AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhuvaneshwar Kumar: ಐಸಿಸಿ ಮಾರ್ಚ್ ತಿಂಗಳ ಆಟಗಾರ ಅವಾರ್ಡ್ ಪಡೆದ ಭುವನೇಶ್ವರ್ ಕುಮಾರ್

ICC Player of the Month Award: ಈ ಕ್ರಿಕೆಟ್ ಪ್ರಯಾಣದಲ್ಲಿ ಸಹಕಾರ ನೀಡಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ನನ್ನ ಕುಟುಂಬ, ಗೆಳೆಯರು, ಸಹ ಆಟಗಾರರು ಎಲ್ಲರಿಗೂ ನಾನು ಆಭಾರಿ ಎಂದು ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

Bhuvaneshwar Kumar: ಐಸಿಸಿ ಮಾರ್ಚ್ ತಿಂಗಳ ಆಟಗಾರ ಅವಾರ್ಡ್ ಪಡೆದ ಭುವನೇಶ್ವರ್ ಕುಮಾರ್
ಭುವನೇಶ್ವರ್ ಕುಮಾರ್
Follow us
TV9 Web
| Updated By: ganapathi bhat

Updated on:Apr 05, 2022 | 12:36 PM

ಭಾರತದ ಅನುಭವಿ ಯುವ ಬೌಲರ್ ಭುವನೇಶ್ವರ್ ಕುಮಾರ್ ಮಂಗಳವಾರ ಐಸಿಸಿ ಪ್ಲೇಯರ್ ಆಫ್ ದ ಮಂತ್ (ICC Player of the Month Award) ಅವಾರ್ಡ್ ಪಡೆದುಕೊಂಡಿದ್ದಾರೆ. ಮಾರ್ಚ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್​ಗಳ ಪಂದ್ಯಾಟದಲ್ಲಿ ಭುವನೇಶ್ವರ್ ಕುಮಾರ್ ಅತ್ಯುತ್ತಮ ಪ್ರದರ್ಶನ ತೋರಿದ್ದರು. 31 ವರ್ಷ ವಯಸ್ಸಿನ ಭುವಿ, 3 ಏಕದಿನ ಪಂದ್ಯಗಳಲ್ಲಿ 4.65ರ ಎಕನಮಿಯಲ್ಲಿ 6 ವಿಕೆಟ್ ಕಬಳಿಸಿದ್ದರು. ಹಾಗೂ 5 ಟಿ20 ಪಂದ್ಯಾಟದಲ್ಲಿ 6.38ರ ಎಕನಮಿಯಲ್ಲಿ 4 ವಿಕೆಟ್ ಕಿತ್ತಿದ್ದರು.

ಬಹಳ ಕಾಲದ ನಂತರ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವುದಕ್ಕೆ ಸಂತಸವಿದೆ. ನನ್ನ ಫಿಟ್​ನೆಸ್ ಹಾಗೂ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಈ ನಡುವೆ ಶ್ರಮಿಸಿದ್ದೇನೆ. ನನ್ನ ದೇಶದ ತಂಡಕ್ಕಾಗಿ ಆಟವಾಡಿ ವಿಕೆಟ್ ಪಡೆದಿರುವುದರ ಬಗ್ಗೆ ಖುಷಿ ಇದೆ ಎಂದು ಭುವನೇಶ್ವರ್ ಹೇಳಿದ್ದಾರೆ.

ಈ ಅವಾರ್ಡ್ ಈ ವರ್ಷದ ಆರಂಭದಲ್ಲಿ ಶುರುವಾಯಿತು. ಆ ಬಳಿಕ ಈ ಅವಾರ್ಡ್ ಪಡೆದಿರುವ 3ನೇ ಬೌಲರ್ ಆಗಿ ಭುವನೇಶ್ವರ್ ಕುಮಾರ್ ಹೊರಹೊಮ್ಮಿದ್ದಾರೆ. ಜನವರಿಯಲ್ಲಿ ಪ್ಲೇಯರ್ ಆಫ್ ದ ಮಂತ್ ಅವಾರ್ಡ್​ನ್ನು ವಿಕೆಟ್ ಕೀಪರ್- ಬ್ಯಾಟ್ಸ್​ಮನ್ ಆಗಿರುವ ರಿಷಭ್ ಪಂತ್ ಪಡೆದಿದ್ದರು. ಬಳಿಕ ಇಂಗ್ಲೆಂಡ್ ವಿರುದ್ಧದ ಆಟಕ್ಕಾಗಿ ರವಿಚಂದ್ರನ್ ಅಶ್ವಿನ್ ಫೆಬ್ರವರಿಯಲ್ಲಿ ಈ ಅವಾರ್ಡ್ ಪಡೆದಿದ್ದರು.

ಈ ಕ್ರಿಕೆಟ್ ಪ್ರಯಾಣದಲ್ಲಿ ಸಹಕಾರ ನೀಡಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ನನ್ನ ಕುಟುಂಬ, ಗೆಳೆಯರು, ಸಹ ಆಟಗಾರರು ಎಲ್ಲರಿಗೂ ನಾನು ಆಭಾರಿ ಎಂದು ಅವರು ಹೇಳಿದ್ದಾರೆ. ಐಸಿಸಿ ವೋಟಿಂಗ್ ಅಕಾಡೆಮಿ ಹಾಗೂ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.

ಭುವನೇಶ್ವರ್ ಕುಮಾರ್ ಜೊತೆಗೆ, ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್, ಜಿಂಬಾಬ್ವೆಯ ಸೀನ್ ವಿಲಿಯಮ್ಸ್ ಕೂಡ ಈ ಅವಾರ್ಡ್​ಗೆ ನಾಮನಿರ್ದೇಶನಗೊಂಡಿದ್ದರು. ಐಸಿಸಿ ವೋಟಿಂಗ್ ಅಕಾಡೆಮಿ ಪ್ರತಿನಿಧಿಸುತ್ತಿರುವ ವಿವಿಎಸ್ ಲಕ್ಷ್ಮಣ್, ಭುವನೇಶ್ವರ್ ಕುಮಾರ್ ಸುಮಾರು ಒಂದು ವರ್ಷ ಅಂದರೆ ಕೆಲವಾರು ಅಂತಾರಾಷ್ಟ್ರೀಯ ಕ್ರಿಕೆಟ್ ಕೂಟಗಳನ್ನು ಇಂಜೂರಿ ಕಾರಣದಿಂದ ಕಳೆದುಕೊಂಡರು. ಭುವಿ ಪವರ್​ಪ್ಲೇ ಓವರ್​ಗಳಲ್ಲಿ ಹಾಗೂ ಡೆತ್ ಓವರ್​ಗಳಲ್ಲೂ ಅತ್ಯುತ್ತಮವಾಗಿ ಬೌಲ್ ಮಾಡಬಲ್ಲರು ಎಂದೂ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: RR vs PBKS, IPL 2021: ಕೊನೆಯ ಓವರ್​ನಲ್ಲಿ ಸಿಂಗಲ್ ಓಟ ನಿರಾಕರಿಸಿದ ಸಂಜು ಸ್ಯಾಮ್ಸನ್​ಗೆ ಕ್ರಿಕೆಟ್ ದಿಗ್ಗಜರು ರಿಯಾಕ್ಟ್ ಮಾಡಿದ್ದು ಹೀಗೆ

ಇದನ್ನೂ ಓದಿ: Bhuvneshwar Kumar IPL 2021 SRH Team Player: ತೆಂಡೂಲ್ಕರ್​ರನ್ನು ಮೊಟ್ಟ ಮೊದಲ ಬಾರಿಗೆ ಸೊನ್ನೆಗೆ ಔಟ್ ಮಾಡಿದ ಭುವನೇಶ್ವರ್ ಹೈದರಾಬಾದ್​ನ ಪ್ರಮುಖ ಬೌಲಿಂಗ್ ಅಸ್ತ್ರ

(Indian seamer Bhuvneshwar Kumar wins ICC Player of the Month Award for March)

Published On - 5:03 pm, Tue, 13 April 21

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ