AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರೋಹಿತ್​ ಇಲ್ಲದ ಕ್ರಿಕೆಟ್​ ಪಂದ್ಯವನ್ನು ವೀಕ್ಷಿಸುವುದಕ್ಕಿಂತ ಟಿವಿ ಆಫ್​ ಮಾಡುವುದೇ ಒಳಿತು: ವಿರೇಂದ್ರ ಸೆಹ್ವಾಗ್

india vs england: ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಯಲ್ಲಿ ಆಡುವ ಇಲೆವೆನ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಆಡಿಸದಿರುವುದಕ್ಕೆ ಅಸಮಾಧಾನಗೊಂಡಿರುವ ಸೆಹ್ವಾಗ್​ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

India vs England: ರೋಹಿತ್​ ಇಲ್ಲದ ಕ್ರಿಕೆಟ್​ ಪಂದ್ಯವನ್ನು ವೀಕ್ಷಿಸುವುದಕ್ಕಿಂತ ಟಿವಿ ಆಫ್​ ಮಾಡುವುದೇ ಒಳಿತು: ವಿರೇಂದ್ರ ಸೆಹ್ವಾಗ್
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Mar 13, 2021 | 2:50 PM

Share

ಅಹಮದಬಾದ್​: ರೋಹಿತ್ ಶರ್ಮಾ.. ಕ್ರಿಕೆಟ್‌ ಜಗತ್ತಿನ ‘ಹಿಟ್‌ಮ್ಯಾನ್’. ರೋಹಿತ್​ ಮೈದಾನದಲ್ಲಿ ಅಬ್ಬರಿಸಲು ಶುರುಮಾಡಿದರೆ ಎದುರಾಳಿ ತಂಡದ ಬೌಲರ್​ಗಳಿಗೆ ನಡುಕ ಆರಂಭವಾಗುವದಂತು ಸತ್ಯ. ಬರಿ ಬೌಂಡರಿ, ಸಿಕ್ಸರ್​ಗಳಿಂದಲೇ ಎದುರಾಳಿ ತಂಡದ ಆಟಗಾರರನ್ನು ಹೈರಾಣಾಗಿಸುವ ರೋಹಿತ್​ ತಮ್ಮ ಬ್ಯಾಟಿಂಗ್​ನಿಂದಲೇ ಅರ್ಧ ಪಂದ್ಯವನ್ನು ಗೆಲ್ಲಿಸಿಬಿಟ್ಟಿರುತ್ತಾರೆ. ಆದರೆ ಇಂತಹ ಸ್ಟೋಟಕ ಆಟಗಾರನನ್ನು ಟೀಂ ಇಂಡಿಯಾ ನಿನ್ನೆಯ ಪಂದ್ಯದಲ್ಲಿ ಆಡಿಸದೆ ತಪ್ಪು ಮಾಡಿತಾ ಎಂಬ ಪ್ರಶ್ನೆಗಳು ಈಗ ಕ್ರಿಕೆಟ್​ ಪಂಡಿತರಲ್ಲಿ ಉದ್ಭವಿಸಿದೆ. ಎಂತಹ ಕಷ್ಟದ ಸನ್ನಿವೇಶದಲ್ಲೂ ಮೈದಾನದಲ್ಲಿ ನಿಂತು ಬೃಹತ್​ ಇನ್ನಿಂಗ್ಸ್​ ಕಟ್ಟುವ ತಾಕತ್ತಿರುವ ರೋಹಿತ್​ ಇಲ್ಲದ ನಿನ್ನೆಯ ಪಂದ್ಯ ಬರಿ ಸಪ್ಪೆಯಾಗಿ ಕಾಣಿಸುತ್ತಿತ್ತು. ಅಲ್ಲದೆ ಆರಂಭಿಕರಾಗಿ ಬಂದ ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್​ ಎದುರು ರನ್​ಗಳಿಸಲು ಪರದಾಡಿ ಕೇವಲ ಒಂದಂಕಿಗೆ ವಿಕೆಟ್​ ಒಪ್ಪಿಸುವಾಗ, ಟೀಂ ಇಂಡಿಯಾ ಅಭಿಮಾನಿಗಳಿಗೆ ರೋಹಿತ್​ ಅಲಭ್ಯದಿಂದಾದ ಅನಾಹುತ ಎದ್ದು ಕಾಣುತ್ತಿತ್ತು.

ಹೌದು, ರೋಹಿತ್ ಶರ್ಮಾ ಕ್ರಿಕೆಟ್ ಪ್ರೇಮಿಗಳ ಆರಾಧ್ಯ ದೈವ. ರೋಹಿತ್​ ಇಲ್ಲದ ಕ್ರಿಕೆಟನ್ನು ಊಹಿಸಲು ಸಾಧ್ಯವಿಲ್ಲ. ರೋಹಿತ್​ ಕೇವಲ ಕ್ರಿಕೆಟ್​ ಅಭಿಮಾನಿಗಳಿಗೆ ಮಾತ್ರ ಇಷ್ಟದ ಆಟಗಾರನಾಗಿಲ್ಲ. ಬದಲಿಗೆ ಅದೆಷ್ಟೋ ಹೆಸರಾಂತ ಕ್ರಿಕೆಟ್​ ಆಟಗಾರರಿಗೆ ರೋಹಿತ್​ ಒಬ್ಬ ನೆಚ್ಚಿನ ಆಟಗಾರನ್ನಾಗಿದ್ದಾರೆ. ಅಂತಹ ಅಭಿಮಾನಿಗಳಲ್ಲಿ ಟೀಂ ಇಂಡಿಯಾದ ಮಾಜಿ ಸ್ಪೋಟಕ ಆಟಗಾರ ವೀರೇಂದ್ರ ಸೆಹ್ವಾಗ್ ಸಹ ಒಬ್ಬರಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಯಲ್ಲಿ ಆಡುವ ಇಲೆವೆನ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಆಡಿಸದಿರುವುದಕ್ಕೆ ಅಸಮಾಧಾನಗೊಂಡಿರುವ ಸೆಹ್ವಾಗ್​ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ರೋಹಿತ್​ನನ್ನ ನೋಡುವುದಕ್ಕಾಗಿಯೇ ಪ್ರೇಕ್ಷಕರು ಬರುತ್ತಾರೆ ತನ್ನ ಯುಗದಲ್ಲಿ ಎದುರಾಳಿ ತಂಡದ ಆಟಗಾರರನ್ನ ಇನ್ನಿಲ್ಲದಂತೆ ಕಾಡುತ್ತಿದ್ದ ಭಾರತದ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್,​ ರೋಹಿತ್​ ಅಲಭ್ಯತೆಯ ಬಗ್ಗೆ ತೀರ ಅಸಮಾದಾನಗೊಂಡಿದ್ದಾರೆ. ಈ ಬಗ್ಗೆ ಮಾತಾನಾಡಿರುವ ವೀರೂ, ರೋಹಿತ್​ನ ಆಟವನ್ನು ನೋಡುವುದಕ್ಕಾಗಿಯೇ ಜನರು ಕ್ರಿಕೆಟ್ ಕ್ರೀಡಾಂಗಣಕ್ಕೆ ಬರುತ್ತಾರೆ ಅಥವಾ ಟಿವಿಯ ಮುಂದೆ ಕುಳಿತುಕೊಳ್ಳುತ್ತಾರೆ. ಆದರೆ ಇಂದಿನ ಆಡುವ ಇಲೆವೆನ್‌ನಲ್ಲಿ ರೋಹಿತ್​ ಹೆಸರಿಲ್ಲ. ಆದ್ದರಿಂದ ಪಂದ್ಯವನ್ನು ನೋಡುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಸೆಹ್ವಾಗ್​ ಹೇಳಿದ್ದಾರೆ.

ರೋಹಿತ್ ಇಲ್ಲದಿದ್ದರೆ ಟಿವಿ ಆಫ್ ಮಾಡಿ ನಾನು ಕೂಡ ರೋಹಿತ್ ಶರ್ಮಾ ಅವರ ದೊಡ್ಡ ಅಭಿಮಾನಿ ಎಂದು ಹೇಳಿರುವ ಸೆಹ್ವಾಗ್, ನಾನು ರೋಹಿತ್​ನನ್ನು ಆಡುವ ಇಲೆವೆನ್‌ನಲ್ಲಿ ನೋಡಲು ಬಯಸುತ್ತೇನೆ. ಅವನು ಉತ್ತಮವಾಗಿ ಆಡುವುದನ್ನು ನೋಡಲು ನೋಡಬಯಸುತ್ತೇನೆ. ಆದರೆ ರೋಹಿತ್​ ನಮ್ಮ ತಂಡದ ಪರವಾಗಿ ಆಡದಿದ್ದರೆ, ನಾನು ಟಿವಿಯನ್ನು ಆಫ್ ಮಾಡುತ್ತೇನೆ. ರೋಹಿತ್​ ಇಲ್ಲದ ಪಂದ್ಯವನ್ನು ಮತ್ತೆ ನೋಡುವುದರಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ ಎಂದು ಸೆಹ್ವಾಗ್​ ಆಯ್ಕೆಗಾರರ ವಿರುದ್ಧ ಕಿಡಿಕಾರಿದ್ದಾರೆ.

ಮುಂದಿನ ಪಂದ್ಯಕ್ಕೂ ರೋಹಿತ್​ ಇಲ್ಲ.. ಪಂದ್ಯ ಆರಂಭಕ್ಕೂ ಒಂದು ದಿನ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಭಾರತದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟಿ20 ಯಲ್ಲಿ ರಾಹುಲ್​ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಹೇಳಿದರು. ಆದರೆ, ಪಂದ್ಯದ ದಿನದಂದು ಅವರು ಆಡುವ ಹನ್ನೊಂದರಿಂದ ಹೊರಗುಳಿದಿದ್ದರು. ಪಂದ್ಯದ ಆರಂಭಕ್ಕೂ ಮೊದಲು ಇದರ ಬಗ್ಗೆ ಮಾತಾನಾಡಿದ ಕೊಹ್ಲಿ, ರೋಹಿತ್​ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯುತ್ತಾರೆ ಎಂದು ಹೇಳಿದರು. ಕಳೆದ ವರ್ಷ ಫೆಬ್ರವರಿಯಲ್ಲಿ ತಮ್ಮ ಕೊನೆಯ ಟಿ20 ಆಡಿದ ರೋಹಿತ್ ಶರ್ಮಾ ಅವರನ್ನು ಕಣ್ತುಂಬಿಕೊಳ್ಳಲು ಇನ್ನೂ ಎರಡು ಪಂದ್ಯದವರೆಗೆ ಕಾಯಬೇಕಿದೆ.

ಇದನ್ನೂ ಓದಿ: ಎಚ್ಚರವಹಿಸದಿದ್ದರೆ ನೀವು ಕೊಹ್ಲಿಯಂತ್ತಾಗುತ್ತೀರಿ! ಕೊಹ್ಲಿಯ ಡಕ್​ ಔಟ್, ಉತ್ತರಾಖಂಡ್​ ಪೊಲೀಸ್​ ಅಧಿಕಾರಿ​ಗೆ ಮಾದರಿಯಾಗಿದ್ದೇಗೆ?

Published On - 2:48 pm, Sat, 13 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ