AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಮೊದಲ ಇನ್ನಿಂಗ್ಸ್‌ನಲ್ಲಿ.. ಟೀಂ ಇಂಡಿಯಾ ಇಂದೇ ಮುನ್ನಡೆ ಸಾಧಿಸಲಿದೆಯಾ!?

India vs England: ಮೊದಲನೇ ದಿನದ ಕೊನೆಯ ಸೆಷನ್​ ಆಡುತ್ತಿರುವ ಭಾರತ, ಇಂಗ್ಲೆಂಡ್​ ನೀಡಿರುವ ಅಲ್ಪ ಮೊತ್ತವನ್ನು ಇಂದೇ ಬೆನ್ನತ್ತಲಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಹಾಗೇನಾದರೂ ಆದಲ್ಲಿ ಇನ್ನೂ ಉಳಿದಿರುವ 4 ದಿನಗಳ ಆಟದಲ್ಲಿ ಟೀಂ ಇಂಡಿಯಾ ಸಂಪೂರ್ಣವಾಗಿ ಇಂಗ್ಲೆಂಡ್ ಮೇಲೆ ಹಿಡಿತ ಸಾಧಿಸಲಿದೆ.

India vs England: ಮೊದಲ ಇನ್ನಿಂಗ್ಸ್‌ನಲ್ಲಿ..  ಟೀಂ ಇಂಡಿಯಾ ಇಂದೇ ಮುನ್ನಡೆ ಸಾಧಿಸಲಿದೆಯಾ!?
ಶುಭಮನ್ ಗಿಲ್​, ರೋಹಿತ್​ ಶರ್ಮಾ
ಪೃಥ್ವಿಶಂಕರ
|

Updated on:Feb 24, 2021 | 8:25 PM

Share

ಅಹಮದಾಬಾದ್​: ಪಿಂಕ್ ಬಾಲ್ ಟೆಸ್ಟ್​ನಲ್ಲಿ, ಮೊದಲ ದಿನದ ಕೊನೆಯ ಸೆಷನ್ ಪ್ರಾರಂಭವಾಗಿದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಭಾರತದ ಪರ ಬ್ಯಾಟಿಂಗ್​ಗೆ ಇಳಿದಿದ್ದಾರೆ. ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು 112 ರನ್‌ಗಳಿಗೆ ಆಲ್​ಔಟ್​ ಮಾಡಲಾಗಿದೆ. ಕ್ರೌಲಿ ಇಂಗ್ಲೆಂಡ್ ಪರ ಮೊದಲ ಇನ್ನಿಂಗ್ಸ್‌ನಲ್ಲಿ 53 ರನ್ ಗಳಿಸಿದರು. ಟೀಂ ಇಂಡಿಯಾ ಪರ ಸ್ಥಳೀಯ ಆಟಗಾರ ಅಕ್ಷರ್ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಅಶ್ವಿನ್​ 3 ಹಾಗೂ ಇಶಾಂತ್ 1 ವಿಕೆಟ್​ ಪಡೆದು ಮಿಂಚಿದರು. ಹಗಲು ರಾತ್ರಿ ನಡೆಯುವ ಈ ಟೆಸ್ಟ್​ ಎರಡೂ ತಂಡಗಳಿಗೆ ಮುಖ್ಯವಾಗಿದೆ. ಅಲ್ಲದೆ ವಿಶ್ವ ಟೆಸ್ಟ್ ಸರಣಿಯ ಫೈನಲ್‌ನಲ್ಲಿ ಸ್ಥಾನ ಪಡೆಯುವ ದೃಷ್ಟಿಯಿಂದಲೂ ಈ ಪಂದ್ಯ ಬಹಳ ವಿಶೇಷವಾಗಿದೆ. ಇದು ಭಾರತಕ್ಕೆ ಮೂರನೇ ಪಿಂಕ್ ಬಾಲ್ ಟೆಸ್ಟ್ ಮತ್ತು ಇಂಗ್ಲೆಂಡ್‌ಗೆ ನಾಲ್ಕನೇ ಪಂದ್ಯವಾಗಿದೆ.

ಇಂದೇ ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್​ ಪಡೆಯುತ್ತಾ ಭಾರತ? ಮೊದಲನೇ ದಿನದ ಕೊನೆಯ ಸೆಷನ್​ ಆಡುತ್ತಿರುವ ಭಾರತ, ಇಂಗ್ಲೆಂಡ್​ ನೀಡಿರುವ ಅಲ್ಪ ಮೊತ್ತವನ್ನು ಇಂದೇ ಬೆನ್ನತ್ತಲಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಕೊನೆಯ ಸೆಷನ್​ನಲ್ಲಿ ಇನ್ನೂ 2 ಗಂಟೆಗಳ ಆಟ ಬಾಕಿ ಇದ್ದು, ಇನ್ನೂ 20 ಓವರ್​ಗಳ ಆಟವನ್ನು ಭಾರತ ಆಡಲಿದೆ. ಹಾಗೇನಾದರೂ ಆದಲ್ಲಿ ಉಳಿದಿರುವ 4 ದಿನಗಳ ಆಟದಲ್ಲಿ ಟೀಂ ಇಂಡಿಯಾ ಸಂಪೂರ್ಣವಾಗಿ ಇಂಗ್ಲೆಂಡ್ ಮೇಲೆ ಹಿಡಿತ ಸಾಧಿಸಲಿದೆ. ಮೊದಲನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 400 ರನ್​ಗಳ ಟಾರ್ಗೆಟ್​ ನೀಡಿದಲ್ಲಿ, ಇಂಗ್ಲೆಂಡ್​ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಬಹುದಾಗಿದೆ.

ಮಿಂಚಿದ ಲೋಕಲ್​ ಬಾಯ್​ ಅಕ್ಷರ್​.. ಆಡುತ್ತಿರುವ 2ನೇ ಪಂದ್ಯದಲ್ಲೇ ಮಿಂಚು ಹರಿಸಿರುವ ಸ್ಥಳೀಯ ಆಟಗಾರ ಅಕ್ಷರ್​ ಪಟೇಲ್​, ಇಂಗ್ಲೆಂಡ್ ತಂಡವನ್ನು ಅಲ್ಪ ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಆರಂಭದಿಂದಲೂ ಇಂಗ್ಲೆಂಡ್ ಆಟಗಾರರ ಮೇಲೆ ಹಿಡಿತ ಸಾಧಿಸಿದ ಅಕ್ಷರ್​ ಪಟೇಲ್​ ಪ್ರಮುಖ 6 ವಿಕೆಟ್​ ಪಡೆದು ಮಿಂಚಿದರು. ಅಲ್ಲದೆ ತಾನು ಬೌಲಿಂಗ್​ ಆರಂಭಿಸಿದ ಮೊದಲ ಎಸೆತದಲ್ಲೇ ವಿಕೆಟ್​ ಪಡೆದಿದ್ದು ಇನ್ನೂ ವಿಶೇಷವಾಗಿತ್ತು. ಇಂಗ್ಲೆಂಡ್ ತಂಡದ ಪ್ರಮುಖ 6 ಆಟಗಾರರನ್ನು ಬಹುಬೇಗನೇ ಪೆವಿಲಿಯನ್​ಗೆ ಕಳುಹಿಸುವಲ್ಲಿ ಯಶಸ್ವಿಯಾದ ಅಕ್ಷರ್​ 2ನೇ ಬಾರಿಗೆ 5 ವಿಕೆಟ್​ ಪಡೆದ ಸಾಧನೆ ಮಾಡಿದರು.

Published On - 8:21 pm, Wed, 24 February 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ