AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮಿಲ್ಖಾ ಸಿಂಗ್ ನಿಧನಕ್ಕೆ ಕಪ್ಪು​ ಪಟ್ಟಿ ಧರಿಸಿ ಗೌರವ ಸೂಚಿಸಿದ ಟೀಂ ಇಂಡಿಯಾ ಆಟಗಾರರು

WTC Final: ಈ ಪಂದ್ಯದಲ್ಲಿ ಮಿಲ್ಖಾ ಸಿಂಗ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಪ್ಪು ಬ್ಯಾಂಡ್ ಧರಿಸಿ ಮೈದಾನಕ್ಕಿಳಿದಿದೆ.

WTC Final: ಮಿಲ್ಖಾ ಸಿಂಗ್ ನಿಧನಕ್ಕೆ ಕಪ್ಪು​ ಪಟ್ಟಿ ಧರಿಸಿ ಗೌರವ ಸೂಚಿಸಿದ ಟೀಂ ಇಂಡಿಯಾ ಆಟಗಾರರು
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Jun 19, 2021 | 4:11 PM

Share

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಶುಕ್ರವಾರ ತಡರಾತ್ರಿ ನಿಧನರಾದರು. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ ಈ ಓಟಗಾರನಿಗೆ ಗೌರವ ಸಲ್ಲಿಸಲು ಭಾರತೀಯ ಕ್ರಿಕೆಟ್ ತಂಡ ನಿರ್ಧರಿಸಿದೆ. ಭಾರತ ತಂಡವು ಪ್ರಸ್ತುತ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿದೆ ಮತ್ತು ನ್ಯೂಜಿಲೆಂಡ್ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಮಿಲ್ಖಾ ಸಿಂಗ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಪ್ಪು ಬ್ಯಾಂಡ್ ಧರಿಸಿ ಮೈದಾನಕ್ಕಿಳಿದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕೋವಿಡ್ -19 ರ ಕಾರಣದಿಂದಾಗಿ ನಿಧನರಾದ ಮಿಲ್ಖಾ ಸಿಂಗ್ ಅವರಿಗೆ ಗೌರವ ಸೂಚಿಸುವುದಕ್ಕಾಗಿ ಭಾರತೀಯ ತಂಡ ಕಪ್ಪು ಬ್ಯಾಂಡ್ ಧರಿಸಲಿದೆ ಎಂದು ಹೇಳಿದೆ.

ಆಮ್ಲಜನಕದ ಮಟ್ಟ ಕಡಿಮೆಯಾಗಿತ್ತು ಮಿಲ್ಖಾ ಸಿಂಗ್ ಅವರನ್ನು ಜೂನ್ 3 ರಂದು ಪಿಜಿಐ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಹಿಂದೆ ಅವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಆಮ್ಲಜನಕದ ಮಟ್ಟ ಕಡಿಮೆ ಇದ್ದುದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೊರೊನಾ ಸೋಂಕಿನಿಂದ ಅವರು ಸಂಪೂರ್ಣ ಗುಣಮುಖರಾಗಿದ್ದರು. ಇದರ ನಂತರ ಅವರನ್ನು ಕೋವಿಡ್ ಐಸಿಯುನಿಂದ ಸಾಮಾನ್ಯ ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ ಈ ಕಾಯಿಲೆಯಿಂದ ಉಂಟಾದ ತೊಂದರೆಗಳಿಂದಾಗಿ ಅವರ ಸ್ಥಿತಿ ಗಂಭೀರವಾಗಿತ್ತು ಇದರ ಅಡಿಯಲ್ಲಿ, ಶುಕ್ರವಾರ, ಅವರ ಆಮ್ಲಜನಕದ ಮಟ್ಟ ಕಡಿಮೆಯಾಗಿತ್ತು. ಜೊತೆಗೆ ಜ್ವರ ಕಾಣಸಿಕೊಂಡಿತ್ತು. ನಂತರ ಮಿಲ್ಖಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಪತ್ನಿ ಐದು ದಿನಗಳ ಹಿಂದೆ ನಿಧನರಾದರು ಮಿಲ್ಖಾ ಅವರ ನಿಧನದ ಬಗ್ಗೆ ಕುಟುಂಬಸ್ಥರು ತಡರಾತ್ರಿ ಮಾಹಿತಿ ನೀಡಿದ್ದರು. ಮಿಲ್ಖಾ ಅವರ ನಿಧನಕ್ಕೂ ಮೊದಲು ಅವರ ಪತ್ನಿ ನಿರ್ಮಲ್ ಕೌರ್ ಜೂನ್ 13 ರಂದು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದರು. ಕೌರ್ ಸ್ವತಃ ಕ್ರೀಡಾಪಟುವಾಗಿದ್ದರು. ಅವರು ಭಾರತೀಯ ಮಹಿಳಾ ವಾಲಿಬಾಲ್ ತಂಡದ ನಾಯಕರಾಗಿದ್ದರು. ನಿರ್ಮಲ್ ಕೌರ್ 1962 ರಲ್ಲಿ ಮಿಲ್ಖಾ ಸಿಂಗ್ ಅವರನ್ನು ವಿವಾಹವಾಗಿದ್ದರು.

ಭಾರತ ಉತ್ತಮ ಆರಂಭ ಇನ್ನೂ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ ಸೆಷನ್​ನಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 41 ರನ್ ಗಳಿಸಿದೆ. ಆರಂಭಿಕರಾಗಿ ಕಣಕ್ಕಿಳಿದಿರುವ ರೋಹಿತ್ ಹಾಗೂ ಗಿಲ್ ಉತ್ತಮ ಜೊತೆಯಾಟ ಆಡುತ್ತಿದ್ದಾರೆ.

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್