AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 2ನೇ ಬಾರಿಗೆ ಫಿಟ್ನೆಸ್‌ ಟೆಸ್ಟ್ ಫೇಲಾದ ವರುಣ್​ ಚಕ್ರವರ್ತಿ, ಇಂಜುರಿಯಿಂದ ಬಳಲುತ್ತಿರುವ ಟಿ ನಟರಾಜನ್‌ ಆಡೋದು ಡೌಟು!

India vs England: ವರುಣ್ ಅವರಲ್ಲದೆ, ಮೊಣಕಾಲು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ಟಿ ನಟರಾಜನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಅವರು ಗುಣಮುಖರಾದರೆ ಖಂಡಿತಾ ಅವರನ್ನು ಟಿ20 ಸರಣಿಗೆ ಪರಿಗಣಿಸಬಹುದು ಎಂದು ಮೂಲಗಳು ಹೇಳಿವೆ.

India vs England: 2ನೇ ಬಾರಿಗೆ ಫಿಟ್ನೆಸ್‌ ಟೆಸ್ಟ್ ಫೇಲಾದ ವರುಣ್​ ಚಕ್ರವರ್ತಿ, ಇಂಜುರಿಯಿಂದ ಬಳಲುತ್ತಿರುವ ಟಿ ನಟರಾಜನ್‌ ಆಡೋದು ಡೌಟು!
Follow us
ಪೃಥ್ವಿಶಂಕರ
|

Updated on: Mar 10, 2021 | 4:15 PM

ಅಹಮದಾಬಾದ್‌: ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಟಿ 20 ಪಂದ್ಯಗಳ ಸರಣಿ ಮಾರ್ಚ್​ 12ರಿಂದ ಆರಂಭವಾಗಲಿದೆ. ಆದರೆ ಸರಣಿ ಪ್ರಾರಂಭವಾಗುವ ಮೊದಲು ಭಾರತಕ್ಕೆ ಆಘಾತ ಎದುರಾಗಿದೆ. ಅದೆನೆಂದರೆ, ತಂಡದ ಲೆಗ್ ಸ್ಪಿನ್ನರ್ ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ. ವರುಣ್​ ಎರಡನೇ ಬಾರಿಗೆ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ. ಹೀಗಾಗಿ ವರುಣ್ ಶುಕ್ರವಾರದಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಐದು ಟಿ 20 ಅಂತರರಾಷ್ಟ್ರೀಯ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ.

ವರುಣ್ ಅವರಲ್ಲದೆ, ಮೊಣಕಾಲು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ಟಿ ನಟರಾಜನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಅವರು ಗುಣಮುಖರಾದರೆ ಖಂಡಿತಾ ಅವರನ್ನು ಟಿ20 ಸರಣಿಗೆ ಪರಿಗಣಿಸಬಹುದು ಎಂದು ಮೂಲಗಳು ಹೇಳಿವೆ. ಸರಣಿಯಲ್ಲಿ ಇಬ್ಬರೂ ಆಟಗಾರರ ಅನುಪಸ್ಥಿತಿಯು ಭಾರತಕ್ಕೆ ಕೊಂಚ ಕಷ್ಟಕರವಾಗಬಹುದು. ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ ಟಿ ನಟರಾಜನ್ ಉತ್ತಮ ಪ್ರದರ್ಶನ ನೀಡಿದ್ದರು.

ಟಿ ನಟರಾಜನ್

ಫಿಟ್ನೆಸ್ ಪರೀಕ್ಷೆಯಲ್ಲಿ ಎರಡನೇ ಬಾರಿಗೆ ವರುಣ್ ವಿಫಲ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ನಡೆದ ಫಿಟ್‌ನೆಸ್ ಪರೀಕ್ಷೆಗಳಲ್ಲಿ ಸತತವಾಗಿ 2ನೇ ಬಾರಿಗೆ ಉತ್ತೀರ್ಣರಾಗಲು ವರುಣ್ ವಿಫಲರಾಗಿದ್ದಾರೆ. ವರುಣ್ ಚಕ್ರವರ್ತಿ ಭುಜದ ಗಾಯದಿಂದ ಚೇತರಿಸಿಕೊಂಡಿದ್ದರಿಂದ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆಗಿದ್ದರೂ ಸಹ,ವರುಣ್​ ಯೋ-ಯೋ ಪರೀಕ್ಷೆಯಲ್ಲಿ ಎರಡನೇ ಬಾರಿಗೆ ಉತ್ತೀರ್ಣರಾಗಲು ವಿಫಲರಾದರು.

ವರುಣ್‌ ಚಕ್ರವರ್ತಿ ಅವರು ಫಿಟ್ನೆಸ್‌ ಟೆಸ್ಟ್ ಪಾಸ್‌ ಮಾಡದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಹುಲ್‌ ಚಹರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಚಹರ್‌ ಈಗಾಗಲೇ ಟೆಸ್ಟ್ ಸರಣಿಯಲ್ಲಿ ತಂಡದ ಜತೆ ಮೀಸಲು ಆಟಗಾರನಾಗಿ ಕಾಣಿಸಿಕೊಂಡಿದ್ದರು. ಮಂಗಳವಾರ ನಡೆದಿದ್ದ ಮತ್ತೊಂದು ಸುತ್ತಿನ ಫಿಟ್ನೆಸ್‌ ಟೆಸ್ಟ್‌ನಲ್ಲಿ ಚಕ್ರವರ್ತಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಹುಲ್‌ ಚಹರ್​ಗೆ ಸ್ಥಾನ ನಿಡುವುದು ಸ್ಪಷ್ಟವಾಗಿದೆ.

ಒಂದು ವೇಳೆ ನಟರಾಜನ್‌ ಅವರು ಟಿ20 ಸರಣಿಯಿಂದ ಅಧೀಕೃತವಾಗಿ ಹೊರ ನಡೆದರೆ, ಟೀಂ ಇಂಡಿಯಾಗೆ ಹಿನ್ನಡೆಯಾಗಬಹುದು. ಆದರೆ, ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಮಂಗಳವಾರ ನೆಟ್ಸ್‌ನಲ್ಲಿ ಬೌಲಿಂಗ್‌ ಮಾಡುತ್ತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಹಾಗಾಗಿ, ತಂಡದ ಬೌಲಿಂಗ್‌ ಆಯ್ಕೆಗೆ ಪಾಂಡ್ಯ ಲಭ್ಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: India vs England: T20 ಸರಣಿ ಆರಂಭಕ್ಕೂ ಮುನ್ನ ಕೊಹ್ಲಿಗೆ ಎದುರಾಯ್ತು ಆಟಗಾರರ ಆಯ್ಕೆ ಸಮಸ್ಯೆ.. ವಿರಾಟ್​ ಯಾರ ಕೈಹಿಡಿಯಲ್ಲಿದ್ದಾರೆ?

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ