AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ […]

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 21, 2020 | 4:41 PM

Share

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ.

ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ ಬೌಲಿಂಗ್ ಮಾಡಿದ ಇಂಗ್ಲೆಂಡ್​ನ ಡೆನಿಯಲ್ ಸ್ಯಾಮ್ಸ್, 7.50 ರ ಎಕಾನಮಿಯಲ್ಲಿ 30 ರನ್ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಶತಕ ದಾಖಲಿಸಿದ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್​ಗಳ ನೆರವಿನಿಂದ ಅಜೇಯ 106 ರನ್ ಕಲೆ ಹಾಕಿದ ಧವನ್, ಡೆಲ್ಲಿ ತಂಡದ ಸ್ಕೋರ್ ಹೆಚ್ಚಿಸಿದರು.

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನ ಗೆದ್ದಿರೋ ಪಂಜಾಬ್, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಲ್​ರೌಂಡರ್ ಆಟವಾಡಿ ಪಂಜಾಬ್ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್​ವೆಲ್​ ಒಂದು ವಿಕೆಟ್ ಪಡೆದ್ರೆ, 32 ರನ್​ಗಳಿಸಿದರು.

ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ತುಷಾರ್ ದೇಶಪಾಂಡೆಯ ಒಂದೇ ಓವರ್​ನಲ್ಲಿ ಬರೋಬ್ಬರಿ 24 ರನ್ ಬಾರಿಸಿದರು.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ