AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡಿರುವ ಬಾಬರ್ ಮತ್ತು ಇಮಾಮ್ ಮೊದಲ ಟೆಸ್ಟ್ ಆಡುವುದಿಲ್ಲ: ಪಿಸಿಬಿ

ನ್ಯೂಜಿಲೆಂಡ್​ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಗಾಯಾಳುಗಳ ಚಿಂತೆ ಕಾಡುತ್ತಿದೆ. ಹೆಬ್ಬಟ್ಟಿನ ಮೂಳೆ ಮುರಿದುಕೊಂಡಿರುವ ನಾಯಕ ಬಾಬರ್ ಅಜಂ ಮತ್ತು ಆರಂಭ ಆಟಗಾರ ಇಮಾಮ್ ಉಲ್ ಹಕ್ 26ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್​ನಲ್ಲಿ ಅಡುವುದಿಲ್ಲವೆಂದು ಪಿಸಿಬಿ ಹೇಳಿದೆ.

ಗಾಯಗೊಂಡಿರುವ ಬಾಬರ್ ಮತ್ತು ಇಮಾಮ್ ಮೊದಲ ಟೆಸ್ಟ್ ಆಡುವುದಿಲ್ಲ: ಪಿಸಿಬಿ
ಬಾಬರ್ ಆಜಂ
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 21, 2020 | 8:03 PM

Share

ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟಿ20ಐ ಸರಣಿಯಲ್ಲಿ 0-2 ಹಿನ್ನಡೆ ಅನುಭವಿಸುತ್ತಿರುವ ಪಾಕಿಸ್ತಾನಕ್ಕೆ ಟೆಸ್ಟ್ ಸರಣಿ ಆರಂಭಕ್ಕೆ ಮೊದಲು ಮತ್ತೊಂದು ಆಘಾತ ಎದುರಾಗಿದೆ. ಟೀಮಿನ ನಾಯಕ ಬಾಬರ್ ಆಜಂ ಮತ್ತು ಆರಂಭ ಆಟಗಾರ ಇಮಾಮ್ ಉಲ್ ಹಕ್ ಗಾಯಗೊಂಡಿದ್ದು ಇಬ್ಬರೂ 26ರಂದು ಮೌಂಟ್ ಮ್ಯಾಗ್ನುಯಿಯಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್​ನಲ್ಲಿ ಆಡುವುದಿಲ್ಲ.

ಅವರ ಗಾಯಗಳ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಜನವರಿ 3 ರಂದು ಶುರುವಾಗುವ ಎರಡನೇ ಟೆಸ್ಟ್​ಗೆ ಅವರಿಬ್ಬರು ಲಭ್ಯರಾಗುವರೆ ಎನ್ನುವುದನ್ನು ನಂತರ ತಿಳಿಸಲಾಗುವುದೆಂದು ಹೇಳಿದೆ.

ಬಾಬರ್ ಅನುಪಸ್ಥಿತಿಯಲ್ಲಿ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಮೊಹಮ್ಮದ್ ರಿಜ್ವಾನ್ ಟೀಮಿನ ನಾಯಕತ್ವ ವಹಿಸಲಿದ್ದಾರೆಂದು ಹೇಳಿರುವ ಪಿಸಿಬಿ, ಬಾಬರ್ ಮತ್ತು ಇಮಾಮ್ ಇಬ್ಬರೂ ನೆಟ್ಸ್​ನಲ್ಲಿ ಹೆಬ್ಬಟ್ಟಿನ ಮೂಳೆಗಳನ್ನು ಮುರಿದುಕೊಂಡಿದ್ದು ಚೇತರಿಸಿಕೊಳ್ಳಲು ಕನಿಷ್ಠ 2-3 ವಾರ ಬೇಕಾಗಬಹುದು ಎಂದು ತಿಳಿಸಿದೆ.

ಇಮಾಮ್ ಉಲ್ ಹಕ್​

24 ವರ್ಷದ ಇಮ್ರಾನ್ ಬಟ್​ರನ್ನು ಬದಲೀ ಆಟಗಾರನಾಗಿ ಪಾಕಿಸ್ತಾನ ತಂಡದಲ್ಲಿ ಸೇರಿಸಲಾಗಿದೆ. 2019-20ರ ಡೊಮೆಸ್ಟಿಕ್ ಸೀಸನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಬಟ್ 62 ರ ಸರಾಸರಿಯಲ್ಲಿ 4 ಶತಕ ಮತ್ತು 3 ಅರ್ಧ ಶತಕಗಳನ್ನೊಳಗೊಂಡಂತೆ 934 ರನ್ ಬಾರಿಸಿದ್ದರು.

ನ್ಯೂಜಿಲೆಂಡ್-ಪಾಕಿಸ್ತಾನ ನಡುವೆ ಟಿ20ಐ ಸರಣಿಯ ಕೊನೆ ಪಂದ್ಯ ನಾಳೆ ನೇಪಿಯರ್​ನಲ್ಲಿ ನಡೆಯಲಿದ್ದು ಸರಣಿ ಅದಾಗಲೇ ಅತಿಥೇಯರ ಪಾಲಾಗಿರುವುದರಿಂದ ಇದು ಔಪಚಾರಿಕತೆಗಾಗಿ ನಡೆಯಲಿದೆ. ಪಾಕಿಸ್ತಾನದ ಹೆಡ್ ಕೋಚ್ ಮಿಸ್ಬಾ ಉಲ್ ಹಕ್, ಆಜಂ ಮತ್ತು ಇಮಾಮ್​ ಅವರಿಗಾಗಿರುವ ಗಾಯಗಳ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ರಿಜ್ವಾನ್

‘ಎರಡನೇ ಟೆಸ್ಟ್ ಶುರುವಾಗಲು ಇನ್ನೂ ಎರಡು ವಾರಗಳ ಸಮಯವಿದೆ. ಆದರೆ, ನೆಟ್ಸ್​ನಲ್ಲಿ ಅಭ್ಯಾಸ ಮಾಡದೆ ಟೆಸ್ಟ್​ನಲ್ಲಿ ಆಡುವುದು ಬಾಬರ್​ಗೆ ಕಷ್ಟವಾಗಲಿದೆ. ಹಾಗಾಗಿ ಅವರನ್ನು ಆಡಿಸುವುದಕ್ಕೆ ಅವಸರ ಮಾಡುತ್ತಿಲ್ಲ. ಅವರ ಅನುಪಸ್ಥಿತಿ ಮತ್ತು ಟಿ20ಐ ಸರಣಿಯನ್ನು ಸೋತಿರುವುದರಿಂದ ಪಾಕಿಸ್ತಾನದ ಆಟಗಾರರು ಕೊನೆಯ ಟಿ20 ಪಂದ್ಯ ಮತ್ತು ಟೆಸ್ಟ್​ಗಳಲ್ಲಿ ತಮ್ಮೆಲ್ಲ ಸಾಮರ್ಥ್ಯವನ್ನು ಒರೆಗೆ ಹಚ್ಚಬೇಕಿದೆ’ ಎಂದು ಮಿಸ್ಬಾ ಹೇಳಿದರು.

Published On - 7:48 pm, Mon, 21 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ