AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ. ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ […]

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
Follow us
ಸಾಧು ಶ್ರೀನಾಥ್​
|

Updated on:Sep 17, 2020 | 2:01 PM

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ.

ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಐಪಿಎಲ್ 2020 ರ ತರಬೇತಿಯ ಜೊತೆಗೆ, ಮುಂಬೈ ಇಂಡಿಯನ್ಸ್ ತಂಡವು ಎರಡು ತಂಡಗಳಾಗಿ ವಿಭಜಿಸುವ ಮೂಲಕ ಅಭ್ಯಾಸ ಪಂದ್ಯವನ್ನು ಆಡುತ್ತಿದೆ, ಇದರಿಂದಾಗಿ ಪಂದ್ಯಾವಳಿ ಪ್ರಾರಂಭವಾದಾಗ ಎಲ್ಲಾ ಆಟಗಾರರ ಮದ್ಯ ಉತ್ತಮ ಒಡನಾಟ ಏರ್ಪಟ್ಟಿರುತ್ತದೆ.

ತರಬೇತಿ ಮತ್ತು ಅಭ್ಯಾಸದ ಜೊತೆಗೆ, ಮುಂಬೈ ಇಂಡಿಯನ್ಸ್‌ನ ಆಟಗಾರರು ಈ ನಡುವೆ ಮೋಜು ಮಸ್ತಿ ಮಾಡುವುದರಲ್ಲಿ ನಿರತರಾಗಿರುತ್ತಾರೆ.

ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರು ತಂಡದ ಆಟಗಾರರೊಂದಿಗೆ ನಿರಂತರವಾಗಿ ಮೈದಾನದಲ್ಲಿ ಬೆವರು ಸುರಿಸುತ್ತಿದ್ದಾರೆ ಜೊತೆಗೆ ಪಂದ್ಯಾವಳಿಗೆ ಆಟಗಾರರನ್ನು ಸಿದ್ಧಪಡಿಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು,ಅದರ ಯಶಸ್ಸಿನಲ್ಲಿ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಗಳ ದೊಡ್ಡ ಪಾತ್ರವಿದೆ. ಇದರಲ್ಲಿ ಜಹೀರ್ ಖಾನ್ ಅವರಂತಹ ಮಾಜಿ ಬೌಲರ್‌ಗಳ ಶ್ರಮ ಹೆಚ್ಚಾಗಿದೆ.

Published On - 2:03 pm, Sat, 12 September 20

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ