IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ […]

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​

Updated on: Oct 21, 2020 | 4:41 PM

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ.


ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.


ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ ಬೌಲಿಂಗ್ ಮಾಡಿದ ಇಂಗ್ಲೆಂಡ್​ನ ಡೆನಿಯಲ್ ಸ್ಯಾಮ್ಸ್, 7.50 ರ ಎಕಾನಮಿಯಲ್ಲಿ 30 ರನ್ ನೀಡಿದರು.


ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಶತಕ ದಾಖಲಿಸಿದ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್​ಗಳ ನೆರವಿನಿಂದ ಅಜೇಯ 106 ರನ್ ಕಲೆ ಹಾಕಿದ ಧವನ್, ಡೆಲ್ಲಿ ತಂಡದ ಸ್ಕೋರ್ ಹೆಚ್ಚಿಸಿದರು.


ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನ ಗೆದ್ದಿರೋ ಪಂಜಾಬ್, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.


ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಲ್​ರೌಂಡರ್ ಆಟವಾಡಿ ಪಂಜಾಬ್ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್​ವೆಲ್​ ಒಂದು ವಿಕೆಟ್ ಪಡೆದ್ರೆ, 32 ರನ್​ಗಳಿಸಿದರು.


ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ತುಷಾರ್ ದೇಶಪಾಂಡೆಯ ಒಂದೇ ಓವರ್​ನಲ್ಲಿ ಬರೋಬ್ಬರಿ 24 ರನ್ ಬಾರಿಸಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us