AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ […]

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್
ಸೂರ್ಯಕುಮಾರ್ ಯಾದವ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 20, 2021 | 11:25 PM

Share

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ ಮತ್ತು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯವರನ್ನೂ ಟೀಮಿಗೆ ಆಯ್ಕೆ ಮಾಡಲಾಗಿದೆ. ವರುಣ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಅಯ್ಕೆಯಾಗಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಕೊಳ್ಳಬಹುದಾಗಿದೆ. ಆದರೆ ಭುಜದ ನೋವಿನ ಸಮಸ್ಯೆಯಿಂದಾಗಿ ಅವರು ಹಿಂದೆ ಸರಿಯಬೇಕಾಗಿತ್ತು.

Rahul Tewatia

ರಾಹುಲ್ ತೆವಾಟಿಯಾ

ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐ ಟಿ20ಐ ಕ್ರಿಕೆಟ್ ಸರಣಿಗೆ ಇಂದು ಪ್ರಕಟಿಸಿರುವ ತಂಡ ಕೆಳಗಿನಂತಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, (ವಿಕೆಟ್​ಕೀಪರ್) ಇಶಾನ್ ಕಿಷನ್ (ವಿಕೆಟ್​ ಕೀಪರ್), ಯುಜ್ವೇಂದ್ರ ಚಹಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕೂರ್.

Published On - 11:02 pm, Sat, 20 February 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ