AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ

Father's Day 2021: ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು.

Father's Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ
ತಂದೆ ನೆನೆದು ಭಾವುಕರಾದ ಸಚಿನ್
ಪೃಥ್ವಿಶಂಕರ
|

Updated on: Jun 20, 2021 | 3:14 PM

Share

ಬ್ಯಾಟಿಂಗ್ ಪರಾಕ್ರಮದಿಂದ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ ಸಚಿನ್ ರಮೇಶ್ ತೆಂಡೂಲ್ಕರ್ ಅವರ ಹೆಸರು ಕ್ರಿಕೆಟ್​ ದುನಿಯಾದಲ್ಲಿ ಅಚ್ಚಳಿಯದೆ ಉಳಿದಿದೆ. ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರುವ ಸಚಿನ್ ಅವರು ಇಂದು ತಂದೆಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ವಿಶೇಷ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಸಚಿನ್ ತನ್ನ ತಂದೆ ರಮೇಶ್ ತೆಂಡೂಲ್ಕರ್ ಅವರ ನೆನಪಿಗಾಗಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ತಮ್ಮ ತಂದೆಯೊಂದಿಗಿನ ಘಟನೆಯನ್ನು ಹಂಚಿಕೊಂಡಿದ್ದಾರೆ.

ಸಚಿನ್ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರ ತಂದೆ ವಿಶ್ರಾಂತಿ ಪಡೆಯಲು ಕೂರುತ್ತಿದ್ದ ತೂಗುಯ್ಯಾಲೆ ಮಾದರಿಯ ಚೇರ್​ ಬಗ್ಗೆ ಭಾವನಾತ್ಮಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಚಿನ್ ಇದನ್ನು ಹೇಳುತ್ತಿರುವಾಗ, ಅವರು ಕೂಡ ಭಾವುಕರಾಗುವುದನ್ನು ಕಾಣಬಹುದು.

ತಂದೆ ಸಾವಿನ ದುಃಖದಲ್ಲೂ ಕ್ರಿಕೆಟ್ ಆಡಿದ ಸಚಿನ್ ಸಚಿನ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಆದರೆ ಸಚಿನ್ ಈ ಪದವಿಗಾಗಿ ಶ್ರಮಿಸಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಅನುಭವಿ ಬೌಲರ್‌ನನ್ನು ಎದುರಿಸಿದ ಸಚಿನ್, ಪ್ರತಿಯೊಂದು ಪರಿಸ್ಥಿತಿಯಲ್ಲೂ ಭಾರತ ಪರ ಮಿಂಚಿದ್ದಾರೆ. ಅಂತಹ ಸ್ಮರಣಿಯ ಆಟವನ್ನು ಅನೇಕರು ಮರೆತಿರಬಹುದು. ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು. ಸಚಿನ್ ಸಂದರ್ಶನವೊಂದರಲ್ಲಿ ಈ ಘಟನೆಯನ್ನು ನೆನೆದು ಭಾವುಕರಾಗಿದ್ದರು. ತಂದೆಯ ಹಠಾತ್ ಸಾವಿನಿಂದ ಸಚಿನ್ ವಿಶ್ವಕಪ್‌ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಪೋಹಗಳು ಎದ್ದಿದ್ದವು. ಆದರೆ ವಿಶ್ವಕಪ್‌ನಲ್ಲಿ ಆಡುವುದನ್ನು ಮುಂದುವರೆಸಲು ತಾಯಿ ಒತ್ತಾಯಿಸಿದ ನಂತರ ಸಚಿನ್ ಮೈದಾನಕ್ಕೆ ಇಳಿದಿದ್ದರು.

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ