AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್​ ಕುವರಿ ಸ್ಮೃತಿ ಮಂದಾನ!

ಮುಂಬೈ: ದೇಶದ ಖ್ಯಾತ ಮಹಿಳಾ ಕ್ರಿಕೆಟ್​ ಆಟಗಾರ್ತಿ ಹಾಗೂ ಟೀಮ್​ ಇಂಡಿಯಾದ ಓಪನರ್​ ಸ್ಮೃತಿ ಮಂದಾನ ಇಂದು ತಮ್ಮ 24ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹೀಗಾಗಿ, ದೇಶದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ರಿಂದ ಹಿಡಿದು ಇವರ ಇಡೀ ಅಭಿಮಾನಿ ಬಳಗವೇ ಸೋಷಿಯಲ್​ ಮೀಡಿಯಾ ಮುಖಾಂತರ ತಮ್ಮ ಬರ್ತ್​ ಡೇ ವಿಶಸ್​ ಹಂಚಿಕೊಂಡಿದ್ದಾರೆ. 1996ರಲ್ಲಿ ಜನಿಸಿದ ಸ್ಮೃತಿ ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಓಪನರ್​ ಆಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ODI ಶ್ರೇಣಿಯಲ್ಲಿ 4ನೇ ಅತ್ಯುತ್ತಮ ಬ್ಯಾಟ್ಸ್​ವುಮನ್​ ಎಂಬ ಹೆಗ್ಗಳಿಕೆಗೆ […]

24ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್​ ಕುವರಿ ಸ್ಮೃತಿ ಮಂದಾನ!
KUSHAL V
| Edited By: |

Updated on: Jul 18, 2020 | 3:15 PM

Share

ಮುಂಬೈ: ದೇಶದ ಖ್ಯಾತ ಮಹಿಳಾ ಕ್ರಿಕೆಟ್​ ಆಟಗಾರ್ತಿ ಹಾಗೂ ಟೀಮ್​ ಇಂಡಿಯಾದ ಓಪನರ್​ ಸ್ಮೃತಿ ಮಂದಾನ ಇಂದು ತಮ್ಮ 24ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹೀಗಾಗಿ, ದೇಶದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ರಿಂದ ಹಿಡಿದು ಇವರ ಇಡೀ ಅಭಿಮಾನಿ ಬಳಗವೇ ಸೋಷಿಯಲ್​ ಮೀಡಿಯಾ ಮುಖಾಂತರ ತಮ್ಮ ಬರ್ತ್​ ಡೇ ವಿಶಸ್​ ಹಂಚಿಕೊಂಡಿದ್ದಾರೆ.

1996ರಲ್ಲಿ ಜನಿಸಿದ ಸ್ಮೃತಿ ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಓಪನರ್​ ಆಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ODI ಶ್ರೇಣಿಯಲ್ಲಿ 4ನೇ ಅತ್ಯುತ್ತಮ ಬ್ಯಾಟ್ಸ್​ವುಮನ್​ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಮುಂಬೈ ಬೆಡಗಿ ವಿಶ್ವದ ಗಮನ ಸೆಳೆದಿದ್ದು 2018ರಲ್ಲಿ ನಡೆದ ICC ಮಹಿಳಾ T20 ಪಂದ್ಯಾವಳಿಯಲ್ಲಿ. ಕೇವಲ ಐದು ಮ್ಯಾಚ್​ನಲ್ಲಿ 178 ರನ್​ ಗಳಿಸಿ ಪಂದ್ಯಾವಳಿಯ ಮೂರನೇ ಅತ್ಯುತ್ತಮ ಬ್ಯಾಟ್ಸ್​ವುಮನ್ ಆಗಿ ಹೊರಹೊಮ್ಮಿದರು.

ಇದಲ್ಲದೆ, ಮಹಿಳಾ IPL ಟ್ರೇಲ್​ಬ್ಲೇಜರ್ಸ್​ ತಂಡದ ಕ್ಯಾಪ್ಟನ್​ ಆಗಿ ಮಿಂಚಿದ ಈ ಲೆಫ್ಟ್ ಹ್ಯಾಂಡ್​ ಬ್ಯಾಟ್ಸ್​ವುಮನ್ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಲೋಕದಲ್ಲಿ ಅಭೂತಪೂರ್ವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಇತ್ತೀಚೆಗೆ BCCI ಸ್ಮೃತಿಗೆ ಅತ್ಯುತ್ತಮ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ ಆಟಗಾರ್ತಿ ಎಂದು ಹೆಸರಿಸಿ ಸನ್ಮಾಸಿತ್ತು.

2020ರ T20 ವಿಶ್ವ ಕಪ್​ನಲ್ಲಿ ಆಸ್ಟ್ರೇಲಿಯ ವಿರುದ್ಧ ಫೈನಲ್ ತಲುಪಿದ್ದ ಟೀಮ್​ ಇಂಡಿಯಾ ತಂಡದಲ್ಲಿ ಸ್ಮೃತಿ ಮಂದಾನ ಮಹತ್ತರ ಪಾತ್ರ ವಹಿಸಿದ್ದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!