AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ವಿರುದ್ಧ ಭಾರೀ ಜಯ; ಕ್ವಾರ್ಟರ್ ಫೈನಲ್‌ಗೇರಿದ ಭಾರತ ಮಹಿಳಾ ಖೋ-ಖೋ ತಂಡ

Kho Kho World Cup 2025: ದೆಹಲಿಯಲ್ಲಿ ನಡೆಯುತ್ತಿರುವ ಖೋ-ಖೋ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಇರಾನ್ ವಿರುದ್ಧ 100-16 ಅಂತರದ ಭರ್ಜರಿ ಜಯ ಸಾಧಿಸಿ, ಸತತ ಎರಡನೇ ಗೆಲುವು ದಾಖಲಿಸಿದೆ. ಈ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶ ಖಚಿತಪಡಿಸಿಕೊಂಡಿದೆ.

ಇರಾನ್ ವಿರುದ್ಧ ಭಾರೀ ಜಯ; ಕ್ವಾರ್ಟರ್ ಫೈನಲ್‌ಗೇರಿದ ಭಾರತ ಮಹಿಳಾ ಖೋ-ಖೋ ತಂಡ
ಖೋ ಖೋ ವಿಶ್ವಕಪ್
ಪೃಥ್ವಿಶಂಕರ
|

Updated on: Jan 15, 2025 | 10:16 PM

Share

ದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೊಚ್ಚಲ ಆವೃತ್ತಿಯ ಖೋ-ಖೋ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಮತ್ತು ಪುರುಷರ ತಂಡಗಳಿಂದ ಪ್ರಬಲ ಆಟ ಕಂಡು ಬರುತ್ತಿದೆ. ಭಾರತದ ವನಿತೆಯರ ಖೋ-ಖೋ ತಂಡ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 175-18 ಅಂತರದ ಐತಿಹಾಸಿಕ ಜಯ ಸಾಧಿಸಿತ್ತು. ಇದೀಗ ತನ್ನ ಎರಡನೇ ಪಂದ್ಯದಲ್ಲಿ ಇರಾನ್ ವಿರುದ್ಧವೂ ಏಕಪಕ್ಷೀಯವಾಗಿ ಗೆಲುವು ದಾಖಲಿಸಿದೆ. ಸತತ 2 ಗೆಲುವಿನೊಂದಿಗೆ ಇದೀಗ ಕ್ವಾರ್ಟರ್ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಇರಾನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇರಾನ್ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ ಆಟವಾಡಿದ ಭಾರತ ಮಹಿಳಾ ತಂಡ ಎದುರಾಳಿ ತಂಡದ ವಿರುದ್ಧ ಇಡೀ ಪಂದ್ಯದಲ್ಲಿ ಪಾರುಪತ್ಯ ಸಾಧಿಸಿತು. ಅಂತಿಮವಾಗಿ ಪಂದ್ಯವನ್ನು ಭಾರತ ಮಹಿಳಾ ಖೋ-ಖೋ ತಂಡ 100-16 ಅಂತರದಿಂದ ಜಯ ಸಾಧಿಸಿತು. ಸತತ ಎರಡನೇ ಪಂದ್ಯದಲ್ಲೂ 100 ಅಂಕಗಳ ಗಡಿ ಮುಟ್ಟುವಲ್ಲಿ ಯಶಸ್ವಿಯಾಯಿತು. ತಂಡದ ಪರ ಅಶ್ವಿನಿ ಮತ್ತು ಮೀನು ಅದ್ಭುತ ಆಟ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ವಜೀರ್ ನಿರ್ಮಲಾ, ಕ್ಯಾಪ್ಟನ್ ಪ್ರಿಯಾಂಕಾ ಇಂಗ್ಲೆ, ನಿರ್ಮಲಾ ಭಾಟಿ ಮತ್ತು ನಸ್ರೀನ್ ಉತ್ತಮ ಪ್ರದರ್ಶನ ನೀಡಿದ್ದು, ಈ ಮೂಲಕ ಸತತ ಎರಡನೇ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ ಮೊಬಿನಾ ಪಂದ್ಯದ ಅತ್ಯುತ್ತಮ ದಾಳಿಗಾರ್ತಿಯಾಗಿ ಆಯ್ಕೆಯಾದರೆ, ಇದೇ ವೇಳೆ ಪ್ರಿಯಾಂಕಾ ಇಂಗ್ಲೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಮಲೇಷ್ಯಾ ಜೊತೆ ಪೈಪೋಟಿ

ಮಹಿಳೆಯರ ಸ್ಪರ್ಧೆಯಲ್ಲಿ ಒಟ್ಟು 19 ತಂಡಗಳು ಆಡುತ್ತಿದ್ದು, ಟೀಂ ಇಂಡಿಯಾ ಈಗ ಗ್ರೂಪ್ ಹಂತದಲ್ಲಿ ತನ್ನ ಕೊನೆಯ ಪಂದ್ಯವನ್ನು ಮಲೇಷ್ಯಾ ವಿರುದ್ಧ ಆಡಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಜನವರಿ 16 ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಸದ್ಯ ಟೀಂ ಇಂಡಿಯಾ 2 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಗುಂಪು ಹಂತದ ನಂತರ ಜನವರಿ 17ರಿಂದ ಪ್ಲೇಆಫ್ ಪಂದ್ಯಗಳು ಆರಂಭವಾಗಲಿವೆ. ಫೈನಲ್ ಪಂದ್ಯ ಜನವರಿ 19 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ