AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ […]

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್
ಸೂರ್ಯಕುಮಾರ್ ಯಾದವ್
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 20, 2021 | 11:25 PM

Share

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ ಮತ್ತು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯವರನ್ನೂ ಟೀಮಿಗೆ ಆಯ್ಕೆ ಮಾಡಲಾಗಿದೆ. ವರುಣ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಅಯ್ಕೆಯಾಗಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಕೊಳ್ಳಬಹುದಾಗಿದೆ. ಆದರೆ ಭುಜದ ನೋವಿನ ಸಮಸ್ಯೆಯಿಂದಾಗಿ ಅವರು ಹಿಂದೆ ಸರಿಯಬೇಕಾಗಿತ್ತು.

Rahul Tewatia

ರಾಹುಲ್ ತೆವಾಟಿಯಾ

ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐ ಟಿ20ಐ ಕ್ರಿಕೆಟ್ ಸರಣಿಗೆ ಇಂದು ಪ್ರಕಟಿಸಿರುವ ತಂಡ ಕೆಳಗಿನಂತಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, (ವಿಕೆಟ್​ಕೀಪರ್) ಇಶಾನ್ ಕಿಷನ್ (ವಿಕೆಟ್​ ಕೀಪರ್), ಯುಜ್ವೇಂದ್ರ ಚಹಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕೂರ್.

Published On - 11:02 pm, Sat, 20 February 21

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ