India vs England: 2ನೇ ಬಾರಿಗೆ ಫಿಟ್ನೆಸ್‌ ಟೆಸ್ಟ್ ಫೇಲಾದ ವರುಣ್​ ಚಕ್ರವರ್ತಿ, ಇಂಜುರಿಯಿಂದ ಬಳಲುತ್ತಿರುವ ಟಿ ನಟರಾಜನ್‌ ಆಡೋದು ಡೌಟು!

India vs England: ವರುಣ್ ಅವರಲ್ಲದೆ, ಮೊಣಕಾಲು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ಟಿ ನಟರಾಜನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಅವರು ಗುಣಮುಖರಾದರೆ ಖಂಡಿತಾ ಅವರನ್ನು ಟಿ20 ಸರಣಿಗೆ ಪರಿಗಣಿಸಬಹುದು ಎಂದು ಮೂಲಗಳು ಹೇಳಿವೆ.

India vs England: 2ನೇ ಬಾರಿಗೆ ಫಿಟ್ನೆಸ್‌ ಟೆಸ್ಟ್ ಫೇಲಾದ ವರುಣ್​ ಚಕ್ರವರ್ತಿ, ಇಂಜುರಿಯಿಂದ ಬಳಲುತ್ತಿರುವ ಟಿ ನಟರಾಜನ್‌ ಆಡೋದು ಡೌಟು!
Follow us
|

Updated on: Mar 10, 2021 | 4:15 PM

ಅಹಮದಾಬಾದ್‌: ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಟಿ 20 ಪಂದ್ಯಗಳ ಸರಣಿ ಮಾರ್ಚ್​ 12ರಿಂದ ಆರಂಭವಾಗಲಿದೆ. ಆದರೆ ಸರಣಿ ಪ್ರಾರಂಭವಾಗುವ ಮೊದಲು ಭಾರತಕ್ಕೆ ಆಘಾತ ಎದುರಾಗಿದೆ. ಅದೆನೆಂದರೆ, ತಂಡದ ಲೆಗ್ ಸ್ಪಿನ್ನರ್ ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ. ವರುಣ್​ ಎರಡನೇ ಬಾರಿಗೆ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ. ಹೀಗಾಗಿ ವರುಣ್ ಶುಕ್ರವಾರದಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಐದು ಟಿ 20 ಅಂತರರಾಷ್ಟ್ರೀಯ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ.

ವರುಣ್ ಅವರಲ್ಲದೆ, ಮೊಣಕಾಲು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ಟಿ ನಟರಾಜನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಅವರು ಗುಣಮುಖರಾದರೆ ಖಂಡಿತಾ ಅವರನ್ನು ಟಿ20 ಸರಣಿಗೆ ಪರಿಗಣಿಸಬಹುದು ಎಂದು ಮೂಲಗಳು ಹೇಳಿವೆ. ಸರಣಿಯಲ್ಲಿ ಇಬ್ಬರೂ ಆಟಗಾರರ ಅನುಪಸ್ಥಿತಿಯು ಭಾರತಕ್ಕೆ ಕೊಂಚ ಕಷ್ಟಕರವಾಗಬಹುದು. ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ ಟಿ ನಟರಾಜನ್ ಉತ್ತಮ ಪ್ರದರ್ಶನ ನೀಡಿದ್ದರು.

ಟಿ ನಟರಾಜನ್

ಫಿಟ್ನೆಸ್ ಪರೀಕ್ಷೆಯಲ್ಲಿ ಎರಡನೇ ಬಾರಿಗೆ ವರುಣ್ ವಿಫಲ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ನಡೆದ ಫಿಟ್‌ನೆಸ್ ಪರೀಕ್ಷೆಗಳಲ್ಲಿ ಸತತವಾಗಿ 2ನೇ ಬಾರಿಗೆ ಉತ್ತೀರ್ಣರಾಗಲು ವರುಣ್ ವಿಫಲರಾಗಿದ್ದಾರೆ. ವರುಣ್ ಚಕ್ರವರ್ತಿ ಭುಜದ ಗಾಯದಿಂದ ಚೇತರಿಸಿಕೊಂಡಿದ್ದರಿಂದ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆಗಿದ್ದರೂ ಸಹ,ವರುಣ್​ ಯೋ-ಯೋ ಪರೀಕ್ಷೆಯಲ್ಲಿ ಎರಡನೇ ಬಾರಿಗೆ ಉತ್ತೀರ್ಣರಾಗಲು ವಿಫಲರಾದರು.

ವರುಣ್‌ ಚಕ್ರವರ್ತಿ ಅವರು ಫಿಟ್ನೆಸ್‌ ಟೆಸ್ಟ್ ಪಾಸ್‌ ಮಾಡದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಹುಲ್‌ ಚಹರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಚಹರ್‌ ಈಗಾಗಲೇ ಟೆಸ್ಟ್ ಸರಣಿಯಲ್ಲಿ ತಂಡದ ಜತೆ ಮೀಸಲು ಆಟಗಾರನಾಗಿ ಕಾಣಿಸಿಕೊಂಡಿದ್ದರು. ಮಂಗಳವಾರ ನಡೆದಿದ್ದ ಮತ್ತೊಂದು ಸುತ್ತಿನ ಫಿಟ್ನೆಸ್‌ ಟೆಸ್ಟ್‌ನಲ್ಲಿ ಚಕ್ರವರ್ತಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಹುಲ್‌ ಚಹರ್​ಗೆ ಸ್ಥಾನ ನಿಡುವುದು ಸ್ಪಷ್ಟವಾಗಿದೆ.

ಒಂದು ವೇಳೆ ನಟರಾಜನ್‌ ಅವರು ಟಿ20 ಸರಣಿಯಿಂದ ಅಧೀಕೃತವಾಗಿ ಹೊರ ನಡೆದರೆ, ಟೀಂ ಇಂಡಿಯಾಗೆ ಹಿನ್ನಡೆಯಾಗಬಹುದು. ಆದರೆ, ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಮಂಗಳವಾರ ನೆಟ್ಸ್‌ನಲ್ಲಿ ಬೌಲಿಂಗ್‌ ಮಾಡುತ್ತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಹಾಗಾಗಿ, ತಂಡದ ಬೌಲಿಂಗ್‌ ಆಯ್ಕೆಗೆ ಪಾಂಡ್ಯ ಲಭ್ಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: India vs England: T20 ಸರಣಿ ಆರಂಭಕ್ಕೂ ಮುನ್ನ ಕೊಹ್ಲಿಗೆ ಎದುರಾಯ್ತು ಆಟಗಾರರ ಆಯ್ಕೆ ಸಮಸ್ಯೆ.. ವಿರಾಟ್​ ಯಾರ ಕೈಹಿಡಿಯಲ್ಲಿದ್ದಾರೆ?

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ