AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್​ ಕುವರಿ ಸ್ಮೃತಿ ಮಂದಾನ!

ಮುಂಬೈ: ದೇಶದ ಖ್ಯಾತ ಮಹಿಳಾ ಕ್ರಿಕೆಟ್​ ಆಟಗಾರ್ತಿ ಹಾಗೂ ಟೀಮ್​ ಇಂಡಿಯಾದ ಓಪನರ್​ ಸ್ಮೃತಿ ಮಂದಾನ ಇಂದು ತಮ್ಮ 24ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹೀಗಾಗಿ, ದೇಶದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ರಿಂದ ಹಿಡಿದು ಇವರ ಇಡೀ ಅಭಿಮಾನಿ ಬಳಗವೇ ಸೋಷಿಯಲ್​ ಮೀಡಿಯಾ ಮುಖಾಂತರ ತಮ್ಮ ಬರ್ತ್​ ಡೇ ವಿಶಸ್​ ಹಂಚಿಕೊಂಡಿದ್ದಾರೆ. 1996ರಲ್ಲಿ ಜನಿಸಿದ ಸ್ಮೃತಿ ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಓಪನರ್​ ಆಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ODI ಶ್ರೇಣಿಯಲ್ಲಿ 4ನೇ ಅತ್ಯುತ್ತಮ ಬ್ಯಾಟ್ಸ್​ವುಮನ್​ ಎಂಬ ಹೆಗ್ಗಳಿಕೆಗೆ […]

24ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್​ ಕುವರಿ ಸ್ಮೃತಿ ಮಂದಾನ!
KUSHAL V
| Edited By: |

Updated on: Jul 18, 2020 | 3:15 PM

Share

ಮುಂಬೈ: ದೇಶದ ಖ್ಯಾತ ಮಹಿಳಾ ಕ್ರಿಕೆಟ್​ ಆಟಗಾರ್ತಿ ಹಾಗೂ ಟೀಮ್​ ಇಂಡಿಯಾದ ಓಪನರ್​ ಸ್ಮೃತಿ ಮಂದಾನ ಇಂದು ತಮ್ಮ 24ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹೀಗಾಗಿ, ದೇಶದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ರಿಂದ ಹಿಡಿದು ಇವರ ಇಡೀ ಅಭಿಮಾನಿ ಬಳಗವೇ ಸೋಷಿಯಲ್​ ಮೀಡಿಯಾ ಮುಖಾಂತರ ತಮ್ಮ ಬರ್ತ್​ ಡೇ ವಿಶಸ್​ ಹಂಚಿಕೊಂಡಿದ್ದಾರೆ.

1996ರಲ್ಲಿ ಜನಿಸಿದ ಸ್ಮೃತಿ ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಓಪನರ್​ ಆಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ODI ಶ್ರೇಣಿಯಲ್ಲಿ 4ನೇ ಅತ್ಯುತ್ತಮ ಬ್ಯಾಟ್ಸ್​ವುಮನ್​ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಮುಂಬೈ ಬೆಡಗಿ ವಿಶ್ವದ ಗಮನ ಸೆಳೆದಿದ್ದು 2018ರಲ್ಲಿ ನಡೆದ ICC ಮಹಿಳಾ T20 ಪಂದ್ಯಾವಳಿಯಲ್ಲಿ. ಕೇವಲ ಐದು ಮ್ಯಾಚ್​ನಲ್ಲಿ 178 ರನ್​ ಗಳಿಸಿ ಪಂದ್ಯಾವಳಿಯ ಮೂರನೇ ಅತ್ಯುತ್ತಮ ಬ್ಯಾಟ್ಸ್​ವುಮನ್ ಆಗಿ ಹೊರಹೊಮ್ಮಿದರು.

ಇದಲ್ಲದೆ, ಮಹಿಳಾ IPL ಟ್ರೇಲ್​ಬ್ಲೇಜರ್ಸ್​ ತಂಡದ ಕ್ಯಾಪ್ಟನ್​ ಆಗಿ ಮಿಂಚಿದ ಈ ಲೆಫ್ಟ್ ಹ್ಯಾಂಡ್​ ಬ್ಯಾಟ್ಸ್​ವುಮನ್ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಲೋಕದಲ್ಲಿ ಅಭೂತಪೂರ್ವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಇತ್ತೀಚೆಗೆ BCCI ಸ್ಮೃತಿಗೆ ಅತ್ಯುತ್ತಮ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ ಆಟಗಾರ್ತಿ ಎಂದು ಹೆಸರಿಸಿ ಸನ್ಮಾಸಿತ್ತು.

2020ರ T20 ವಿಶ್ವ ಕಪ್​ನಲ್ಲಿ ಆಸ್ಟ್ರೇಲಿಯ ವಿರುದ್ಧ ಫೈನಲ್ ತಲುಪಿದ್ದ ಟೀಮ್​ ಇಂಡಿಯಾ ತಂಡದಲ್ಲಿ ಸ್ಮೃತಿ ಮಂದಾನ ಮಹತ್ತರ ಪಾತ್ರ ವಹಿಸಿದ್ದರು.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ