AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಶ್ರೀಲಂಕಾ ಆರಂಭಕ್ಕೂ ಮುನ್ನ ಲಂಕಾ ಪಾಳಯಕ್ಕೆ ಕೊರೊನಾ ಕಾಟ! ಬ್ಯಾಟಿಂಗ್ ಕೋಚ್​ಗೆ ಕೊರೊನಾ ಸೋಂಕು

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೂ ಮೊದಲು ಕೆಟ್ಟ ಸುದ್ದಿ ಹೊರಬಿದ್ದಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ.

IND vs SL: ಭಾರತ- ಶ್ರೀಲಂಕಾ ಆರಂಭಕ್ಕೂ ಮುನ್ನ ಲಂಕಾ ಪಾಳಯಕ್ಕೆ ಕೊರೊನಾ ಕಾಟ! ಬ್ಯಾಟಿಂಗ್ ಕೋಚ್​ಗೆ ಕೊರೊನಾ ಸೋಂಕು
ಶ್ರೀಲಂಕಾ ತಂಡ
ಪೃಥ್ವಿಶಂಕರ
| Updated By: shruti hegde|

Updated on: Jul 09, 2021 | 8:21 AM

Share

ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೂ ಮೊದಲು ಕೆಟ್ಟ ಸುದ್ದಿ ಹೊರಬಿದ್ದಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ. ತಂಡದೊಂದಿಗೆ ಇಂಗ್ಲೆಂಡ್ ಪ್ರವಾಸದಲ್ಲಿದ್ದ ಗ್ರಾಂಟ್ ಫ್ಲವರ್‌ನ ಮಾದರಿ ಪಾಸಿಟಿವ್ ಬಂದಿದೆ. ಭಾರತದೊಂದಿಗಿನ ಸರಣಿಗೆ ಕೇವಲ ಒಂದು ವಾರ ಮಾತ್ರ ಉಳಿದಿರುವ ಸಮಯದಲ್ಲಿ ಶ್ರೀಲಂಕಾದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕಕಾರಿ ಸುದ್ದಿಯಾಗಿದೆ. ಜುಲೈ 13 ರಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಏಕದಿನ ಮತ್ತು ಮೂರು ಟಿ 20 ಪಂದ್ಯಗಳ ಸರಣಿ ನಡೆಯಲಿದೆ. ಗ್ರಾಂಟ್ ಫ್ಲವರ್ ಅನ್ನು ತಂಡದ ಉಳಿದ ಆಟಗಾರರಿಂದ ಬೇರ್ಪಡಿಸಲಾಗಿದೆ. ಇಂಗ್ಲೆಂಡ್‌ನಿಂದ ಹಿಂದಿರುಗಿದ ನಂತರ, ಶ್ರೀಲಂಕಾ ತಂಡದ ಎಲ್ಲಾ ಆಟಗಾರರು ಕಟ್ಟುನಿಟ್ಟಿನ ಸಂಪರ್ಕತಡೆಯಲ್ಲಿದ್ದಾರೆ. ಇಂಗ್ಲೆಂಡ್ ತಂಡದ ಏಳು ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಶ್ರೀಲಂಕಾ ಕ್ರಿಕೆಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಶ್ರೀಲಂಕಾದ ರಾಷ್ಟ್ರೀಯ ತಂಡದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇಂದು ಅವರ ಪಿಸಿಆರ್ ಪರೀಕ್ಷೆಯನ್ನು ಮಾಡಲಾಯಿತು, ಅದರಲ್ಲಿ ಕೊರೊನಾ ತಗುಲಿರುವುದು ಸ್ಪಷ್ಟವಾಗಿದೆ. ಅವರಲ್ಲಿ ಈ ರೋಗದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಫಲಿತಾಂಶ ಬಂದ ನಂತರ, ಅವರನ್ನು ತಂಡದ ಉಳಿದ ಸದಸ್ಯರಿಂದ ತಕ್ಷಣವೇ ಪ್ರತ್ಯೇಕಿಸಲಾಯಿತು. ಉಳಿದ ಸದಸ್ಯರು ಇನ್ನೂ ಸಂಪರ್ಕತಡೆಯಲ್ಲಿದ್ದಾರೆ. ಗ್ರಾಂಟ್ ಫ್ಲವರ್ ವೈದ್ಯಕೀಯ ಪ್ರೋಟೋಕಾಲ್ ಅಡಿಯಲ್ಲಿದ್ದಾರೆ. ಎಲ್ಲಾ ಇತರ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಯನ್ನು ಸಹ ಪರೀಕ್ಷಿಸಲಾಗಿದೆ.

ಶ್ರೀಲಂಕಾ ತಂಡದ ಅದೃಷ್ಟ ಸರಿಯಾಗಿ ಕೈಕೊಟ್ಟಿದೆ ಗ್ರಾಂಟ್ ಫ್ಲವರ್ ಮಾಜಿ ಜಿಂಬಾಬ್ವೆಯ ಕ್ರಿಕೆಟಿಗ. ಅವರು ಶ್ರೀಲಂಕಾ ತಂಡದೊಂದಿಗೆ ದೀರ್ಘಕಾದಿಂದ ಇದ್ದಾರೆ. ಶ್ರೀಲಂಕಾ ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದಿಂದ ಮರಳಿದೆ. ಅಲ್ಲಿ ಅವರ ಸಾಧನೆ ತುಂಬಾ ಕಳಪೆಯಾಗಿತ್ತು. ಟಿ 20 ಯಲ್ಲಿ 3-0 ಮತ್ತು ಏಕದಿನ ಪಂದ್ಯಗಳಲ್ಲಿ 2-0 ಅಂತರದಿಂದ ಸೋಲಬೇಕಾಯಿತು. ಈ ಪ್ರವಾಸದಲ್ಲಿ, ತಂಡದ ಮೂವರು ಹಿರಿಯ ಆಟಗಾರರು ಬಯೋ ಬಬಲ್ ಮುರಿಯುವ ಮೂಲಕ ಬೀದಿಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿತು. ಈ ಆಟಗಾರರನ್ನು ನಿರೋಷನ್ ಡಿಕ್ವೆಲ್ಲಾ, ಧನಂಜಯ್ ಡಿ ಸಿಲ್ವಾ ಮತ್ತು ಕುಸಲ್ ಮೆಂಡಿಸ್ ಎಂದು ಗುರುತಿಸಲಾಗಿದೆ. ವಿಷಯ ಬೆಳಕಿಗೆ ಬಂದಾಗ, ಮೂವರನ್ನೂ ಪ್ರವಾಸದ ಮಧ್ಯದಿಂದ ಶ್ರೀಲಂಕಾಕ್ಕೆ ಕಳುಹಿಸಲಾಯಿತು ಮತ್ತು ತನಿಖಾ ಸಮಿತಿಯನ್ನು ರಚಿಸಲಾಯಿತು. ಈ ಮೂವರನ್ನು ಭಾರತ ವಿರುದ್ಧದ ಸರಣಿಯಿಂದ ಹೊರಗಿಡಲಾಗಿದೆ. ಮೂವರನ್ನೂ ಒಂದು ವರ್ಷ ನಿಷೇಧಿಸಲಾಗುವುದು ಎಂದು ಹೇಳಲಾಗುತ್ತಿದೆ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?