AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಮೇಲಿನ ಕನ್ನಡಿಗರ ಅಭಿಮಾನ, ಪಂಜಾಬ್ ಕಿಂಗ್ಸ್ ಮೇಲೂ ಇದೆ! ಯಾಕೆ ಗೊತ್ತಾ?

ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ಮೇಲಿನ ಕನ್ನಡಿಗರ ಅಭಿಮಾನ, ಕಿಂಗ್ಸ್ ಇಲೆವೆನ್ ಪಂಜಾಬ್ ಮೇಲೂ ಇದೆ. ಪ್ರೀತಿ ಜಿಂಟಾ ಒಡೆತನದ ತಂಡವನ್ನ, ಈ ಬಾರಿ ಕಿಂಗ್ಸ್ ಇಲೆವೆನ್ ಕರ್ನಾಟಕ ಅಂದ್ರು ತಪ್ಪಿಲ್ಲ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ ಆರು ಮಂದಿ ಕನ್ನಡಿಗರಿದ್ದಾರೆ. ಹಾಗಾದ್ರೆ, ಪಂಜಾಬ್ ತಂಡದಲ್ಲಿರೋ ಕನ್ನಡಿಗರು ಯಾಱರು ಅನ್ನೋದನ್ನ ನೋಡಿ. ನಂಬರ್ 1: ಅನಿಲ್ ಕುಂಬ್ಳೆ, ಕೋಚ್.. ಟೀಂ ಇಂಡಿಯಾದ ಮಾಜಿ ಕೋಚ್ ಹಾಗೂ ಸ್ಪಿನ್ ದಿಗ್ಗಜ ಅನಿಲ್ […]

RCB ಮೇಲಿನ ಕನ್ನಡಿಗರ ಅಭಿಮಾನ, ಪಂಜಾಬ್ ಕಿಂಗ್ಸ್  ಮೇಲೂ ಇದೆ! ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Sep 17, 2020 | 2:20 PM

Share

ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ಮೇಲಿನ ಕನ್ನಡಿಗರ ಅಭಿಮಾನ, ಕಿಂಗ್ಸ್ ಇಲೆವೆನ್ ಪಂಜಾಬ್ ಮೇಲೂ ಇದೆ. ಪ್ರೀತಿ ಜಿಂಟಾ ಒಡೆತನದ ತಂಡವನ್ನ, ಈ ಬಾರಿ ಕಿಂಗ್ಸ್ ಇಲೆವೆನ್ ಕರ್ನಾಟಕ ಅಂದ್ರು ತಪ್ಪಿಲ್ಲ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ ಆರು ಮಂದಿ ಕನ್ನಡಿಗರಿದ್ದಾರೆ. ಹಾಗಾದ್ರೆ, ಪಂಜಾಬ್ ತಂಡದಲ್ಲಿರೋ ಕನ್ನಡಿಗರು ಯಾಱರು ಅನ್ನೋದನ್ನ ನೋಡಿ.

ನಂಬರ್ 1: ಅನಿಲ್ ಕುಂಬ್ಳೆ, ಕೋಚ್.. ಟೀಂ ಇಂಡಿಯಾದ ಮಾಜಿ ಕೋಚ್ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ, ಪಂಜಾಬ್ ತಂಡದ ಹೆಡ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕುಂಬ್ಳೆ ಕೋಚ್ ಆಗ್ತಿದ್ದಂತೆ, ಪಂಜಾಬ್ ತಂಡದಲ್ಲಿ ಕರ್ನಾಟಕದ ಪ್ರತಿಭಾವಂತ ಆಟಗಾರರಿಗೆ ಮಣೆಹಾಕಿದ್ದಾರೆ.

ನಂಬರ್ 2: ಕೆ.ರಾಹುಲ್, ನಾಯಕ.. ಟೀಮ್ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಕೆ.ಎಲ್.ರಾಹುಲ್, ಈ ಬಾರಿ ಪಂಜಾಬ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ರನ್ ಮಳೆಯನ್ನ ಹರಿಸಿದ್ದ ರಾಹುಲ್, ಈ ಬಾರಿ ಪಂಜಾಬ್​ಗೆ ಚಾಂಪಿಯನ್ ಪಟ್ಟ ತಂದುಕೊಡೋದಕ್ಕೆ ಕಾತರರಾಗಿದ್ದಾರೆ.

ನಂಬರ್ 3: ಮಯಾಂಕ್ ಅಗರ್ವಾಲ್, ಬ್ಯಾಟ್ಸ್​ಮನ್ ಭಾರತ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್​ಮನ್ ಮಯಾಂಕ್ ಅಗರ್ವಾಲ್, ಸೀಸನ್ 12ರಲ್ಲೇ ಪಂಜಾಬ್ ತಂಡವನ್ನ ಸೇರಿಕೊಂಡಿದ್ರು. 13ನೇ ಆವೃತ್ತಿಯಲ್ಲೂ ಮಯಾಂಕ್ ಪಂಜಾಬ್ ಪರ ಆರ್ಭಟಿಸಲು  ರೆಡಿಯಾಗಿದ್ದಾರೆ.

ನಂಬರ್ 4: ಕರುಣ್ ನಾಯರ್, ಬ್ಯಾಟ್ಸ್​ಮನ್ vo : ಕರ್ನಾಟಕ ತಂಡದ ಕ್ಯಾಪ್ಟನ್ ಕರುಣ್ ನಾಯರ್ ಕೂಡ, 12ನೇ ಆವೃತ್ತಿಯಲ್ಲೇ ಪಂಜಾಬ್ ಕ್ಯಾಂಪ್ ಸೇರ್ಪಡೆಗೊಂಡಿದ್ರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡೋ ಕರುಣ್, ಈ ಬಾರಿ ಕೋಚ್ ಕುಂಬ್ಳೆ ಮಾರ್ಗದರ್ಶನದಲ್ಲಿ ಬೊಂಬಾಟ್ ಪ್ರದರ್ಶನ ನೀಡೋದಕ್ಕೆ ಸಜ್ಜಾಗಿದ್ದಾರೆ.

ನಂಬರ್ 5: ಕೆ.ಗೌತಮ್, ಆಲ್​ರೌಂಡರ್.. ರಾಜಸ್ಥಾನ ರಾಯಲ್ಸ್​ನಲ್ಲಿದ್ದ ಕನ್ನಡಿಗ ಕೆ.ಗೌತಮ್​ನನ್ನು ಕೋಚ್ ಅನಿಲ್ ಕುಂಬ್ಳೆ, ಪಂಜಾಬ್ ತಂಡಕ್ಕೆ ಕರೆ ತಂದಿದ್ದಾರೆ. ಕಳೆದೆರೆಡು ಸೀಸನ್​ನಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದ ಗೌತಮ್, ಪಂಜಾಬ್ ಪರ ಗೇಮ್ ಚೇಂಜರ್ ಆಗೋ ಸೂಚನೆ ನೀಡಿದ್ದಾರೆ.

ನಂಬರ್ 6: ಜೆ.ಸುಚಿತ್, ಸ್ಪಿನ್ನರ್.. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಸ್ಪಿನ್ನರ್ ಜೆ.ಸುಚಿತ್​ನನ್ನೂ ಕುಂಬ್ಳೆ, ಪಂಜಾಬ್ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಎಡಗೈ ಸ್ಪಿನ್ನರ್ ಆಗಿರೋ ಸಿಚಿತ್, ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸೋ ತಾಕತ್ತನ್ನ ಹೊಂದಿದ್ದಾರೆ.

ಒಟ್ನಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ತಂಡದಲ್ಲಿ ಕನ್ನಡಗರೇ ಕಿಂಗ್ ಆಗಿದ್ದಾರೆ. ಹಾಗೇ ಕರ್ನಾಟಕದ ಅಭಿಮಾನಿಗಳು ಸಹ ಪಂಜಾಬ್ ಕನ್ನಡಿಗರ ಮೇಲೂ ಒಂದು ಕಣ್ಣಿಟ್ಟಿದ್ದಾರೆ.

Published On - 12:48 pm, Wed, 16 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ