AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವತಂತ್ರ ಭಾರತಕ್ಕೆ ಮೊದಲ ಒಲಿಂಪಿಕ್ ಚಿನ್ನದ ಪದಕ ಗೆದ್ದಿದ್ದ ಹಾಕಿ ದಂತಕಥೆ ಕೇಶವ್ ದತ್ ಇನ್ನಿಲ್ಲ

1948 ರ ಲಂಡನ್ ಕ್ರೀಡಾಕೂಟದಲ್ಲಿ ದತ್ ಭಾರತೀಯ ತಂಡದ ಭಾಗವಾಗಿದ್ದರು, ಅಲ್ಲಿ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಭಾರತ ಹಾಕಿಯಲ್ಲಿ ಚಿನ್ನದ ಪದಕ ಗೆದ್ದಿತು.

ಸ್ವತಂತ್ರ ಭಾರತಕ್ಕೆ ಮೊದಲ ಒಲಿಂಪಿಕ್ ಚಿನ್ನದ ಪದಕ ಗೆದ್ದಿದ್ದ ಹಾಕಿ ದಂತಕಥೆ ಕೇಶವ್ ದತ್ ಇನ್ನಿಲ್ಲ
ಕೇಶವ್ ದತ್
ಪೃಥ್ವಿಶಂಕರ
|

Updated on: Jul 07, 2021 | 8:22 PM

Share

ಒಲಿಂಪಿಕ್ಸ್‌ನಲ್ಲಿ 1948 ಮತ್ತು 1952 ರ ಚಿನ್ನದ ಪದಕ ವಿಜೇತ ಹಾಕಿ ತಂಡದ ಭಾಗವಾಗಿದ್ದ ಹಿರಿಯ ಆಟಗಾರ ಕೇಶವ್ ದತ್ ಬುಧವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು. ಜುಲೈ 7 ರಂದು ಕೋಲ್ಕತ್ತಾದ ಸಂತೋಷ್‌ಪುರದಲ್ಲಿರುವ ತಮ್ಮ ಮನೆಯಲ್ಲಿ ದತ್ ಕೊನೆಯುಸಿರೆಳೆದರು. ಅವರ ನಿಧನಕ್ಕೆ ಹಾಕಿ ಭಾರತ ಅಧ್ಯಕ್ಷ ಜ್ಞಾನಂದ್ರೊ ನಿಂಗೋಂಬಮ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಭಾರತೀಯ ತಂಡದ ನಂತರ, ಅವರು ಬಂಗಾಳದ ಮೋಹನ್ ಬಗಾನ್ ಹಾಕಿ ತಂಡದ ಪರವಾಗಿಯೂ ಆಡಿದರು.

ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಭಾರತೀಯ ತಂಡದ ಪ್ರಮುಖ ಭಾಗವಾಗಿದ್ದ ದತ್, 1951, 1953ರಲ್ಲಿ ಮತ್ತು ಮತ್ತೆ 1957, 1958ರಲ್ಲಿ ಮೋಹನ್ ಬಗಾನ್ ಹಾಕಿ ತಂಡವನ್ನು ಮುನ್ನಡೆಸಿದರು. ಅವರ ಉಪಸ್ಥಿತಿಯಲ್ಲಿರುವ ಮೋಹನ್ ಬಗಾನ್ ತಂಡವು 10 ವರ್ಷಗಳಲ್ಲಿ ಆರು ಬಾರಿ ಹಾಕಿ ಲೀಗ್ ಪ್ರಶಸ್ತಿಯನ್ನು ಮತ್ತು ಬ್ಯಾಟನ್ ಕಪ್ ಅನ್ನು ಮೂರು ಬಾರಿ ಗೆದ್ದಿದೆ. ಅವರಿಗೆ 2019 ರಲ್ಲಿ ಮೋಹನ್ ಬಗಾನ್ ರತ್ನ ನೀಡಲಾಯಿತು ಮತ್ತು ಈ ಗೌರವವನ್ನು ಪಡೆದ ಮೊದಲ ಫುಟ್ಬಾಲ್ ಅಲ್ಲದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಅವರ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಹಾಕಿ ಜಗತ್ತು ಇಂದು ನಿಜವಾದ ಶ್ರೇಷ್ಠ ಆಟಗಾರನನ್ನು ಕಳೆದುಕೊಂಡಿದೆ ಎಂದು ಮಮತಾ ಟ್ವೀಟ್ ಮಾಡಿದ್ದಾರೆ. ಕೇಶವ್ ದತ್ ಅವರ ನಿಧನದಿಂದ ಬೇಸರವಾಯಿತು. ಅವರು 1948 ಮತ್ತು 1952 ರಲ್ಲಿ ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದ ಭಾರತೀಯ ತಂಡಗಳ ಭಾಗವಾಗಿದ್ದರು. ಭಾರತ ಮತ್ತು ಬಂಗಾಳದ ಚಾಂಪಿಯನ್. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ.

ಹಾಕಿ ಅಧ್ಯಕ್ಷರು ದುಃಖ ವ್ಯಕ್ತಪಡಿಸಿದರು 1948 ರ ಲಂಡನ್ ಕ್ರೀಡಾಕೂಟದಲ್ಲಿ ದತ್ ಭಾರತೀಯ ತಂಡದ ಭಾಗವಾಗಿದ್ದರು, ಅಲ್ಲಿ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಭಾರತ ಹಾಕಿಯಲ್ಲಿ ಚಿನ್ನದ ಪದಕ ಗೆದ್ದಿತು. ಅವರು 1952 ರ ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಹಾಕಿ ತಂಡದ ಭಾಗವಾಗಿದ್ದರು. ಹಾಕಿ ಇಂಡಿಯಾ ಅಧ್ಯಕ್ಷ ಜ್ಞಾನಂದ್ರೊ ನಿಂಗೋಂಬಮ್ ಹೇಳಿಕೆಯಲ್ಲಿ, ಖ್ಯಾತ ಹಾಫ್ಬ್ಯಾಕ್ ಕೇಶವ್ ದತ್ ಅವರು ಇಂದು ಮುಂಜಾನೆ ಸಾವನ್ನಪ್ಪಿದ ಬಗ್ಗೆ ಕೇಳಿ ನಾವೆಲ್ಲರೂ ತುಂಬಾ ದುಃಖಿತರಾಗಿದ್ದೇವೆ. 1948 ಮತ್ತು 1952 ರ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಭಾರತೀಯ ತಂಡಗಳಲ್ಲಿ ಉಳಿದಿದ್ದ ಏಕೈಕ ಸದಸ್ಯ ಅವರು ಮತ್ತು ಇಂದು ಒಂದು ಯುಗವು ಅಂತ್ಯಗೊಂಡಿದೆ ಎಂದು ತೋರುತ್ತದೆ.

ನಾವೆಲ್ಲರೂ ಸ್ವತಂತ್ರ ಭಾರತಕ್ಕಾಗಿ ಒಲಿಂಪಿಕ್ಸ್ನಲ್ಲಿ ಅವರ ಸ್ಮರಣೀಯ ಪಂದ್ಯಗಳ ಅದ್ಭುತ ಕಥೆಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅವರು ದೇಶದ ತಲೆಮಾರುಗಳ ಹಾಕಿ ಆಟಗಾರರಿಗೆ ಸ್ಫೂರ್ತಿ ನೀಡಿದರು. ಹಾಕಿ ಇಂಡಿಯಾ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ ಮತ್ತು ಒಕ್ಕೂಟದ ಪರವಾಗಿ ಅವರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದರು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ