AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಕನ್ನಡಿಗ ಕೆ.ಎಲ್​ ರಾಹುಲ್​ ಸೂಪರ್‌ಮ್ಯಾನ್ ಫೀಲ್ಡಿಂಗ್​ಗೆ ನೆಟ್ಟಿಗರಿಂದ ಶಹಬ್ಬಾಸ್​ಗಿರಿ.. ವಿಡಿಯೋ ನೋಡಿ!

India vs England: ಅಕ್ಷರ್ ಪಟೇಲ್ ಅವರ ಈ ಓವರ್‌ನ ಮೊದಲ ಎಸೆತವನ್ನು ಜೋಸ್ ಬಟ್ಲರ್ ಲಾಂಗ್ ಆನ್‌ನಲ್ಲಿ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಅಲ್ಲೇ ಇದ್ದ ಕೆ.ಎಲ್.ರಾಹುಲ್ ಗಾಳಿಯಲ್ಲಿ ಹಾರಿ ಸಿಕ್ಸರ್​ ಲೈನ್​ ಒಳಗೆ ಬೀಳುತ್ತಿದ್ದ ಬಾಲನ್ನು ಹಿಡಿಯಲು ಯತ್ನಿಸಿದರು.

India vs England: ಕನ್ನಡಿಗ ಕೆ.ಎಲ್​ ರಾಹುಲ್​ ಸೂಪರ್‌ಮ್ಯಾನ್ ಫೀಲ್ಡಿಂಗ್​ಗೆ ನೆಟ್ಟಿಗರಿಂದ ಶಹಬ್ಬಾಸ್​ಗಿರಿ.. ವಿಡಿಯೋ ನೋಡಿ!
ಕೆ.ಎಲ್. ರಾಹುಲ್
ಪೃಥ್ವಿಶಂಕರ
|

Updated on: Mar 13, 2021 | 5:38 PM

Share

ಅಹಮದಬಾದ್​: ಇಂಗ್ಲೆಂಡ್ ವಿರುದ್ಧದ ಮೊದಲ ಟಿ 20 ಯಲ್ಲಿ ಟೀಮ್ ಇಂಡಿಯಾ ಸೋತಿದೆ. ಈ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಮೇಲೆ ಬಾರಿ ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ರಾಹುಲ್​ ಯಾವುದೇ ಬಿಗ್​ ಸ್ಕೋರ್ ಗಳಿಸುವಲ್ಲಿ ವಿಫಲರಾದರು. ಅಭಿಮಾನಿಗಳು ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಎಲ್ಲದರ ಹೊರತಾಗಿಯೂ, ಕೆಎಲ್ ರಾಹುಲ್ ಮಾಡಿದ ಆ ಅದ್ಭುತ ಫೀಲ್ಡಿಂಗ್​ ಈಗ ಎಲ್ಲಾ ಕ್ರಿಕೆಟ್​ ಪ್ರೇಮಿಗಳ ಹೃದಯ ಗೆದ್ದಿದೆ. ಅಹಮದಾಬಾದ್ ನೆಲದಲ್ಲಿ ರಾಹುಲ್ ಮಾಡಿದ ಈ ಸಾಧನೆಯಿಂದಾಗಿ, ರಾಹುಲ್​ ಅವರನ್ನು ಅಭಿಮಾನಿಗಳು ಟೀಂ ಇಂಡಿಯಾದ ಸೂಪರ್‌ಮ್ಯಾನ್ ಎಂದು ಕರೆಯಲಾರಂಭಿಸಿದ್ದಾರೆ.

ರಾಹುಲ್ ಅವರ ಕೊಡುಗೆ ಕೇವಲ 1 ರನ್.. ವಾಸ್ತವವಾಗಿ, ಇಂಗ್ಲೆಂಡ್ ವಿರುದ್ಧದ ಮೊದಲ ಟಿ 20 ಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಅಷ್ಟು ಉತ್ತಮವಾಗಿರಲಿಲ್ಲ. 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡ ಭಾರತ ಕೇವಲ 124 ರನ್ ಗಳಿಸಿತು. ಇದರಲ್ಲಿ ತಂಡಕ್ಕೆ ಕೆಎಲ್ ರಾಹುಲ್ ಅವರ ಕೊಡುಗೆ ಕೇವಲ 1 ರನ್ ಮಾತ್ರ. ಇದಕ್ಕೆ ಪ್ರತಿಕ್ರಿಯೆಯಾಗಿ, ಇಂಗ್ಲೆಂಡ್ ತಂಡ ಭಾರತ ನಿಗದಿಪಡಿಸಿದ ಗುರಿಯನ್ನು ಕೇವಲ 15.3 ಓವರ್​ಗಳಲ್ಲೇ ತಲುಪಿತು. ಆದರೆ ಅವರ ಇನ್ನಿಂಗ್ಸ್ ಸಮಯದಲ್ಲಿ, ಕೆಎಲ್ ರಾಹುಲ್ ಮಾಡಿದ ಆ ಅದ್ಭುತ ಫೀಲ್ಡಿಂಗ್​ ಎದುರಾಳಿ ತಂಡದ ಆಟಗಾರರ ಹೃದವನ್ನೇ ಗೆದ್ದಿದೆ.

ಮೊದಲ ಟಿ20 ಯಲ್ಲಿ ಸೂಪರ್‌ಮ್ಯಾನ್ ಅದ ಕೆಎಲ್ ರಾಹುಲ್ ಈ ಇಡೀ ಘಟನೆ ನಡೆದಿದ್ದು ಇಂಗ್ಲೆಂಡ್‌ ಇನ್ನಿಂಗ್ಸ್‌ನ 5 ನೇ ಓವರ್‌ನಲ್ಲಿ. ಅಕ್ಷರ್ ಪಟೇಲ್ ಅವರ ಈ ಓವರ್‌ನ ಮೊದಲ ಎಸೆತವನ್ನು ಜೋಸ್ ಬಟ್ಲರ್ ಲಾಂಗ್ ಆನ್‌ನಲ್ಲಿ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಅಲ್ಲೇ ಇದ್ದ ಕೆ.ಎಲ್.ರಾಹುಲ್ ಗಾಳಿಯಲ್ಲಿ ಹಾರಿ ಸಿಕ್ಸರ್​ ಲೈನ್​ ಒಳಗೆ ಬೀಳುತ್ತಿದ್ದ ಬಾಲನ್ನು ಹಿಡಿಯಲು ಯತ್ನಿಸಿದರು. ಆದರೆ ಬಾಲ್​ ಬಹುತೇಕ ಸಿಕ್ಸರ್‌ ಲೈನ್​ ಕಡೆ ಬೀಳುವಂತಿತ್ತು.

ಇದನ್ನು ಗಮನಿಸಿದ ರಾಹುಲ್​ ಕೂಡಲೇ ಬಾಲನ್ನು ಹಿಡಿದು ಮೈದಾನದೊಳಕ್ಕೆ ಎಸೆಯುತ್ತಾರೆ. ಇನ್ನೊಂದು ಕುತೂಹಲಕಾರಿ ಸಂಗತಿಯೆಂದರೆ, ರಾಹುಲ್​ ಬಾಲನ್ನು ಮೈದಾನಕ್ಕೆ ಎಸೆಯುವ ವೇಳೆ ಅವರಿನ್ನು ನೆಲವನ್ನೇ ಮುಟ್ಟಿರುವುದಿಲ್ಲ. ಇನ್ನೂ ಗಾಳಿಯಲ್ಲಿರುವಾಗಲೇ ರಾಹುಲ್​ ಬಾಲನ್ನು ಹಿಡಿದು, ಮೈದಾನದೊಳಕ್ಕೆ ಎಸೆದು ತಂಡಕ್ಕೆ 5 ರನ್​ ಸೇವ್​ ಮಾಡುತ್ತಾರೆ. ರಾಹುಲ್​ ಅವರ ಈ ಅದ್ಭುತ ಫೀಲ್ಡಿಂಗ್​ ನೋಡಿದ ನಾಯಕ ಕೊಹ್ಲಿ ಚಪಾಳೆ ತಟ್ಟಿ ಅಭಿನಂದಿಸುತ್ತಾರೆ.

ಫೀಲ್ಡಿಂಗ್ ಓಕೆ, ಬ್ಯಾಟಿಂಗ್​ ಬಲವಾಗಬೇಕಿದೆ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಕೆ.ಎಲ್.ರಾಹುಲ್ ಟಿ 20 ಯಲ್ಲಿ ಭಾರತದ ಅತಿ ಹೆಚ್ಚು ಸರಾಸರಿ ಹೊಂದಿರುವ ಬ್ಯಾಟ್ಸ್‌ಮನ್ ಆಗಿದ್ದಾರೆ. ಮೊದಲ ಟಿ20 ಯಲ್ಲಿ ಅವರ ಬ್ಯಾಟ್​ನಿಂದ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ, ಎರಡನೇ ಟಿ20 ಯಲ್ಲಿ ಟೀಮ್ ಇಂಡಿಯಾ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಹೀಗಾಗಿ ರಾಹುಲ್​ ಅಬ್ಬರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಇದನ್ನೂ ಓದಿ: India vs England: ರೋಹಿತ್​ ಇಲ್ಲದ ಕ್ರಿಕೆಟ್​ ಪಂದ್ಯವನ್ನು ವೀಕ್ಷಿಸುವುದಕ್ಕಿಂತ ಟಿವಿ ಆಫ್​ ಮಾಡುವುದೇ ಒಳಿತು: ವಿರೇಂದ್ರ ಸೆಹ್ವಾಗ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು