AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಒಂದೇ ಓವರ್​ನಲ್ಲಿ ಸತತ 5 ಬೌಂಡರಿ: 17 ವರ್ಷದ ಶೆಫಾಲಿ ಸ್ಫೋಟಕ ಆಟಕ್ಕೆ ಸುಸ್ತಾದ ಇಂಗ್ಲೆಂಡ್

ಅರ್ಧಶತಕದ ಅಂಚಿನಲ್ಲಿ ಎಡವಿದ ಶೆಫಾಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 38 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಬಾರಿಸಿ 48 ರನ್ ಗಳಿಸಿ ಶೆಫಾಲಿ ಔಟ್ ಆದರು.

VIDEO: ಒಂದೇ ಓವರ್​ನಲ್ಲಿ ಸತತ 5 ಬೌಂಡರಿ: 17 ವರ್ಷದ ಶೆಫಾಲಿ ಸ್ಫೋಟಕ ಆಟಕ್ಕೆ ಸುಸ್ತಾದ ಇಂಗ್ಲೆಂಡ್
Shafali Verma
TV9 Web
| Edited By: |

Updated on: Jul 12, 2021 | 1:46 PM

Share

ಇಂಗ್ಲೆಂಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವನಿತೆಯರ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 8 ರನ್​ಗಳ ರೋಚಕ ಗೆಲುವು ಪಡೆದುಕೊಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ರ ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ಪ್ರಮುಖ ಹೈಲೇಟ್ 17 ವರ್ಷದ ಶೆಫಾಲಿ ವರ್ಮಾ ಅವರ ಸ್ಫೋಟಕ ಆಟ. ಮನಬಂದಂತೆ ಬ್ಯಾಟ್ ಬೀಸಿದ ಇವರು ಇಂಗ್ಲೆಂಡ್ ಬೌಲರ್​ಗಳ ಮೈಚಳಿ ಬಿಡಿಸಿದ್ದು ಸುಳ್ಳಲ್ಲ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ಬಿರುಸಿಟ ಆಟದ ಮೊರೆಹೋಯಿತು. ಅದರಲ್ಲೂ ಶೆಫಾಲಿ ವರ್ಮಾ ಆಕ್ರಮಣ ಆಟಕ್ಕೆ ಮುಂದಾದರು. 3ನೇ ಓವರ್​ನಲ್ಲಿ ಬೌಂಡರಿ-ಸಿಕ್ಸರ್ ಬಾರಿಸಿ, 4ನೇ ಓವರ್​ನಲ್ಲೂ ತನ್ನ ಸ್ಫೋಟಕ ಆಟ ಮುಂದುವರೆಸಿದರು.

4ನೇ ಓವರ್​ನ ಬ್ರಂಟ್ ಬೌಲಿಂಗ್​ನಲ್ಲಿ ಮೊದಲ ಎಸೆತವನ್ನು ಸ್ಮೃತಿ ಮಂದಾನ ಸಿಂಗಲ್ ರನ್ ತೆಗೆದರು. ಮುಂದಿನ ಐದು ಎಸೆತವನ್ನು ಎದುರಿಸಿದ ಶೆಫಾಲಿ ಐದೂ ಎಸೆತದಲ್ಲಿ ಚೆಂಡನ್ನು ಬೌಂಡರಿ ಅಟ್ಟಿದರು. ಪವರ್ ಪ್ಲೇ ಓವರ್ ಅನ್ನು ಅತ್ಯುತ್ತಮವಾಗಿ ಉಪಯೋಗಿಸಿಕೊಂಡ ಇವರು ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟ ಆಡಿದರು.

ಆದರೆ, ಅರ್ಧಶತಕದ ಅಂಚಿನಲ್ಲಿ ಎಡವಿದ ಶೆಫಾಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 38 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಬಾರಿಸಿ 48 ರನ್ ಗಳಿಸಿ ಶೆಫಾಲಿ ಔಟ್ ಆದರು. ಮಂದಾನ 20 ರನ್ ಗಳಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 31 ಹಾಗೂ ದೀಪ್ತಿ ಶರ್ಮಾ ಅಜೇಯ 24 ರನ್ ಗಳಿಸಿದರು. ಭಾರತ ವನಿತಾ ತಂಡ 20 ಓವರ್​ನಲ್ಲಿ 4 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು.

ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡಿದ್ದು ಬಿಟ್ಟರೆ ಟಮ್ಮಿ ಬ್ಯೂಮಾಂಟ್(59) ಹಾಗೂ ನಾಯಕಿ ಹೀದರ್ ನೈಟ್(30) ಜೊತೆಯಾಗಿ 75 ರನ್​ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಹತ್ತಿರ ತಂದರು. ಆದರೆ, ಇವರಿಬ್ಬರ ನಿರ್ಗಮನದ ಬಳಿಕ ದಿಢೀರ್ ಕುಸಿತ ಕಂಡ ಇಂಗ್ಲೆಂಡ್ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲುಂಡಿತು.

ಭಾರತ 8 ರನ್​ಗಳ ಗೆಲುವಿನೊಂದಿಗೆ ಸರಣಿ ಸಮಬಲ ಸಾಧಿಸಿದೆ. ಅಂತಿಮ ನಿರ್ಣಾಯಕ ಪಂದ್ಯ ಜುಲೈ 14 ರಂದು ನಡೆಯಲಿದೆ.

IPL 2022 Mega Auction: RCB ತನ್ನಲ್ಲೇ ಉಳಿಸಿಕೊಳ್ಳುವ 4 ಆಟಗಾರರು ಇವರೇ ನೋಡಿ

Vamika 6 Months: ವಿರುಷ್ಕಾ ದಂಪತಿ ಮಗಳು ವಮಿಕಾಗೆ ಆರು ತಿಂಗಳು ತುಂಬಿದ ಸಂಭ್ರಮ; ಫೋಟೋ ಶೇರ್ ಮಾಡಿಕೊಂಡ ಅನುಷ್ಕಾ ಶರ್ಮಾ

Follow Us
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!