IPL 2020: ರಾಜಸ್ಥಾನ ಮತ್ತು ಡೆಲ್ಲಿ ನಡುವಿನ ಚುಟುಕು ಸಮರದ ಫೋಟೊಗಳಿವು..

ರಾಜಸ್ಥಾನ ರಾಯಲ್ಸ್ ವಿರುದ್ಧ 13 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್, ಅಗ್ರಸ್ಥಾನಕ್ಕೇರಿದೆ. ಒಟ್ಟು 8 ಪಂದ್ಯಗಳಲ್ಲಿ 6 ಪಂದ್ಯಗಳನ್ನ ಗೆದ್ದಿರೋ ಡೆಲ್ಲಿ 12 ಅಂಕಗಳೊಂದಿಗೆ ನಂಬರ್ 1 ಸ್ಥಾನವನ್ನ ಅಲಂಕರಿಸಿದೆ. ಇನ್ನು ರಾಯಲ್ಸ್ 7ನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ನ ತುಷಾರ್ ದೇಶಪಾಂಡೆ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಹರ್ಷಲ್ ಪಟೇಲ್ ಸ್ಥಾನಕ್ಕೆ ರಿಪ್ಲೇಸ್ ಆಗಿದ್ದ ದೇಶಪಾಂಡೆ, 4 ಓವರ್​ಗಳಲ್ಲಿ 37 ರನ್ ನೀಡಿ 2 ವಿಕೆಟ್ ಪಡೆದ್ರು. ಬೆನ್ ಸ್ಟೋಕ್ಸ್ […]

IPL 2020: ರಾಜಸ್ಥಾನ ಮತ್ತು ಡೆಲ್ಲಿ ನಡುವಿನ ಚುಟುಕು ಸಮರದ ಫೋಟೊಗಳಿವು..
ಸಾಧು ಶ್ರೀನಾಥ್​

Updated on: Oct 15, 2020 | 4:35 PM

ರಾಜಸ್ಥಾನ ರಾಯಲ್ಸ್ ವಿರುದ್ಧ 13 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್, ಅಗ್ರಸ್ಥಾನಕ್ಕೇರಿದೆ. ಒಟ್ಟು 8 ಪಂದ್ಯಗಳಲ್ಲಿ 6 ಪಂದ್ಯಗಳನ್ನ ಗೆದ್ದಿರೋ ಡೆಲ್ಲಿ 12 ಅಂಕಗಳೊಂದಿಗೆ ನಂಬರ್ 1 ಸ್ಥಾನವನ್ನ ಅಲಂಕರಿಸಿದೆ. ಇನ್ನು ರಾಯಲ್ಸ್ 7ನೇ ಸ್ಥಾನದಲ್ಲಿದೆ.


ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ನ ತುಷಾರ್ ದೇಶಪಾಂಡೆ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಹರ್ಷಲ್ ಪಟೇಲ್ ಸ್ಥಾನಕ್ಕೆ ರಿಪ್ಲೇಸ್ ಆಗಿದ್ದ ದೇಶಪಾಂಡೆ, 4 ಓವರ್​ಗಳಲ್ಲಿ 37 ರನ್ ನೀಡಿ 2 ವಿಕೆಟ್ ಪಡೆದ್ರು.


ಬೆನ್ ಸ್ಟೋಕ್ಸ್ ಹೊಡೆದ ಚೆಂಡನ್ನ ತಡೆಯಲು ಮುಂದಾದ ಶ್ರೇಯಸ್ ಐಯ್ಯರ್, ಭುಜಕ್ಕೆ ಗಾಯ ಮಾಡಿಕೊಂಡರು. ತೀವ್ರ ನೋವಿನಿಂದ ಬಳಲಿದ ಐಯ್ಯರ್, ಮೈದಾನದಿಂದ ಹೊರನಡೆದ್ರು. ಇದ್ರಿಂದ ಶಿಖರ್ ಧವನ್ ತಂಡವನ್ನ ಮುನ್ನಡೆಸಿದ್ರು.


ಡೆಲ್ಲಿ ಕ್ಯಾಪಿಟಲ್ಸ್​ನ ಅಜಿಂಕ್ಯಾ ರಹಾನೆ, ರಾಜಸ್ಥಾನ ವಿರುದ್ಧವೂ ವೈಫಲ್ಯ ಅನುಭವಿಸಿದ್ರು. ಮುಂಬೈ ವಿರುದ್ಧ 15 ರನ್​ಗಳಿಸಿದ್ದ ರಹಾನೆ, ರಾಜಸ್ಥಾನ ವಿರುದ್ಧ 9 ಎಸೆತಗಳನ್ನ ಎದುರಿಸಿ ಕೇವಲ 2 ರನ್ ಗಳಿಸಿ ಜೋಫ್ರಾ ಅರ್ಚರ್​ಗೆ ವಿಕೆಟ್ ಒಪ್ಪಿಸಿದ್ರು.


ಕಗಿಸೋ ರಬಾಡ ಪರ್ಪಲ್ ಕ್ಯಾಪ್ ತನ್ನಲ್ಲೇ ಉಳಿಸಿಕೊಂಡಿದ್ದಾರೆ. ರಾಯಲ್ಸ್ ವಿರುದ್ಧ ಒಂದು ವಿಕೆಟ್ ಪಡೆದ ರಬಾಡ, ಒಟ್ಟು 17 ವಿಕೆಟ್ ಕಬಳಿಸೋದ್ರೊಂದಿಗೆ ಪರ್ಪಲ್ ಕ್ಯಾಪ್ ಹೊಂದಿದ್ದಾರೆ.


156.2 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವೇಗದ ಎಸೆತವನ್ನ ಎಸೆದ ಎನ್ರಿಕ್ ನೊರ್ಟಿಯೆ, ಬಟ್ಲರ್​ರನ್ನ ಬಲಿಪಡೆದ್ರು.


ಶಿಖರ್ ಧವನ್ ಹಾಗೂ ನಾಯಕ ಶ್ರೇಯಾಸ್ ಐಯ್ಯರ್, ರಾಯಲ್ಸ್ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ್ರು. ದುಬೈ ಅಂಗಳದಲ್ಲಿ ದರ್ಬಾರ್ ನಡೆಸಿದ ಈ ಜೋಡಿ, 85 ರನ್​ಗಳ ಜೊತೆಯಾಟವಾಡ್ತು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us