AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ

ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ.

ಶೋಕಿ ಕಡಿಮೆ ಮಾಡಿ ಆಟದ ಕಡೆ ಗಮನ ಕೊಡು; ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಹಾರ್ಲೆ ಬೈಕ್‌ ಏರಿ ಬಿಲ್ಡಪ್ ಕೊಟ್ಟ ಸೈನಿಗೆ ಟ್ರೋಲಿಗರಿಂದ ತರಾಟೆ
ಪೃಥ್ವಿಶಂಕರ
|

Updated on: May 31, 2021 | 6:02 PM

Share

ಭಾರತದ ಯುವ ಬೌಲರ್ ನವದೀಪ್ ಸೈನಿ ಟೀಮ್ ಇಂಡಿಯಾದ ಭವಿಷ್ಯದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನೂ ಆಡಿದರು. ಹೀಗೆ ಟೀಂ ಇಂಡಿಯಾದಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸೈನಿ ಇಲ್ಲದ ಶೋಕಿ ಮಾಡಲು ಹೋಗಿ ಈಗ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಸೈನಿ ಏನೋ ಮಾಡಲು ಹೋಗಿ ಇನ್ನೇನನ್ನೋ ಮಾಡಿಕೊಂಡಿದ್ದಾರೆ. ಸೈನಿ ಅವರ ಈ ವಿಡಿಯೋ ಟ್ರೋಲಿಗರಿಗೆ ಒಳ್ಳೆಯ ಆಹಾರವಾಗಿ ಹೋಗಿದೆ.

ವೀಡಿಯೊದಲ್ಲಿ ಏನಿದೆ? ಈ ವೀಡಿಯೊದಲ್ಲಿ, ಸೈನಿ ತನ್ನ ದುಬಾರಿ ಮೋಟಾರುಬೈಕ್ ಹಾರ್ಲೆ ಡೇವಿಡ್ಸನ್ ಮೇಲೆ ಶರ್ಟ್​ ಧರಿಸದೆ ಕುಳಿತಿರುವ ವಿಡಿಯೋ ಹಂಚಿಕೊಂಡು, ಹಾರ್ಲೆ ಡೇವಿಡ್ಸನ್‌ ಬೈಕ್‌ ಓಡಿಸಲು ಭಯ ಅನುಭವಿಸಬೇಕಾದರೆ ನನ್ನ ಜೊತೆಗೆ ಬನ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಜೋರಾಗಿ ಎಕ್ಸಲರೇಟರ್ ಕೊಡುವ ಮೂಲಕ ಹಿಂಬದಿಯ ಚಕ್ರವನ್ನು ವೇಗವಾಗಿ ತಿರುಗಿಸಿ ನೆಲದಿಂದ ಧೂಳನ್ನು ಮೇಲೆಬ್ಬಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿಮಾನಿಗಳಿಂದ ಟ್ರೋಲ್ ಈ ವೀಡಿಯೊವನ್ನು ಸೈನಿ ಪೋಸ್ಟ್ ಮಾಡಿದ ತಕ್ಷಣ, ಅವರ ಅಭಿಮಾನಿಗಳು ಕಾಮೆಂಟ್ಗಳನ್ನು ಸುರಿಸುವ ಮೂಲಕ ಅವರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಅನೇಕರು ಸೈನಿಗೆ ಎಚ್ಚರಿಕೆಯಿಂದ ಬೈಕು ಸವಾರಿ ಮಾಡಲು ಹೇಳಿದ್ದಾರೆ. ಇನ್ನೂ ಕೆಲವರು ಆಟದ ಬಗ್ಗೆ ಹೆಚ್ಚು ಗಮನ ಹರಿಸಲು ಮತ್ತು ಶೌರ್ಯವನ್ನು ಸ್ವಲ್ಪ ಕಡಿಮೆ ಮಾಡಲು ಸಲಹೆ ನೀಡಿದ್ದಾರೆ.

ಸೈನಿ ಕ್ರಿಕೆಟ್ ಜೀವನ ಸೈನಿ ಮೊದಲ ಬಾರಿಗೆ ಐಪಿಎಲ್ 2017 ರಲ್ಲಿ ದೆಹಲಿ ಡೇರ್‌ಡೆವಿಲ್ಸ್‌ನ ಭಾಗವಾದರು. ಆದರೆ ಅಲ್ಲಿ ಅವರಿಗೆ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ. ಒಂದು ವರ್ಷದ ನಂತರ ಐಪಿಎಲ್ 2018 ರ ಹರಾಜಿನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು ಖರೀದಿಸಿತ್ತು. ನವದೀಪ್ ಸೈನಿ ಅಂದಿನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಆಸಕ್ತಿದಾಯಕ ವಿಷಯವೆಂದರೆ. ಐಪಿಎಲ್ 2017 ರಲ್ಲಿ ದೆಹಲಿ ಸೈನಿಯನ್ನು ಕೇವಲ 10 ಲಕ್ಷ ರೂಪಾಯಿಗಳಿಗೆ ತೆಗೆದುಕೊಂಡಿತು. ಆದರೆ ಒಂದು ವರ್ಷದ ನಂತರ ಆರ್‌ಸಿಬಿ ಅವರಿಗೆ ಮೂರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಯಿತು. ರಣಜಿ ಟ್ರೋಫಿಯಲ್ಲಿ ನವದೀಪ್ ಸೈನಿ ಅವರ ಅದ್ಭುತ ಪ್ರದರ್ಶನದಿಂದಾಗಿ ಅವರಿಗೆ ಅಷ್ಟು ಹಣ ನೀಡಬೇಕಾಯಿತು. ಅವರು 2017-18ರಲ್ಲಿ ಎಂಟು ಪಂದ್ಯಗಳಲ್ಲಿ 34 ವಿಕೆಟ್ ಪಡೆದರು. ಇದರಿಂದಾಗಿ ದೆಹಲಿ ತಂಡ ಫೈನಲ್‌ಗೆ ತಲುಪಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ