AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ

Father's Day 2021: ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು.

Father's Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ
ತಂದೆ ನೆನೆದು ಭಾವುಕರಾದ ಸಚಿನ್
ಪೃಥ್ವಿಶಂಕರ
|

Updated on: Jun 20, 2021 | 3:14 PM

Share

ಬ್ಯಾಟಿಂಗ್ ಪರಾಕ್ರಮದಿಂದ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ ಸಚಿನ್ ರಮೇಶ್ ತೆಂಡೂಲ್ಕರ್ ಅವರ ಹೆಸರು ಕ್ರಿಕೆಟ್​ ದುನಿಯಾದಲ್ಲಿ ಅಚ್ಚಳಿಯದೆ ಉಳಿದಿದೆ. ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರುವ ಸಚಿನ್ ಅವರು ಇಂದು ತಂದೆಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ವಿಶೇಷ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಸಚಿನ್ ತನ್ನ ತಂದೆ ರಮೇಶ್ ತೆಂಡೂಲ್ಕರ್ ಅವರ ನೆನಪಿಗಾಗಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ತಮ್ಮ ತಂದೆಯೊಂದಿಗಿನ ಘಟನೆಯನ್ನು ಹಂಚಿಕೊಂಡಿದ್ದಾರೆ.

ಸಚಿನ್ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರ ತಂದೆ ವಿಶ್ರಾಂತಿ ಪಡೆಯಲು ಕೂರುತ್ತಿದ್ದ ತೂಗುಯ್ಯಾಲೆ ಮಾದರಿಯ ಚೇರ್​ ಬಗ್ಗೆ ಭಾವನಾತ್ಮಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಚಿನ್ ಇದನ್ನು ಹೇಳುತ್ತಿರುವಾಗ, ಅವರು ಕೂಡ ಭಾವುಕರಾಗುವುದನ್ನು ಕಾಣಬಹುದು.

ತಂದೆ ಸಾವಿನ ದುಃಖದಲ್ಲೂ ಕ್ರಿಕೆಟ್ ಆಡಿದ ಸಚಿನ್ ಸಚಿನ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಆದರೆ ಸಚಿನ್ ಈ ಪದವಿಗಾಗಿ ಶ್ರಮಿಸಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಅನುಭವಿ ಬೌಲರ್‌ನನ್ನು ಎದುರಿಸಿದ ಸಚಿನ್, ಪ್ರತಿಯೊಂದು ಪರಿಸ್ಥಿತಿಯಲ್ಲೂ ಭಾರತ ಪರ ಮಿಂಚಿದ್ದಾರೆ. ಅಂತಹ ಸ್ಮರಣಿಯ ಆಟವನ್ನು ಅನೇಕರು ಮರೆತಿರಬಹುದು. ಅದು 1999 ರ ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ ಸಚಿನ್ 140 ರನ್ ಗಳಿಸಿದರು. ತಂದೆ ತೀರಿಕೊಂಡ ಮೂರು ದಿನಗಳ ನಂತರ ಅವರು ಈ ಅದ್ಭುತ ಇನ್ನಿಂಗ್ಸ್ ಆಡಿದರು. ಸಚಿನ್ ಸಂದರ್ಶನವೊಂದರಲ್ಲಿ ಈ ಘಟನೆಯನ್ನು ನೆನೆದು ಭಾವುಕರಾಗಿದ್ದರು. ತಂದೆಯ ಹಠಾತ್ ಸಾವಿನಿಂದ ಸಚಿನ್ ವಿಶ್ವಕಪ್‌ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಪೋಹಗಳು ಎದ್ದಿದ್ದವು. ಆದರೆ ವಿಶ್ವಕಪ್‌ನಲ್ಲಿ ಆಡುವುದನ್ನು ಮುಂದುವರೆಸಲು ತಾಯಿ ಒತ್ತಾಯಿಸಿದ ನಂತರ ಸಚಿನ್ ಮೈದಾನಕ್ಕೆ ಇಳಿದಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ