AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ

ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಪೃಥ್ವಿಶಂಕರ
|

Updated on: May 31, 2021 | 6:02 PM

Share

ಭಾರತದ ಯುವ ಬೌಲರ್ ನವದೀಪ್ ಸೈನಿ ಟೀಮ್ ಇಂಡಿಯಾದ ಭವಿಷ್ಯದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನೂ ಆಡಿದರು. ಹೀಗೆ ಟೀಂ ಇಂಡಿಯಾದಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸೈನಿ ಇಲ್ಲದ ಶೋಕಿ ಮಾಡಲು ಹೋಗಿ ಈಗ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಸೈನಿ ಏನೋ ಮಾಡಲು ಹೋಗಿ ಇನ್ನೇನನ್ನೋ ಮಾಡಿಕೊಂಡಿದ್ದಾರೆ. ಸೈನಿ ಅವರ ಈ ವಿಡಿಯೋ ಟ್ರೋಲಿಗರಿಗೆ ಒಳ್ಳೆಯ ಆಹಾರವಾಗಿ ಹೋಗಿದೆ.

ವೀಡಿಯೊದಲ್ಲಿ ಏನಿದೆ? ಈ ವೀಡಿಯೊದಲ್ಲಿ, ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಜೋರಾಗಿ ಎಕ್ಸಲರೇಟರ್ ಕೊಡುವ ಮೂಲಕ ಹಿಂಬದಿಯ ಚಕ್ರವನ್ನು ವೇಗವಾಗಿ ತಿರುಗಿಸಿ ನೆಲದಿಂದ ಧೂಳನ್ನು ಮೇಲೆಬ್ಬಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿಮಾನಿಗಳಿಂದ ಟ್ರೋಲ್ ಈ ವೀಡಿಯೊವನ್ನು ಸೈನಿ ಪೋಸ್ಟ್ ಮಾಡಿದ ತಕ್ಷಣ, ಅವರ ಅಭಿಮಾನಿಗಳು ಕಾಮೆಂಟ್ಗಳನ್ನು ಸುರಿಸುವ ಮೂಲಕ ಅವರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಅನೇಕರು ಸೈನಿಗೆ ಎಚ್ಚರಿಕೆಯಿಂದ ಬೈಕು ಸವಾರಿ ಮಾಡಲು ಹೇಳಿದ್ದಾರೆ. ಇನ್ನೂ ಕೆಲವರು ಆಟದ ಬಗ್ಗೆ ಹೆಚ್ಚು ಗಮನ ಹರಿಸಲು ಮತ್ತು ಶೌರ್ಯವನ್ನು ಸ್ವಲ್ಪ ಕಡಿಮೆ ಮಾಡಲು ಸಲಹೆ ನೀಡಿದ್ದಾರೆ.

ಸೈನಿ ಕ್ರಿಕೆಟ್ ಜೀವನ ಸೈನಿ ಮೊದಲ ಬಾರಿಗೆ ಐಪಿಎಲ್ 2017 ರಲ್ಲಿ ದೆಹಲಿ ಡೇರ್‌ಡೆವಿಲ್ಸ್‌ನ ಭಾಗವಾದರು. ಆದರೆ ಅಲ್ಲಿ ಅವರಿಗೆ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ. ಒಂದು ವರ್ಷದ ನಂತರ ಐಪಿಎಲ್ 2018 ರ ಹರಾಜಿನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು ಖರೀದಿಸಿತ್ತು. ನವದೀಪ್ ಸೈನಿ ಅಂದಿನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಆಸಕ್ತಿದಾಯಕ ವಿಷಯವೆಂದರೆ. ಐಪಿಎಲ್ 2017 ರಲ್ಲಿ ದೆಹಲಿ ಸೈನಿಯನ್ನು ಕೇವಲ 10 ಲಕ್ಷ ರೂಪಾಯಿಗಳಿಗೆ ತೆಗೆದುಕೊಂಡಿತು. ಆದರೆ ಒಂದು ವರ್ಷದ ನಂತರ ಆರ್‌ಸಿಬಿ ಅವರಿಗೆ ಮೂರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಯಿತು. ರಣಜಿ ಟ್ರೋಫಿಯಲ್ಲಿ ನವದೀಪ್ ಸೈನಿ ಅವರ ಅದ್ಭುತ ಪ್ರದರ್ಶನದಿಂದಾಗಿ ಅವರಿಗೆ ಅಷ್ಟು ಹಣ ನೀಡಬೇಕಾಯಿತು. ಅವರು 2017-18ರಲ್ಲಿ ಎಂಟು ಪಂದ್ಯಗಳಲ್ಲಿ 34 ವಿಕೆಟ್ ಪಡೆದರು. ಇದರಿಂದಾಗಿ ದೆಹಲಿ ತಂಡ ಫೈನಲ್‌ಗೆ ತಲುಪಿತು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್