AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ

ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಪೃಥ್ವಿಶಂಕರ
|

Updated on: May 31, 2021 | 6:02 PM

Share

ಭಾರತದ ಯುವ ಬೌಲರ್ ನವದೀಪ್ ಸೈನಿ ಟೀಮ್ ಇಂಡಿಯಾದ ಭವಿಷ್ಯದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನೂ ಆಡಿದರು. ಹೀಗೆ ಟೀಂ ಇಂಡಿಯಾದಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸೈನಿ ಇಲ್ಲದ ಶೋಕಿ ಮಾಡಲು ಹೋಗಿ ಈಗ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಸೈನಿ ಏನೋ ಮಾಡಲು ಹೋಗಿ ಇನ್ನೇನನ್ನೋ ಮಾಡಿಕೊಂಡಿದ್ದಾರೆ. ಸೈನಿ ಅವರ ಈ ವಿಡಿಯೋ ಟ್ರೋಲಿಗರಿಗೆ ಒಳ್ಳೆಯ ಆಹಾರವಾಗಿ ಹೋಗಿದೆ.

ವೀಡಿಯೊದಲ್ಲಿ ಏನಿದೆ? ಈ ವೀಡಿಯೊದಲ್ಲಿ, ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಜೋರಾಗಿ ಎಕ್ಸಲರೇಟರ್ ಕೊಡುವ ಮೂಲಕ ಹಿಂಬದಿಯ ಚಕ್ರವನ್ನು ವೇಗವಾಗಿ ತಿರುಗಿಸಿ ನೆಲದಿಂದ ಧೂಳನ್ನು ಮೇಲೆಬ್ಬಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿಮಾನಿಗಳಿಂದ ಟ್ರೋಲ್ ಈ ವೀಡಿಯೊವನ್ನು ಸೈನಿ ಪೋಸ್ಟ್ ಮಾಡಿದ ತಕ್ಷಣ, ಅವರ ಅಭಿಮಾನಿಗಳು ಕಾಮೆಂಟ್ಗಳನ್ನು ಸುರಿಸುವ ಮೂಲಕ ಅವರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಅನೇಕರು ಸೈನಿಗೆ ಎಚ್ಚರಿಕೆಯಿಂದ ಬೈಕು ಸವಾರಿ ಮಾಡಲು ಹೇಳಿದ್ದಾರೆ. ಇನ್ನೂ ಕೆಲವರು ಆಟದ ಬಗ್ಗೆ ಹೆಚ್ಚು ಗಮನ ಹರಿಸಲು ಮತ್ತು ಶೌರ್ಯವನ್ನು ಸ್ವಲ್ಪ ಕಡಿಮೆ ಮಾಡಲು ಸಲಹೆ ನೀಡಿದ್ದಾರೆ.

ಸೈನಿ ಕ್ರಿಕೆಟ್ ಜೀವನ ಸೈನಿ ಮೊದಲ ಬಾರಿಗೆ ಐಪಿಎಲ್ 2017 ರಲ್ಲಿ ದೆಹಲಿ ಡೇರ್‌ಡೆವಿಲ್ಸ್‌ನ ಭಾಗವಾದರು. ಆದರೆ ಅಲ್ಲಿ ಅವರಿಗೆ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ. ಒಂದು ವರ್ಷದ ನಂತರ ಐಪಿಎಲ್ 2018 ರ ಹರಾಜಿನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು ಖರೀದಿಸಿತ್ತು. ನವದೀಪ್ ಸೈನಿ ಅಂದಿನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಆಸಕ್ತಿದಾಯಕ ವಿಷಯವೆಂದರೆ. ಐಪಿಎಲ್ 2017 ರಲ್ಲಿ ದೆಹಲಿ ಸೈನಿಯನ್ನು ಕೇವಲ 10 ಲಕ್ಷ ರೂಪಾಯಿಗಳಿಗೆ ತೆಗೆದುಕೊಂಡಿತು. ಆದರೆ ಒಂದು ವರ್ಷದ ನಂತರ ಆರ್‌ಸಿಬಿ ಅವರಿಗೆ ಮೂರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಯಿತು. ರಣಜಿ ಟ್ರೋಫಿಯಲ್ಲಿ ನವದೀಪ್ ಸೈನಿ ಅವರ ಅದ್ಭುತ ಪ್ರದರ್ಶನದಿಂದಾಗಿ ಅವರಿಗೆ ಅಷ್ಟು ಹಣ ನೀಡಬೇಕಾಯಿತು. ಅವರು 2017-18ರಲ್ಲಿ ಎಂಟು ಪಂದ್ಯಗಳಲ್ಲಿ 34 ವಿಕೆಟ್ ಪಡೆದರು. ಇದರಿಂದಾಗಿ ದೆಹಲಿ ತಂಡ ಫೈನಲ್‌ಗೆ ತಲುಪಿತು.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್