AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹಾಕಿ ತಂಡದ ಮಾಜಿ ಕೋಚ್ ಕನ್ನಡಿಗ ಮನೋಹರ್ ಎಸ್​ ಕಟ್ಕೆ ನಿಧನ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನಿವೃತ್ತಿಯ ಬಳಿಕವು ಇವರನ್ನು ಹಾಕಿ ಕೋಚ್​ ಆಗಿ ಬಳಸಿಕೊಳ್ಳುತ್ತಿತ್ತು. ನಿವೃತ್ತಿ ಬಳಿಕ ಬಡ ಹಾಗೂ ಗ್ರಾಮೀಣ ಬಾಗದ ಪ್ರತಿಭಾವಂತ ಮಕ್ಕಳಿಗೆ ಉಚಿತ ತರಬೇತಿ ನೀಡುತ್ತಿದ್ದರು.

ರಾಷ್ಟ್ರೀಯ ಹಾಕಿ ತಂಡದ ಮಾಜಿ ಕೋಚ್ ಕನ್ನಡಿಗ ಮನೋಹರ್ ಎಸ್​ ಕಟ್ಕೆ ನಿಧನ
ಮನೋಹರ್ ಎಸ್​ ಕಟ್ಕೆ
ಪೃಥ್ವಿಶಂಕರ
|

Updated on: May 20, 2021 | 5:32 PM

Share

ಭಾರತದ ರಾಷ್ಟ್ರೀಯ ಹಾಕಿ ತಂಡದ ತರಬೇತುದಾರರಾಗಿದ್ದ ಮನೋಹರ್ ಎಸ್​ ಕಟ್ಕೆ (66 ವರ್ಷ) ಅವರು ತೀವ್ರ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ (ಕಟ್ಕೆ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ). ಕರುಳಿಗೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ಕಟ್ಕೆ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕೆತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಟ್ಕೆ ಅವರು ಇಂದು ವಿಧಿವಶರಾಗಿದ್ದಾರೆ.

ನಿವೃತ್ತಿಯ ಬಳಿಕವು ಸೇವೆ ಸಲ್ಲಿಸಿದ್ದಾರೆ ರಾಷ್ಟ್ರೀಯ ಹಾಕಿ ತಂಡಕ್ಕೆ ಕೋಚ್​ ಆಗಿ ತಮ್ಮ ಸುದೀರ್ಘ ಸೇವೆ ಸಲ್ಲಿಸಿದ ನಂತರ 6 ವರ್ಷದ ಹಿಂದೆ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು. ಆದರೆ ಇವರ ಕಾರ್ಯವೈಖರಿಯನ್ನು ಗಮನಿಸಿದ್ದ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನಿವೃತ್ತಿಯ ಬಳಿಕವು ಇವರನ್ನು ಹಾಕಿ ಕೋಚ್​ ಆಗಿ ಬಳಸಿಕೊಳ್ಳುತ್ತಿತ್ತು. ನಿವೃತ್ತಿ ಬಳಿಕ ಬಡ ಹಾಗೂ ಗ್ರಾಮೀಣ ಬಾಗದ ಪ್ರತಿಭಾವಂತ ಮಕ್ಕಳಿಗೆ ಉಚಿತ ತರಬೇತಿ ನೀಡುತ್ತಿದ್ದರು.

ಕಟ್ಕೆ ಅವರು ಕೇವಲ ಹಾಕಿ ತಂಡದ ಕೋಚ್ ಮಾತ್ರವಲ್ಲದೆ, ಬೆಂಗಳೂರು ವಿಶ್ವವಿದ್ಯಾಲಯದ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಈ ವೇಳೆ ಇವರ ತರಬೇತಿಯಲ್ಲಿ ಬೆಂಗಳೂರು ದಕ್ವಿಣ ವಿಭಾಗವು ರಾಜ್ಯದ ಪರವಾಗಿ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದಿತ್ತು. ಜೊತೆಗೆ ಕರ್ನಾಟಕದಿಂದ ಭಾರತ ಹಾಕಿ ತಂಡವನ್ನು ಪ್ರತಿನಿಧಿಸಿರುವ ಹಲವು ಪ್ರಖ್ಯಾತ ಹಾಕಿ ಆಟಗಾರರಿಗೆ ತರಬೇತಿ ನೀಡಿದ್ದಾರೆ. ಜೊತೆಗೆ ಇವರ ತರಬೇತಿಯಲ್ಲಿ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುಮಾರು 20 ಆಟಗಾರರು ಭಾಗವಹಿಸಿದ್ದಾರೆ.

ಮನೋಹರ್ ಎಸ್​ ಕಟ್ಕೆ ಗರಡಿಯಲ್ಲಿ ಪಳಗಿದವರು ಅರ್ಜುನ್ ಹಾಲಪ್ಪ, ರಘುನಾಥ್ ವಿ.ಆರ್ ಎಸ್.ಕೆ.ಉಥಪ್ಪ ವಿಕ್ರಮ್ ಕಾಂತ್ ವಿನಯ್

ಮನೋಹರ್ ಎಸ್​ ಕಟ್ಕೆ ಅವರ ಜೀವಮಾನ ಸಾಧನೆಗಾಗಿ ಹಲವಾರು ಪ್ರಶಸ್ತಿಗಳು ಸಂಧಿವೆ. ಜೊತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಸರ್ಕಾರದಲ್ಲಿ ಇವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ಅನೇಕ ಅತ್ಯುತ್ತಮ ತರಬೇತುದಾರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಜೀವಮಾನ ಸಾಧನೆ ಪ್ರಶಸ್ತಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ