AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ. ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು. ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ […]

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 07, 2020 | 5:12 PM

Share

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ.

ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು.

ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಚೆನ್ನೈ ವಿರುದ್ಧ 6 ರನ್ ಗಳಿಸಿದ್ದ ಯಶಸ್ವಿ, ಮುಂಬೈ ವಿರುದ್ಧ ಶೂನ್ಯಕ್ಕೆ ಔಟಾದ್ರು.

ಮೊದಲೆರೆಡು ಪಂದ್ಯಗಳಲ್ಲಿ ಅರ್ಧ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್, ಕಳೆದ ಮೂರು ಪಂದ್ಯಗಳಲ್ಲೂ ರನ್ ಗಳಿಸೋದಕ್ಕೆ ಪರದಾಡ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 3 ಎಸೆತಗಳನ್ನ ಎದುರಿಸಿದ ಸಂಜು, ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದ ಕಾರ್ತಿಕ್ ತ್ಯಾಗಿ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಭಾರತ ಅಂಡರ್ 19 ತಂಡದ ಬೌಲರ್ ಆಗಿದ್ದ ತ್ಯಾಗಿ, ಮುಂಬೈ ವಿರುದ್ಧ 1 ವಿಕೆಟ್ ಪಡೆದ್ರು.

ಮೊದಲ ಪಂದ್ಯವಾಡಿದ ಕಾರ್ತಿಕ್ ತ್ಯಾಗಿ ಬೌಲಿಂಗ್​ನ್ನ ಬೆನ್ ಸ್ಟೋಕ್ಸ್ ಗುಣಗಾನ ಮಾಡಿದ್ದಾರೆ. ತ್ಯಾಗಿ ಅವರು ಬ್ರೆಟ್ ಲೀಯಂತೆ ರನ್ ಅಪ್ ಹಾಗೂ ಇಶಾಂತ್ ಶರ್ಮರಂತೆ ಬೌಲಿಂಗ್ ಡೆಲಿವರಿ ಹೊಂದಿದ್ದಾರೆ ಎಂದು ಹೊಗಳಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧ 20 ರನ್ ನೀಡಿ 4 ವಿಕೆಟ್ ಪಡೆದಿದ್ದು, ಜಸ್ಪ್ರೀತ್ ಬೂಮ್ರಾರ ಐಪಿಎಲ್​ನಲ್ಲಿ ಅತ್ಯುತ್ತಮ ಸಾಧನೆಯಾಗಿದೆ. 2017 ರಲ್ಲಿ ಆರ್​ಸಿಬಿ ವಿರುದ್ಧ ಬೆಂಗಳೂರಿನಲ್ಲಿ ಬೂಮ್ರಾ 7 ರನ್​ಗೆ 3 ವಿಕೆಟ್ ಪಡೆದಿದ್ರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ