AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: CSK vs KKR ಗೆದ್ದು ಸೋತ, ಸೋತು ಗೆದ್ದ ಪಂದ್ಯದ ಫೋಟೊಗಳಿವು..

ಅಬುಧಾಬಿ: ಮರಳುಗಾಡಿನ ಮಹಾಯುದ್ಧದ 21ನೇ ಪಂದ್ಯದಲ್ಲಿಂದು ಚೆನ್ನೈ ಮತ್ತು ಕೊಲ್ಕತ್ತಾ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕೊಲ್ಕತ್ತಾ 10 ರನ್​ಗಳ ರೋಚಕ ಜಯ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್ಭಟಿಸಿದ ಕೆಕೆಆರ್ ಆರಂಭಿಕ ರಾಹುಲ್ ತ್ರಿಪಾಟಿ, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು. 51 ಎಸೆತಗಳನ್ನ ಎದುರಿಸಿದ್ದ ರಾಹುಲ್ ತ್ರಿಪಾಟಿ, 8 ಬೌಂಡರಿ, 3 ಸಿಕ್ಸರ್ ನೆರವಿನಿಂದ 81 ರನ್ ಗಳಿಸಿದ್ರು. ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಡ್ವೇನ್ ಬ್ರಾವೋ ಅದ್ಭುತ ಬೌಲಿಂಗ್ ಮಾಡಿದ್ರು. 4 ಓವರ್​ಗಳಲ್ಲಿ 37 […]

IPL 2020: CSK vs KKR ಗೆದ್ದು ಸೋತ, ಸೋತು ಗೆದ್ದ ಪಂದ್ಯದ ಫೋಟೊಗಳಿವು..
ಸಾಧು ಶ್ರೀನಾಥ್​
|

Updated on: Oct 08, 2020 | 4:36 PM

Share

ಅಬುಧಾಬಿ: ಮರಳುಗಾಡಿನ ಮಹಾಯುದ್ಧದ 21ನೇ ಪಂದ್ಯದಲ್ಲಿಂದು ಚೆನ್ನೈ ಮತ್ತು ಕೊಲ್ಕತ್ತಾ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕೊಲ್ಕತ್ತಾ 10 ರನ್​ಗಳ ರೋಚಕ ಜಯ ಸಾಧಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್ಭಟಿಸಿದ ಕೆಕೆಆರ್ ಆರಂಭಿಕ ರಾಹುಲ್ ತ್ರಿಪಾಟಿ, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು. 51 ಎಸೆತಗಳನ್ನ ಎದುರಿಸಿದ್ದ ರಾಹುಲ್ ತ್ರಿಪಾಟಿ, 8 ಬೌಂಡರಿ, 3 ಸಿಕ್ಸರ್ ನೆರವಿನಿಂದ 81 ರನ್ ಗಳಿಸಿದ್ರು.

ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಡ್ವೇನ್ ಬ್ರಾವೋ ಅದ್ಭುತ ಬೌಲಿಂಗ್ ಮಾಡಿದ್ರು. 4 ಓವರ್​ಗಳಲ್ಲಿ 37 ರನ್ ನೀಡಿದ ಬ್ರಾವೋ, ರಾಹುಲ್ ತ್ರಿಪಾಟಿ, ಕಮಲೇಶ್ ನಾಗರಕೋಟಿ, ಶಿವಂ ಮಾವಿ ವಿಕೆಟ್ ಪಡೆದು, ಕೆಕೆಆರ್ ಸ್ಕೋರ್ ಕಡಿಮೆ ಮಾಡಿದ್ರು.

13ನೇ ಆವೃತ್ತಿಯಲ್ಲಿ ಮೊದಲ ಪಂದ್ಯವಾಡಿದ ಲೆಗ್ ಸ್ಪಿನ್ನರ್ ಕರಣ್ ಶರ್ಮಾ, ತಮ್ಮ ಕೈಚಳಕ ತೋರಿಸಿದ್ರು. ಪಿಯೂಷ್ ಚಾವ್ಲಾ ಬದಲಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದ ಕರಣ್, 4 ಓವರ್​ಗಳಲ್ಲಿ ಕೇವಲ 25 ರನ್ ನೀಡಿ ಎರಡು ವಿಕೆಟ್ ಪಡೆದ್ರು.

ನಿನ್ನೆಯ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಮಹೇಂದ್ರ ಸಿಂಗ್ ಧೋನಿ ಕಮಾಲ್ ಮಾಡಿದ್ರು. ಒಟ್ಟು ನಾಲ್ಕು ಕ್ಯಾಚ್ ಹಿಡಿದ ಎಂ.ಎಸ್.ಧೋನಿ, ಒಂದು ರನೌಟ್ ಕೂಡ ಮಾಡಿದ್ರು, ಧೋನಿ ಕೀಪಿಂಗ್​ಗೆ ಶುಭಮನ್, ಮಾರ್ಗನ್, ರಸ್ಸೆಲ್, ಶಿವಂ ಮಾವಿ ಬಲಿಯಾದ್ರು.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರು ಬ್ಯಾಟ್ಸ್​ಮನ್​ಗಳು ಒಂದಂಕಿಗೆ ಔಟಾಗಿದ್ದಾರೆ. ಚೆನ್ನೈ ಬೌಲಿಂಗ್ ದಾಳಿಗೆ ಮಂಕಾದ ನಿತಿಶ್ ರಾಣಾ, ಇಯಾನ್ ಮಾರ್ಗನ್ ಸೇರಿದಂತೆ 6 ಬ್ಯಾಟ್ಸ್​ಮನ್​ಗಳು ಒಂದಂಕಿಗೆ ಪೆವಿಲಿಯನ್ ಸೇರಿದ್ರು.

ನಿನ್ನೆಯ ಪಂದ್ಯದಲ್ಲಿ ಕೆಕೆಆರ್ ಎರಡು ವಿಕೆಟ್ ಕಳೆದಕೊಂಡ ನಂತ್ರ ಸುನಿಲ್ ನರೈನ್ ಕಣಕ್ಕಿಳಿದಿದ್ದು, ಆಶ್ಚರ್ಯ ತಂದಿದೆ ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ. ಮಾರ್ಗನ್, ಕಾರ್ತಿಕ್ ಮುನ್ನ ನರೈನ್ ಕಣಕ್ಕಿಳಿದು ಅಚ್ಚರಿಯುಂಟು ಮಾಡಿದ್ರು.

ಚೆನ್ನೈ ತಂಡದ ವಿರುದ್ಧ 10 ರನ್​ಗಳ ರೋಚಕ ಗೆಲುವು ಸಾಧಿಸಿರೋ ಕೆಕೆಆರ್, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಆಡಿರೋ 5 ಪಂದ್ಯಗಳ ಪೈಕಿ 3ಪಂದ್ಯಗಳನ್ನ ಗೆದ್ದು ಎರಡರಲ್ಲಿ ಸೋತಿರೋ ಕೆಕೆಆರ್​​, 6 ಅಂಕ ಕಲೆಹಾಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​