನ 2ನೇ ಇನ್ನಿಂಗ್ಸ್ ಆರಂಭದಿಂದಲೂ ಆರ್ಭಟ ತೋರಿದ ಟೀಂ ಇಂಡಿಯಾ ವೇಗಿಗಳು ಇಂಗ್ಲೆಂಡ್ ತಂಡವನ್ನು ಕಡಿಮೆ ರನ್​ಗಳಿಗೆ ಆಲ್​ಔಟ್​ ಮಾಡುವದರಲ್ಲಿ ಯಶಸ್ವಿಯಾದರು. ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶತಕ ಸಿಡಿಸಿ ಮಿಂಚಿದ ಅಶ್ವಿನ್​, ಬೌಲಿಂಗ್​ನಲ್ಲೂ ಕಮಾಲ್​ ಮಾಡಿದರು. 2ನೇ ಇನ್ನಿಂಗ್ಸ್​ನಲ್ಲಿ 106 ರನ್ ಸಿಡಿಸಿದ ಅಶ್ವಿನ್​ 3 ವಿಕೆಟ್​ ಪಡೆದು ಮಿಂಚಿದರು. ಹಾಗೆಯೇ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅಕ್ಸಾರ್​ ಪಟೇಲ್​ 5 ವಿಕೆಟ್​ ಪಡೆದು ಮಿಂಚಿದರು. ಉಳಿದಂತೆ ಯಾದವ್​ 2 ವಿಕೆಟ್​ ಪಡೆದರೆ, ವೇಗದ ಬೌಲರ್​ಗಳಿಗೆ ಯಾವುದೇ ವಿಕೆಟ್​ ದಕ್ಕಲಿಲ್ಲ.

ಮೊದಲ ಇನ್ನಿಂಗ್ಸ್​ ಇಂಡಿಯಾ 329 ರನ್​.. ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್​ಗೆ 2ನೇ ಇನ್ನಿಂಗ್ಸ್​ನಲ್ಲಿ 482 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು. ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್​ ಶರ್ಮಾ (161 ರನ್​) ರಹಾನೆ (67 ರನ್​) ಹಾಗೂ ರಿಶಭ್​ ಪಂತ್​ (58 ರನ್​) ಅಬ್ಬರದ ಬ್ಯಾಟಿಂಗ್​ ನೆರವಿನಿಂದ 329 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಬ್ಯಾಟಿಂಗ್​ ಆರಂಭಿಸಿದ ಇಂಗ್ಲೆಂಡ್ ತಂಡ 134 ರನ್​ಗಳಿಗೆ ಆಲ್​ಔಟ್​ ಆಗುವ ಮೂಲಕ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿತು. ಇಂಗ್ಲೆಂಡ್ ಪರ ಫೋಕ್ಸ್​ ಅವರು ಭಾರಿಸಿದ 42 ರನ್​ಗಳೇ ತಂಡದ ಅತ್ಯಧಿಕ ರನ್​ ಆಗಿತ್ತು.

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಅಶ್ವಿನ್​ 5 ವಿಕೆಟ್​ ಪಡೆದು ಮಿಂಚಿದರೆ, ಉಳಿದಂತೆ ಇಶಾಂತ್​ ಶರ್ಮಾ ಹಾಗೂ ಅಕ್ಸಾರ್​ ಪಟೇಲ್​ ತಲಾ 2 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು. ಹಾಗೆಯೇ ವೇಗಿ ಸಿರಾಜ್​ ಸಹ 1 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು. ಹೀಗಾಗಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 195 ರನ್​ಗಳ ಬೃಹತ್​ ಮುನ್ನಡೆ ಪಡೆಯಿತು. 5 ವಿಕೆಟ್​ ಪಡೆದು ಮಿಂಚಿದ ಅಶ್ವಿನ್​ ಮೊದಲ ಇನ್ನಿಂಗ್ಸ್​ನ ಮುನ್ನಡೆಗೆ ಪ್ರಮುಖ ಕಾರಣಕರ್ತರಾದರು.

286 ರನ್​ಗೆ 2ನೇ ಇನ್ನಿಂಗ್ಸ್ ಮುಗಿಸಿದ್ದ ಭಾರತ.. 195 ರನ್​ಗಳ ಬೃಹತ್​ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಹೀಗಾಗಿ ಟೀಂ ಇಂಡಿಯಾ 100 ರನ್​ ಗಳಿಸುವಷ್ಟರಲ್ಲೇ ಪ್ರಮುಖ ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ಕೊಹ್ಲಿ ಅರ್ಧಶತಕ ಹಾಗೂ ಆಲ್​ರೌಂಡರ್​ ಅಶ್ವಿನ್​ ಅವರ ಶತಕದ ನೆರವಿನಿಂದಾಗಿ 286 ರನ್​ ಗಳಿಸಿತು. ಕೊನೆಯ ವಿಕೆಟ್​ಗೆ ಅಶ್ವಿನ್​, ಸಿರಾಜ್​ ಜೊತೆಗೂಡಿ 49 ರನ್​ಗಳ ಜೊತೆಯಾಟ ಆಡಿದ್ದು 2ನೇ ಇನ್ನಿಂಗ್ಸ್​ನ ಮುಖ್ಯಾಂಶ ಆಗಿತ್ತು. ಆ ಸಮಯದಲ್ಲೇ ಅಶ್ವಿನ್​ ಶತಕ ಸಹ ಪೂರ್ಣಗೊಳಿಸಿದರು.

2ನೇ ಇನ್ನಿಂಗ್ಸ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಅಶ್ವಿನ್​ ಬೌಲಿಂಗ್​ನಲ್ಲೂ ಕಮಾಲ್​ ಮಾಡಿದರು. ಆರಂಭದಿಂದಲೂ ಇಂಗ್ಲೆಂಡ್ ದಾಂಡಿಗರನ್ನು ಕಾಡಿದ ಅಶ್ವಿನ್​ ಪ್ರಮುಖ 3 ವಿಕೆಟ್​ ತೆಗೆದು ಇಂಗ್ಲೆಂಡ್ ಬ್ಯಾಟಿಂಗ್​ ಬೆನ್ನೇಲುಬ್ಬನ್ನ ಮುರಿದರು. ಅಶ್ವಿನ್​ಗೆ ಉತ್ತಮ ಸಾಥ್​ ನೀಡಿದ ಅಕ್ಸಾರ್​ ಪಟೇಲ್​ ಮೊದಲ ಟೆಸ್ಟ್​ನಲ್ಲಿಯೇ 5 ವಿಕೆಟ್ ಪಡೆದು ಮಿಂಚಿದರು. ಈ ಇಬ್ಬರು ಸ್ಪಿನ್ನರ್‌ಗಳ ನೆರವಿನಿಂದ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾದಿಸಿತು.

Published On - 12:40 pm, Tue, 16 February 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್