AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಗವಾಸ್ಕರ್ ಮಾತು ಕೇಳದೆ ಮಣ್ಣುಮುಕ್ಕಿದ ಭಾರತ; ಕೊಹ್ಲಿ ಪಡೆ ತಪ್ಪಿನ ಬಗ್ಗೆ ಮೊದಲೇ ಎಚ್ಚರಿಸಿದ್ದ ತಜ್ಞರು

WTC Final: ಹವಾಮಾನದ ಪ್ರಕಾರ ಭಾರತ ತಂಡವು ಹೆಚ್ಚುವರಿ ಬ್ಯಾಟ್ಸ್‌ಮನ್‌ನನ್ನು ಕಣಕ್ಕಿಳಿಸಬೇಕು. ಏಕೆಂದರೆ ನ್ಯೂಜಿಲೆಂಡ್ ಬೌಲರ್‌ಗಳಿಗೆ ಪರಿಸ್ಥಿತಿಗಳು ಹೆಚ್ಚು ಅನುಕೂಲಕರವಾಗಿದೆ ಎಂದಿದ್ದರು.

WTC Final: ಗವಾಸ್ಕರ್ ಮಾತು ಕೇಳದೆ ಮಣ್ಣುಮುಕ್ಕಿದ ಭಾರತ; ಕೊಹ್ಲಿ ಪಡೆ ತಪ್ಪಿನ ಬಗ್ಗೆ ಮೊದಲೇ ಎಚ್ಚರಿಸಿದ್ದ ತಜ್ಞರು
ವಿಕೆಟ್ ಪಡೆದ ಸಂತಸದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
| Edited By: |

Updated on: Jun 24, 2021 | 9:52 AM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ನಲ್ಲಿ ಭಾರತ ಕಿವೀಸ್ ವಿರುದ್ಧ ಹೀನಾಯವಾಗಿ ಸೋತು ಚೊಚ್ಚಲ ಟೆಸ್ಟ್ ಚಾಂಪಿಯನ್ ಆಗುವುದನ್ನು ತಪ್ಪಿಸಿಕೊಂಡಿದೆ. ಆದರೆ ಈಗ ಟೀಂ ಇಂಡಿಯಾ ಸುದ್ದಿಯಲ್ಲಿರುವುದು ಗೊತ್ತಿದ್ದೂ ಮಾಡಿಕೊಂಡ ಯಡವಟ್ಟಿನಿಂದ. ಅದೇನೆಂದರೆ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದ ಮಾಜಿ ಆಟಗಾರ ಸುನೀಲ್ ಗವಾಸ್ಕರ್ ನೀಡಿದ್ದ ಸಲಹೆಯನ್ನು ಟೀಂ ಇಂಡಿಯಾ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸದೇ ಇದ್ದದ್ದು. ಅಷ್ಟಕ್ಕೂ ಗವಾಸ್ಕರ್ ನೀಡಿದ್ದ ಸಲಹೆ ಏನು? ಇಲ್ಲಿದೆ ನೋಡಿ

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಒಳಗೊಂಡ ತಂಡವನ್ನು ಟೀಂ ಇಂಡಿಯಾ ಘೋಷಿಸಿತ್ತು. ಆದರೆ ಸೌತಾಂಪ್ಟನ್‌ನಲ್ಲಿ ನಿರಂತರ ಮಳೆಯ ನಂತರ ಪರಿಸ್ಥಿತಿ ಬದಲಾಗಿತ್ತು. ಈ ಬಗ್ಗೆ ಮುನ್ಸೂಚನೆ ನೀಡಿದ ಗವಾಸ್ಕರ್, ಹವಾಮಾನದ ಪ್ರಕಾರ ಭಾರತ ತಂಡವು ಹೆಚ್ಚುವರಿ ಬ್ಯಾಟ್ಸ್‌ಮನ್‌ನನ್ನು ಕಣಕ್ಕಿಳಿಸಬೇಕು. ಏಕೆಂದರೆ ನ್ಯೂಜಿಲೆಂಡ್ ಬೌಲರ್‌ಗಳಿಗೆ ಪರಿಸ್ಥಿತಿಗಳು ಹೆಚ್ಚು ಅನುಕೂಲಕರವಾಗಿದೆ ಎಂದಿದ್ದರು.

ಸ್ಪಿನ್ನರ್ ಅನ್ನು ಹೊರಗಿಡಬಹುದು ಆಜ್ ತಕ್​ನೊಂದಿಗಿನ ಸಂಭಾಷಣೆಯಲ್ಲಿ ಸುನಿಲ್ ಗವಾಸ್ಕರ್, ಪ್ರಸ್ತುತ ರಿಷಭ್ ಪಂತ್ ಆರನೇ ಸ್ಥಾನದಲ್ಲಿದ್ದಾರೆ ಆದರೆ ಅವರನ್ನು ಏಳನೇ ಸ್ಥಾನಕ್ಕೆ ವರ್ಗಾಯಿಸಬೇಕು ಮತ್ತು ಹೆಚ್ಚುವರಿ ಬ್ಯಾಟ್ಸ್‌ಮನ್‌ಗೆ ಅವಕಾಶ ನೀಡಬೇಕು. ಹವಾಮಾನಕ್ಕೆ ಅನುಗುಣವಾಗಿ, ಸ್ಪಿನ್ನರ್ ಅನ್ನು ತಂಡದಿಂದ ಕೈಬಿಡಬಹುದು. ಅಲ್ಲದೆ, ಪರಿಸ್ಥಿತಿಯ ಲಾಭ ಪಡೆಯಲು, ಟಾಸ್ ಗೆದ್ದ ನಂತರ, ಅವರು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬೇಕು ಎಂದು ಗವಾಸ್ಕರ್ ಹೇಳಿದ್ದರು. ಉದಾಹರಣೆಯನ್ನು ನೀಡುತ್ತಾ ಸುನಿಲ್ ಗವಾಸ್ಕರ್, ಕ್ಯಾಪ್ಟನ್ ಆಗಿ ನಾನು ಸ್ಪಿನ್ನರ್​ಗೆ ಅವಕಾಶ ನೀಡಬೇಕೆ ಅಥವಾ ಬ್ಯಾಟ್ಸ್‌ಮನ್​ಗೆ ಅವಕಾಶ ನೀಡಬೇಕೆ ಎಂದು ನಾನು ಗೊಂದಲಕ್ಕೊಳಗಾದಾಗ, ನಾನು ಎದುರಾಳಿ ತಂಡದ ನಾಯಕನ ಆಡುವ ಇಲೆವೆನ್ ಅನ್ನು ನೋಡುತ್ತಿದ್ದೆ ಮತ್ತು ಟಾಸ್ ಮಾಡುವ ಮೊದಲು ನಾನು ಅವನ ತಂತ್ರವನ್ನು ಬಳಸುತ್ತಿದೆ ಮತ್ತು ತಂಡದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ ಎಂದಿದ್ದರು.

ಟೀಂ ಇಂಡಿಯಾ ಆಲ್​ರೌಂಡರ್ಸ್​ ಕಳಪೆ ಪ್ರದರ್ಶನ ಗವಾಸ್ಕರ್ ಮಾತಿನಂತೆಯೇ ಈ ಪಂದ್ಯದಲ್ಲಿ ಮಿಂಚಿದ್ದು ಕೇವಲ ವೇಗಿಗಳು ಅಷ್ಟೇ. ಉಭಯ ತಂಡಗಳಲ್ಲು ವೇಗದ ಬೌಲರ್​ಗಳು ರನ್​ಗಳಿಗೆ ಕಡಿವಾಣ ಹಾಕುವುದರಿಂದ ಹಿಡಿದು ವಿಕೆಟ್ ತೆಗೆಯುವುದರಲ್ಲೂ ಯಶಸ್ವಿಯಾದರು. ಆದರೆ ಟೀಂ ಇಂಡಿಯಾದಲ್ಲಿ ಬಳಸಿಕೊಂಡ ಸ್ಪಿನ್ನರ್​ಗಳಲ್ಲಿ ಅಶ್ವಿನ್​ ಕೊಂಚ ತಂಡಕ್ಕೆ ಬೌಲಿಂಗ್​ನಲ್ಲಿ ಯಶಸ್ವಿಯಾದರೆ ಹೊರತು ಬ್ಯಾಟಿಂಗ್​ನಲ್ಲಿ ಮಿಂಚಲಿಲ್ಲ. ಹಾಗೆಯೇ ಮತ್ತೊಬ್ಬ ಆಲ್​ರೌಂಡರ್​ ಆಗಿ ಕಣಕ್ಕಿಳಿದಿದ್ದ ಜಡೇಜಾ ಅವರ ಪ್ರದರ್ಶನ ತೀರಾ ಕಳಪೆಯಾಗಿತ್ತು. ಜಡೇಜಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ನಿರಸ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ:

WTC Final : ಉತ್ತಮ ಆಟವಾಡುವ ಮನಸ್ಥಿತಿಯುಳ್ಳ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು; ಸೋಲಿನ ಬೆನ್ನಲ್ಲೇ ಕೊಹ್ಲಿ ಹೀಗಂದಿದ್ದು ಯಾರಿಗೆ?

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ