AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ

Father's Day 2021: ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು.

Father's Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ
ತಂದೆ ನೆನೆದು ಭಾವುಕರಾದ ಸಚಿನ್
Follow us
ಪೃಥ್ವಿಶಂಕರ
|

Updated on: Jun 20, 2021 | 3:14 PM

ಬ್ಯಾಟಿಂಗ್ ಪರಾಕ್ರಮದಿಂದ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ ಸಚಿನ್ ರಮೇಶ್ ತೆಂಡೂಲ್ಕರ್ ಅವರ ಹೆಸರು ಕ್ರಿಕೆಟ್​ ದುನಿಯಾದಲ್ಲಿ ಅಚ್ಚಳಿಯದೆ ಉಳಿದಿದೆ. ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರುವ ಸಚಿನ್ ಅವರು ಇಂದು ತಂದೆಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ವಿಶೇಷ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಸಚಿನ್ ತನ್ನ ತಂದೆ ರಮೇಶ್ ತೆಂಡೂಲ್ಕರ್ ಅವರ ನೆನಪಿಗಾಗಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ತಮ್ಮ ತಂದೆಯೊಂದಿಗಿನ ಘಟನೆಯನ್ನು ಹಂಚಿಕೊಂಡಿದ್ದಾರೆ.

ಸಚಿನ್ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರ ತಂದೆ ವಿಶ್ರಾಂತಿ ಪಡೆಯಲು ಕೂರುತ್ತಿದ್ದ ತೂಗುಯ್ಯಾಲೆ ಮಾದರಿಯ ಚೇರ್​ ಬಗ್ಗೆ ಭಾವನಾತ್ಮಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಚಿನ್ ಇದನ್ನು ಹೇಳುತ್ತಿರುವಾಗ, ಅವರು ಕೂಡ ಭಾವುಕರಾಗುವುದನ್ನು ಕಾಣಬಹುದು.

ತಂದೆ ಸಾವಿನ ದುಃಖದಲ್ಲೂ ಕ್ರಿಕೆಟ್ ಆಡಿದ ಸಚಿನ್ ಸಚಿನ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಆದರೆ ಸಚಿನ್ ಈ ಪದವಿಗಾಗಿ ಶ್ರಮಿಸಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಅನುಭವಿ ಬೌಲರ್‌ನನ್ನು ಎದುರಿಸಿದ ಸಚಿನ್, ಪ್ರತಿಯೊಂದು ಪರಿಸ್ಥಿತಿಯಲ್ಲೂ ಭಾರತ ಪರ ಮಿಂಚಿದ್ದಾರೆ. ಅಂತಹ ಸ್ಮರಣಿಯ ಆಟವನ್ನು ಅನೇಕರು ಮರೆತಿರಬಹುದು. ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು. ಸಚಿನ್ ಸಂದರ್ಶನವೊಂದರಲ್ಲಿ ಈ ಘಟನೆಯನ್ನು ನೆನೆದು ಭಾವುಕರಾಗಿದ್ದರು. ತಂದೆಯ ಹಠಾತ್ ಸಾವಿನಿಂದ ಸಚಿನ್ ವಿಶ್ವಕಪ್‌ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಪೋಹಗಳು ಎದ್ದಿದ್ದವು. ಆದರೆ ವಿಶ್ವಕಪ್‌ನಲ್ಲಿ ಆಡುವುದನ್ನು ಮುಂದುವರೆಸಲು ತಾಯಿ ಒತ್ತಾಯಿಸಿದ ನಂತರ ಸಚಿನ್ ಮೈದಾನಕ್ಕೆ ಇಳಿದಿದ್ದರು.

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು