AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympic: ಆರ್ಚರಿ ವಿಭಾಗದ ಶ್ರೇಯಾಂಕ ಸುತ್ತಿನಲ್ಲಿ ಅಗ್ರ -10 ರಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು

Tokyo Paralympic: ಬಿಲ್ಲುಗಾರಿಕೆಯಲ್ಲಿ ಭಾರತವು ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಭಾರತೀಯ ಕಾಂಪೌಂಡ್ ಆರ್ಚರ್ ರಾಕೇಶ್ ಕುಮಾರ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಪುರುಷರ ಓಪನ್ ರ್ಯಾಂಕಿಂಗ್ ಸುತ್ತಿನಲ್ಲಿ 720 ರಲ್ಲಿ 699 ಅಂಕ ಗಳಿಸಿದರು.

Tokyo Paralympic: ಆರ್ಚರಿ ವಿಭಾಗದ ಶ್ರೇಯಾಂಕ ಸುತ್ತಿನಲ್ಲಿ ಅಗ್ರ -10 ರಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು
ಆರ್ಚರ್ ರಾಕೇಶ್ ಕುಮಾರ್
TV9 Web
| Edited By: |

Updated on: Aug 27, 2021 | 6:10 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್ -2020 ರಲ್ಲಿ ಶುಕ್ರವಾರ ಭಾರತಕ್ಕೆ ಒಳ್ಳೆಯ ದಿನವಾಗಿತ್ತು. ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಸೆಮಿಫೈನಲ್ ತಲುಪುವ ಮೂಲಕ ಐತಿಹಾಸಿಕ ಸಾಧನೆ ಮಾಡಿದರು. ಇದರ ಹೊರತಾಗಿ, ಬಿಲ್ಲುಗಾರಿಕೆಯಲ್ಲಿ ಭಾರತವು ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಭಾರತೀಯ ಕಾಂಪೌಂಡ್ ಆರ್ಚರ್ ರಾಕೇಶ್ ಕುಮಾರ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಪುರುಷರ ಓಪನ್ ರ್ಯಾಂಕಿಂಗ್ ಸುತ್ತಿನಲ್ಲಿ 720 ರಲ್ಲಿ 699 ಅಂಕ ಗಳಿಸಿದರು. 2019 ರ ಏಷ್ಯನ್ ಪ್ಯಾರಾ ಚಾಂಪಿಯನ್‌ಶಿಪ್ ವಿಜೇತ ವಿವೇಕ್ ಚಿಕಾರಾ ಪುರುಷರ ರಿಕರ್ವ್ ಓಪನ್ ವಿಭಾಗದಲ್ಲಿ ಮೊದಲ ಹತ್ತು ಸ್ಥಾನ ಗಳಿಸಿದರು.

ವಿಶ್ವ ನಂ 11 ಬಿಲ್ಲುಗಾರ ರಾಕೇಶ್ ಈ ವರ್ಷ ದುಬೈನಲ್ಲಿ ನಡೆದ ಮೊದಲ ವಿಶ್ವ ಶ್ರೇಯಾಂಕ ಪಂದ್ಯಾವಳಿಯಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು. ಇರಾನ್‌ನ ರಮ್ಜಾನ್ ಬಿಯಾಬಾನಿ ಕೂಡ 699 ಅಂಕಗಳನ್ನು ಗಳಿಸಿದ್ದರಿಂದ ಅವರು ಕಡಿಮೆ ಅಂತರದಿಂದ ಎರಡನೇ ಸ್ಥಾನವನ್ನು ಕಳೆದುಕೊಂಡರು. ರಾಕೇಶ್ 53 ಬಾರಿ 10 ಅಂಕಗಳನ್ನು ಪಡೆಯುವ ಮೂಲಕ ಪರ್ಫೆಕ್ಟ್ ಸ್ಕೋರ್ ಮಾಡಿದರೆ ಇರಾನಿಯನ್ ಆರ್ಚರ್ 18 ಬಾರಿ ಮಾಡಿದ್ದಾರೆ.

ಇದು ಉಳಿದ ಆಟಗಾರರ ಸ್ಥಿತಿ ಭಾರತದ ಶ್ಯಾಮ್ ಸುಂದರ್ ಸ್ವಾಮಿ 682 ಅಂಕಗಳೊಂದಿಗೆ 21 ನೇ ಸ್ಥಾನ ಪಡೆದರು. ಪ್ಯಾರಾಲಿಂಪಿಕ್ಸ್‌ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಿಲ್ಲುಗಾರ್ತಿ ಜ್ಯೋತಿ ಬಲಿಯಾನ್, ಸಂಯುಕ್ತ ಮುಕ್ತ ವಿಭಾಗದಲ್ಲಿ 15 ನೇ ಸ್ಥಾನ ಪಡೆದರು. ಏಷ್ಯನ್ ಪ್ಯಾರಾ ಚಾಂಪಿಯನ್‌ಶಿಪ್ 2019 ರಲ್ಲಿ ತಂಡದ ಬೆಳ್ಳಿ ಪದಕ ವಿಜೇತ ಜ್ಯೋತಿ 671 ಅಂಕಗಳನ್ನು ಗಳಿಸಿದ್ದಾರೆ. ಮಿಶ್ರ ಡಬಲ್ಸ್ ಮುಕ್ತ ವಿಭಾಗದಲ್ಲಿ ಆಕೆ ಮತ್ತು ರಾಕೇಶ್ ಆರನೇ ಸ್ಥಾನದಲ್ಲಿದ್ದಾರೆ. ಅವರು ಥೈಲ್ಯಾಂಡ್ ವಿರುದ್ಧ ತಮ್ಮ ಅಭಿಯಾನವನ್ನು ಆರಂಭಿಸುತ್ತಾರೆ. ಪುರುಷರ ರಿಕರ್ವ್ ಓಪನ್ ವಿಭಾಗದಲ್ಲಿ, ಚಿಕಾರಾ 609 ಅಂಕಗಳೊಂದಿಗೆ ಅಗ್ರ 10 ರಲ್ಲಿ ಸ್ಥಾನ ಪಡೆದರು. 2018 ರಲ್ಲಿ ಪ್ಯಾರಾ ಏಷ್ಯನ್ ಗೇಮ್ಸ್ ಚಾಂಪಿಯನ್ ಹರ್ವೀಂದರ್ ಸಿಂಗ್ ಅವರು ಅಗ್ರ 20 ರಲ್ಲಿ ಹೊರಗುಳಿದಿದ್ದರೆ ಅವರು 10 ಬಾರಿ ಪರಿಪೂರ್ಣ ಸ್ಕೋರ್ ಮಾಡಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ