AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ. ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು. ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ […]

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..
ಸಾಧು ಶ್ರೀನಾಥ್​
|

Updated on: Oct 07, 2020 | 5:12 PM

Share

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ.

ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು.

ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಚೆನ್ನೈ ವಿರುದ್ಧ 6 ರನ್ ಗಳಿಸಿದ್ದ ಯಶಸ್ವಿ, ಮುಂಬೈ ವಿರುದ್ಧ ಶೂನ್ಯಕ್ಕೆ ಔಟಾದ್ರು.

ಮೊದಲೆರೆಡು ಪಂದ್ಯಗಳಲ್ಲಿ ಅರ್ಧ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್, ಕಳೆದ ಮೂರು ಪಂದ್ಯಗಳಲ್ಲೂ ರನ್ ಗಳಿಸೋದಕ್ಕೆ ಪರದಾಡ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 3 ಎಸೆತಗಳನ್ನ ಎದುರಿಸಿದ ಸಂಜು, ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದ ಕಾರ್ತಿಕ್ ತ್ಯಾಗಿ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಭಾರತ ಅಂಡರ್ 19 ತಂಡದ ಬೌಲರ್ ಆಗಿದ್ದ ತ್ಯಾಗಿ, ಮುಂಬೈ ವಿರುದ್ಧ 1 ವಿಕೆಟ್ ಪಡೆದ್ರು.

ಮೊದಲ ಪಂದ್ಯವಾಡಿದ ಕಾರ್ತಿಕ್ ತ್ಯಾಗಿ ಬೌಲಿಂಗ್​ನ್ನ ಬೆನ್ ಸ್ಟೋಕ್ಸ್ ಗುಣಗಾನ ಮಾಡಿದ್ದಾರೆ. ತ್ಯಾಗಿ ಅವರು ಬ್ರೆಟ್ ಲೀಯಂತೆ ರನ್ ಅಪ್ ಹಾಗೂ ಇಶಾಂತ್ ಶರ್ಮರಂತೆ ಬೌಲಿಂಗ್ ಡೆಲಿವರಿ ಹೊಂದಿದ್ದಾರೆ ಎಂದು ಹೊಗಳಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧ 20 ರನ್ ನೀಡಿ 4 ವಿಕೆಟ್ ಪಡೆದಿದ್ದು, ಜಸ್ಪ್ರೀತ್ ಬೂಮ್ರಾರ ಐಪಿಎಲ್​ನಲ್ಲಿ ಅತ್ಯುತ್ತಮ ಸಾಧನೆಯಾಗಿದೆ. 2017 ರಲ್ಲಿ ಆರ್​ಸಿಬಿ ವಿರುದ್ಧ ಬೆಂಗಳೂರಿನಲ್ಲಿ ಬೂಮ್ರಾ 7 ರನ್​ಗೆ 3 ವಿಕೆಟ್ ಪಡೆದಿದ್ರು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ