AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ. ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು. ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ […]

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..
ಸಾಧು ಶ್ರೀನಾಥ್​
|

Updated on: Oct 07, 2020 | 5:12 PM

Share

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ.

ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು.

ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಚೆನ್ನೈ ವಿರುದ್ಧ 6 ರನ್ ಗಳಿಸಿದ್ದ ಯಶಸ್ವಿ, ಮುಂಬೈ ವಿರುದ್ಧ ಶೂನ್ಯಕ್ಕೆ ಔಟಾದ್ರು.

ಮೊದಲೆರೆಡು ಪಂದ್ಯಗಳಲ್ಲಿ ಅರ್ಧ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್, ಕಳೆದ ಮೂರು ಪಂದ್ಯಗಳಲ್ಲೂ ರನ್ ಗಳಿಸೋದಕ್ಕೆ ಪರದಾಡ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 3 ಎಸೆತಗಳನ್ನ ಎದುರಿಸಿದ ಸಂಜು, ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದ ಕಾರ್ತಿಕ್ ತ್ಯಾಗಿ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಭಾರತ ಅಂಡರ್ 19 ತಂಡದ ಬೌಲರ್ ಆಗಿದ್ದ ತ್ಯಾಗಿ, ಮುಂಬೈ ವಿರುದ್ಧ 1 ವಿಕೆಟ್ ಪಡೆದ್ರು.

ಮೊದಲ ಪಂದ್ಯವಾಡಿದ ಕಾರ್ತಿಕ್ ತ್ಯಾಗಿ ಬೌಲಿಂಗ್​ನ್ನ ಬೆನ್ ಸ್ಟೋಕ್ಸ್ ಗುಣಗಾನ ಮಾಡಿದ್ದಾರೆ. ತ್ಯಾಗಿ ಅವರು ಬ್ರೆಟ್ ಲೀಯಂತೆ ರನ್ ಅಪ್ ಹಾಗೂ ಇಶಾಂತ್ ಶರ್ಮರಂತೆ ಬೌಲಿಂಗ್ ಡೆಲಿವರಿ ಹೊಂದಿದ್ದಾರೆ ಎಂದು ಹೊಗಳಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧ 20 ರನ್ ನೀಡಿ 4 ವಿಕೆಟ್ ಪಡೆದಿದ್ದು, ಜಸ್ಪ್ರೀತ್ ಬೂಮ್ರಾರ ಐಪಿಎಲ್​ನಲ್ಲಿ ಅತ್ಯುತ್ತಮ ಸಾಧನೆಯಾಗಿದೆ. 2017 ರಲ್ಲಿ ಆರ್​ಸಿಬಿ ವಿರುದ್ಧ ಬೆಂಗಳೂರಿನಲ್ಲಿ ಬೂಮ್ರಾ 7 ರನ್​ಗೆ 3 ವಿಕೆಟ್ ಪಡೆದಿದ್ರು.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ