AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hockey World Cup 2023: ಚೊಚ್ಚಲ ಪಂದ್ಯದಲ್ಲೇ ಸ್ಫೀನ್ ವಿರುದ್ಧ ಗೆದ್ದು ಬೀಗಿದ ಭಾರತ

ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಭಾರತ ಸ್ಪೇನ್​ ವಿರುದ್ಧ 2-0 ಅಂತರದಿಂದ ಗೆಲುವು ಸಾಧಿಸಿದೆ.

Hockey World Cup 2023: ಚೊಚ್ಚಲ ಪಂದ್ಯದಲ್ಲೇ ಸ್ಫೀನ್ ವಿರುದ್ಧ ಗೆದ್ದು ಬೀಗಿದ ಭಾರತ
ಭಾರತ ಹಾಕಿ ತಂಡ
TV9 Web
| Edited By: |

Updated on:Jan 13, 2023 | 10:20 PM

Share

ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯ (Hockey World Cup 2023) ಚೊಚ್ಚಲ ಪಂದ್ಯದಲ್ಲೇ ಭಾರತ ಜಯಭೇರಿ ಬಾರಿಸಿದೆ. ಇಂದು(ಜನವರಿ 13)ಒಡಿಶಾದ ‘ರೂರ್ಕೆಲಾ’ದ ರೂರ್ಕೆಲಾದ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸ್ಪೇನ್ (Spain)​ ವಿರುದ್ಧ 2-0 ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ಪುರುಷರ ಹಾಕಿ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇದನ್ನೂ ಓದಿ: Hockey World Cup2023: ಇಂದಿನಿಂದ ಹಾಕಿ ವಿಶ್ವಕಪ್ ಆರಂಭ; ಮೊದಲ ದಿನದ ವೇಳಾಪಟ್ಟಿ, ಸಂಪೂರ್ಣ ವಿವರ ಇಲ್ಲಿದೆ

ಪಂದ್ಯ ಆರಂಭವಾದ 12ನೇ ನಿಮಿಷದಲ್ಲಿ ಅಮಿತ್ ರೋಹಿದಾಸ್ ಸಡಿಸಿದ ಗೋಲಿನಿಂದ ಭಾರತ ಖಾತೆ ತೆರೆಯಿತು. ಇದರೊಂದಿಗೆ ಭಾರತ ಪಂದ್ಯದ ಆರಂಭದಲ್ಲಿ ಬಿಗಿ ಹಿಡಿತ ಸಾಧಿಸಿತು. ಮೊದಲ ಗೋಲಿನಿಂದ 1-0 ಅಂತರದ ಮುನ್ನಡೆ ಪಡೆದ ಭಾರತ 26ನೇ ನಿಮಿಷದಲ್ಲಿ ಹಾರ್ದಿಕ್ ಸಿಂಗ್ ಎರಡನೇ ಗೋಲು ಸಿಡಿಸಿದರು. ಇದರೊಂದಿಗೆ ಭಾರತ 2-0 ಅಂತರದ ಮುನ್ನಡೆ ಪಡೆಯಿತು. ಆದ್ರೆ ಬಲಿಷ್ಠ ಸ್ಪೇನ್ ಯಾವುದೇ ಗೋಲು ಬಾರಿಸದೆ ಭಾರತ ವಿರುದ್ಧ 2-0 ಅಂತರದಿಂದ ಸೋಲೊಪ್ಪಿಕೊಂಡಿತು.

ಒಡಿಶಾದಲ್ಲೇ ನಡೆದ ಕಳೆದ ಆವೃತ್ತಿಯಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ ಮುಗ್ಗರಿಸಿತ್ತು. ಆದರೆ ವಿಶ್ವ ನಂ.6 ಭಾರತ ಕಳೆದೆರಡು ವರ್ಷಗಳಲ್ಲಿ ಪ್ರೊ ಲೀಗ್‌ ಸೇರಿದಂತೆ ವಿವಿಧ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ತವಕದಲ್ಲಿದೆ.

ಮತ್ತಷ್ಟು ಕ್ರೀಡೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:07 pm, Fri, 13 January 23

Follow Us
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು