AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Vs Australia Test Series 2020 | ಭಾರತದ ಫೀಲ್ಡರ್​ಗಳು ಕ್ರಿಸ್​ಮಸ್ ಮೂಡ್​ನಲ್ಲಿದ್ದಾರೆ: ಗಾವಸ್ಕರ್ ಟೀಕೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹಲವಾರು ವರ್ಷಗಳಿಂದ ಫೀಲ್ಡಿಂಗ್ ಕೋಚ್​ನನ್ನು ನೇಮಕ ಮಾಡುತ್ತಿದೆ. ಆದರೆ ಟೀಮ್ ಇಂಡಿಯಾದ ಫೀಲ್ಡಿಂಗ್ ಗುಣಮಟ್ಟ ಸುಧಾರಿಸುತ್ತಿಲ್ಲ.

India Vs Australia Test Series 2020 | ಭಾರತದ ಫೀಲ್ಡರ್​ಗಳು ಕ್ರಿಸ್​ಮಸ್ ಮೂಡ್​ನಲ್ಲಿದ್ದಾರೆ: ಗಾವಸ್ಕರ್ ಟೀಕೆ
ಲಬುಶೇನ್ ನೀಡಿದ ಕ್ಯಾಚ್ ಡ್ರಾಪ್ ಮಾಡುತ್ತಿರುವ ಪೃಥ್ವಿ ಶಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Dec 18, 2020 | 9:17 PM

Share

ಅಡಿಲೇಡ್ ಮೈದಾನದಲ್ಲಿಂದು ಭಾರತದ ಫೀಲ್ಡರ್​ಗಳು ಅಸ್ಟ್ರೇಲಿಯ ಆಟಗಾರರಿಗೆ ತೋರಿಸಿದ ಔದಾರ್ಯವನ್ನು ಭಾರತದ ಮಾಜಿ ಆರಂಭ ಆಟಗಾರ ಸುನಿಲ್ ಗಾವಸ್ಕರ್ ತೀವ್ರವಾಗಿ ಟೀಕಿಸಿದ್ದಾರೆ. ಭಾರತೀಯರ ಫೀಲ್ಡಂಗ್ ಕ್ವಾಲಿಟಿ ಬಗ್ಗೆ ಪದೇಪದೆ ಪ್ರಶ್ನೆಗಳೇಳುತ್ತಿವೆ, ಆದರೆ ಸುಧಾರಣೆ ಮಾತ್ರ ಕಂಡುಬರುತ್ತಿಲ್ಲ.

ಅಸ್ಟ್ರೇಲಿಯಾದ ಮೂರನೇ ಕ್ರಮಾಂಕದ ಆಟಗಾರ ಮಾರ್ನಸ್ ಲಬುಶೇನ್ ಇವತ್ತು ಉಪಯುಕ್ತ 47 ರನ್ ಬಾರಿಸಿ ಔಟಾಗುವ ಮೊದಲು ಎರಡು ಬಾರಿ ಜೀವದಾನ ಪಡೆದರು. ಅವರ ವೈಯಕ್ಕಿಕ ಸ್ಕೋರ್ 12 ಆಗಿದ್ದಾಗ ಫೈನ್​ಲೆಗ್​ನಲ್ಲಿದ್ದ ಜಸ್ಪ್ರೀತ್ ಬುಮ್ರಾ ಒಂದು ಸುಲಭವಾದ ಕ್ಯಾಚ್ ಕೈಚೆಲ್ಲಿದ್ದರು. ಬೌಲರ್ ಮೊಹಮ್ಮದ್ ಶಮಿ ಮುಖ ಸಪ್ಪೆ ಮಾಡಿಕೊಂಡರು.

ಅದಾದ ಮೇಲೆ ಲಬುಶೇನ್ 21 ರನ್ ಗಳಿಸಿ ಆಡುತ್ತಿದ್ದಾಗ ಪೃಥ್ವಿ ಶಾ ಅವರಿಂದ ಜೀವದಾನ ಪಡೆದರು. ಇದು ಕ್ಯಾಚ್ ಬುಮ್ರಾ ಬಿಟ್ಟಿದ್ದಕ್ಕಿಂತ ಸುಲಭವಾಗಿತ್ತು. ಕ್ಯಾಚ್ ಹಿಡಿಯಲು ಗಂಭೀರ ಪ್ರಯತ್ನ ಮಾಡದ ಟೀಮ್ ಇಂಡಿಯಾದ ಆಟಗಾರರನ್ನು ಗಾವಸ್ಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಬುಮ್ರಾ ಕ್ಯಾಚ್ ಬಿಟ್ಟಿದ್ದು ಹೀಗೆ!

‘ಇವರೆಲ್ಲ ಕ್ರಿಸ್​ಮಸ್​ ಮೂಡ್​ನಲ್ಲಿರುವಂತಿದೆ. ಒಂದು ವಾರ ಮೊದಲೇ ಹಬ್ಬದ ಗಿಫ್ಟ್​ಗಳನ್ನು ನೀಡುತ್ತಿದ್ದಾರೆ’ ಎಂದು ಗಾವಸ್ಕರ್ ಕ್ರಿಕೆಟ್ ಜಾಲತಾಣದ ಪ್ರತಿನಿಧಿಯೊಬ್ಬರ ಜೊತೆಗೆ ಮಾತನಾಡುವಾಗ ಹೇಳಿದ್ದರು.

ಶಾ ಅವರ ಕಳಪೆ ಫೀಲ್ಡಿಂಗ್ ನೆಟ್ಟಿಗರಿಂದಲೂ ಭಯಾನಕವಾಗಿ ಟ್ರೋಲ್ ಆಗುತ್ತಿದೆ. ಮಿಹಿರ್ ಝಾ ಎನ್ನುವವರು, ಶಾಗೆ ಕ್ಯಾಚ್​ಗಳನ್ನು ಹಿಡಿಯುವುದೂ ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದರೆ, ರೋಹನ್ ಛಾಬ್ರಾ ಹೆಸರಿನ ವ್ಯಕ್ತಿ, ಶಾ ಕ್ಯಾಚ್ ಹಿಡಿಯಲು ಮಾಡಿದ ಪ್ರಯತ್ನ ಪಾರ್ಕ್​ನಲ್ಲಿ ಆಟವಾಡಿದಂತಿತ್ತು ಎಂದಿದ್ದಾರೆ.

ಸುನಿಲ್ ಗಾವಸ್ಕರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ