Thomas Cup 2022: ಬ್ಯಾಡ್ಮಿಂಟನ್​ನಲ್ಲಿ ಹೊಸ ಇತಿಹಾಸ: ಚೊಚ್ಚಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ

Thomas Cup 2022: ಕಿಡಂಬಿ ಶ್ರೀಕಾಂತ್ ಎರಡನೇ ಸಿಂಗಲ್ಸ್‌ನಲ್ಲಿ 21-15, 23-21 ಜೊನಾಟನ್ ಕ್ರಿಸ್ಟಿ ಅವರನ್ನು ಸೋಲಿಸಿ ಸ್ಪರ್ಧೆಯ ಇತಿಹಾಸದಲ್ಲಿ ಭಾರತದ ಚೊಚ್ಚಲ ಕಿರೀಟಕ್ಕೆ ಮುದ್ರೆಯೊತ್ತಿದರು.

Thomas Cup 2022: ಬ್ಯಾಡ್ಮಿಂಟನ್​ನಲ್ಲಿ ಹೊಸ ಇತಿಹಾಸ: ಚೊಚ್ಚಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ
India win first-ever Thomas Cup crown
Follow us
| Updated By: ಝಾಹಿರ್ ಯೂಸುಫ್

Updated on:May 15, 2022 | 4:26 PM

ಭಾನುವಾರ ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ಥಾಮಸ್ ಮತ್ತು ಉಬರ್ ಕಪ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ವೀರೋಚಿತ ಪ್ರಯತ್ನದಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಭಾರತದ ಪುರುಷರ ತಂಡ ಮೊದಲ ಬಾರಿಗೆ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಥಾಮಸ್ ಮತ್ತು ಉಬರ್ ಕಪ್‌ನ ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್​ನಲ್ಲಿ ಹೊಸ ಚರಿತ್ರೆ ಬರೆದಿದೆ. ಈ ಮೂಲಕ  ಚೀನಾ, ಇಂಡೋನೇಷ್ಯಾ, ಜಪಾನ್, ಡೆನ್ಮಾರ್ಕ್ ನಂತರ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎನಿಸಿಕೊಂಡಿದೆ.

ಲಕ್ಷ್ಯ ಸೇನ್,  ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತು ಕಿಡಂಬಿ ಶ್ರೀಕಾಂತ್ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದು, ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಕಿರೀಟವನ್ನು ತನ್ನದಾಗಿಸಿಕೊಂಡಿದೆ.

ಕಿಡಂಬಿ ಶ್ರೀಕಾಂತ್ ಎರಡನೇ ಸಿಂಗಲ್ಸ್‌ನಲ್ಲಿ 21-15, 23-21 ಜೊನಾಟನ್ ಕ್ರಿಸ್ಟಿ ಅವರನ್ನು ಸೋಲಿಸಿ ಸ್ಪರ್ಧೆಯ ಇತಿಹಾಸದಲ್ಲಿ ಭಾರತದ ಚೊಚ್ಚಲ ಕಿರೀಟಕ್ಕೆ ಮುದ್ರೆಯೊತ್ತಿದರು. ಇದಕ್ಕೂ ಮೊದಲು, ಯುವ ಆಟಗಾರ ವಿಶ್ವದ ಐದನೇ ಶ್ರೇಯಾಂಕಿತ ಆಂಥೋನಿ ಸಿನಿಸುಕಾ ಗಿಂಟಿಂಗ್ ವಿರುದ್ಧ ಗೆಲುವು ದಾಖಲಿಸಿದ  ಲಕ್ಷ್ಯ ಸೇನ್ ಭಾರತಕ್ಕೆ ಅದ್ಭುತ ಆರಂಭ ಒದಗಿಸಿದ್ದರು.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಆ ಬಳಿಕ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ತಮ್ಮ ಕೌಶಲ್ಯ ಮತ್ತು ಅನುಭವದೊಂದಿಗೆ ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸಂಜಯ ಸುಕಮುಲ್ಜೊ ಅವರನ್ನು ಸೋಲಿಸಿದರು. ಕಿಡಂಬಿ ಶ್ರೀಕಾಂತ್ ಅವರು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಜೊನಾಟನ್ ಕ್ರಿಸ್ಟಿ ಅವರನ್ನು 21-15 23-21 ರಿಂದ ಸೋಲಿಸುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ಥಾಮಸ್ ಕಪ್ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:33 pm, Sun, 15 May 22

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ