AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಒಂದೇ ಓವರ್​ನಲ್ಲಿ ಸತತ 5 ಬೌಂಡರಿ: 17 ವರ್ಷದ ಶೆಫಾಲಿ ಸ್ಫೋಟಕ ಆಟಕ್ಕೆ ಸುಸ್ತಾದ ಇಂಗ್ಲೆಂಡ್

ಅರ್ಧಶತಕದ ಅಂಚಿನಲ್ಲಿ ಎಡವಿದ ಶೆಫಾಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 38 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಬಾರಿಸಿ 48 ರನ್ ಗಳಿಸಿ ಶೆಫಾಲಿ ಔಟ್ ಆದರು.

VIDEO: ಒಂದೇ ಓವರ್​ನಲ್ಲಿ ಸತತ 5 ಬೌಂಡರಿ: 17 ವರ್ಷದ ಶೆಫಾಲಿ ಸ್ಫೋಟಕ ಆಟಕ್ಕೆ ಸುಸ್ತಾದ ಇಂಗ್ಲೆಂಡ್
Shafali Verma
TV9 Web
| Edited By: |

Updated on: Jul 12, 2021 | 1:46 PM

Share

ಇಂಗ್ಲೆಂಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವನಿತೆಯರ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 8 ರನ್​ಗಳ ರೋಚಕ ಗೆಲುವು ಪಡೆದುಕೊಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ರ ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ಪ್ರಮುಖ ಹೈಲೇಟ್ 17 ವರ್ಷದ ಶೆಫಾಲಿ ವರ್ಮಾ ಅವರ ಸ್ಫೋಟಕ ಆಟ. ಮನಬಂದಂತೆ ಬ್ಯಾಟ್ ಬೀಸಿದ ಇವರು ಇಂಗ್ಲೆಂಡ್ ಬೌಲರ್​ಗಳ ಮೈಚಳಿ ಬಿಡಿಸಿದ್ದು ಸುಳ್ಳಲ್ಲ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ಬಿರುಸಿಟ ಆಟದ ಮೊರೆಹೋಯಿತು. ಅದರಲ್ಲೂ ಶೆಫಾಲಿ ವರ್ಮಾ ಆಕ್ರಮಣ ಆಟಕ್ಕೆ ಮುಂದಾದರು. 3ನೇ ಓವರ್​ನಲ್ಲಿ ಬೌಂಡರಿ-ಸಿಕ್ಸರ್ ಬಾರಿಸಿ, 4ನೇ ಓವರ್​ನಲ್ಲೂ ತನ್ನ ಸ್ಫೋಟಕ ಆಟ ಮುಂದುವರೆಸಿದರು.

4ನೇ ಓವರ್​ನ ಬ್ರಂಟ್ ಬೌಲಿಂಗ್​ನಲ್ಲಿ ಮೊದಲ ಎಸೆತವನ್ನು ಸ್ಮೃತಿ ಮಂದಾನ ಸಿಂಗಲ್ ರನ್ ತೆಗೆದರು. ಮುಂದಿನ ಐದು ಎಸೆತವನ್ನು ಎದುರಿಸಿದ ಶೆಫಾಲಿ ಐದೂ ಎಸೆತದಲ್ಲಿ ಚೆಂಡನ್ನು ಬೌಂಡರಿ ಅಟ್ಟಿದರು. ಪವರ್ ಪ್ಲೇ ಓವರ್ ಅನ್ನು ಅತ್ಯುತ್ತಮವಾಗಿ ಉಪಯೋಗಿಸಿಕೊಂಡ ಇವರು ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟ ಆಡಿದರು.

ಆದರೆ, ಅರ್ಧಶತಕದ ಅಂಚಿನಲ್ಲಿ ಎಡವಿದ ಶೆಫಾಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 38 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಬಾರಿಸಿ 48 ರನ್ ಗಳಿಸಿ ಶೆಫಾಲಿ ಔಟ್ ಆದರು. ಮಂದಾನ 20 ರನ್ ಗಳಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 31 ಹಾಗೂ ದೀಪ್ತಿ ಶರ್ಮಾ ಅಜೇಯ 24 ರನ್ ಗಳಿಸಿದರು. ಭಾರತ ವನಿತಾ ತಂಡ 20 ಓವರ್​ನಲ್ಲಿ 4 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು.

ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡಿದ್ದು ಬಿಟ್ಟರೆ ಟಮ್ಮಿ ಬ್ಯೂಮಾಂಟ್(59) ಹಾಗೂ ನಾಯಕಿ ಹೀದರ್ ನೈಟ್(30) ಜೊತೆಯಾಗಿ 75 ರನ್​ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಹತ್ತಿರ ತಂದರು. ಆದರೆ, ಇವರಿಬ್ಬರ ನಿರ್ಗಮನದ ಬಳಿಕ ದಿಢೀರ್ ಕುಸಿತ ಕಂಡ ಇಂಗ್ಲೆಂಡ್ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲುಂಡಿತು.

ಭಾರತ 8 ರನ್​ಗಳ ಗೆಲುವಿನೊಂದಿಗೆ ಸರಣಿ ಸಮಬಲ ಸಾಧಿಸಿದೆ. ಅಂತಿಮ ನಿರ್ಣಾಯಕ ಪಂದ್ಯ ಜುಲೈ 14 ರಂದು ನಡೆಯಲಿದೆ.

IPL 2022 Mega Auction: RCB ತನ್ನಲ್ಲೇ ಉಳಿಸಿಕೊಳ್ಳುವ 4 ಆಟಗಾರರು ಇವರೇ ನೋಡಿ

Vamika 6 Months: ವಿರುಷ್ಕಾ ದಂಪತಿ ಮಗಳು ವಮಿಕಾಗೆ ಆರು ತಿಂಗಳು ತುಂಬಿದ ಸಂಭ್ರಮ; ಫೋಟೋ ಶೇರ್ ಮಾಡಿಕೊಂಡ ಅನುಷ್ಕಾ ಶರ್ಮಾ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್