AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಕೊಲ್ಕತ್ತಾ ಮೇಲೆ ಕೊಹ್ಲಿ ಹುಡುಗರು ದರ್ಬಾರ್​ ನಡೆಸಿದ ಫೋಟೋಗಳಿವು..

ಅಬು ಧಾಬಿಯಲ್ಲಿ ನಡೆದ ಕೊಲ್ಕತ್ತಾ ಹಾಗೂ ಬೆಂಗಳೂರು ನಡುವಿನ ಸೇಡಿನ ಸಮರದಲ್ಲಿ ಬೆಂಗಳೂರು 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಕೆ.ಕೆ.ಆರ್. ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. 10 ಪಂದ್ಯಗಳಲ್ಲಿ 7 ಪಂದ್ಯಗಳನ್ನ ಗೆದ್ದಿರೋ ಆರ್.​ಸಿ.ಬಿ. 14 ಅಂಕಗಳನ್ನ ಕಲೆಹಾಕಿ, ಎರಡನೇ ಸ್ಥಾನವನ್ನ ಅಲಂಕರಿಸಿದೆ. ಆರ್​.ಸಿ.ಬಿ. ವಿರುದ್ಧ ಕೆ.ಕೆ.ಆರ್. ಪವರ್ ಪ್ಲೇನಲ್ಲಿ 17 ರನ್​ಗೆ 4 ವಿಕೆಟ್ ಕಳೆದುಕೊಳ್ತು. ಇದು ಐಪಿಎಲ್ ಇತಿಹಾಸದಲ್ಲೇ ಪವರ್ ಪ್ಲೇನಲ್ಲಿ ದಾಖಲಿಸಿದ […]

IPL 2020: ಕೊಲ್ಕತ್ತಾ ಮೇಲೆ ಕೊಹ್ಲಿ ಹುಡುಗರು ದರ್ಬಾರ್​ ನಡೆಸಿದ ಫೋಟೋಗಳಿವು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಕೊಲ್ಕತ್ತಾ ಹಾಗೂ ಬೆಂಗಳೂರು ನಡುವಿನ ಸೇಡಿನ ಸಮರದಲ್ಲಿ ಬೆಂಗಳೂರು 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಕೆ.ಕೆ.ಆರ್. ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. 10 ಪಂದ್ಯಗಳಲ್ಲಿ 7 ಪಂದ್ಯಗಳನ್ನ ಗೆದ್ದಿರೋ ಆರ್.​ಸಿ.ಬಿ. 14 ಅಂಕಗಳನ್ನ ಕಲೆಹಾಕಿ, ಎರಡನೇ ಸ್ಥಾನವನ್ನ ಅಲಂಕರಿಸಿದೆ.

ಆರ್​.ಸಿ.ಬಿ. ವಿರುದ್ಧ ಕೆ.ಕೆ.ಆರ್. ಪವರ್ ಪ್ಲೇನಲ್ಲಿ 17 ರನ್​ಗೆ 4 ವಿಕೆಟ್ ಕಳೆದುಕೊಳ್ತು. ಇದು ಐಪಿಎಲ್ ಇತಿಹಾಸದಲ್ಲೇ ಪವರ್ ಪ್ಲೇನಲ್ಲಿ ದಾಖಲಿಸಿದ ಅತಿ ಕಡಿಮೆ ಸ್ಕೋರ್ ಆಗಿದೆ.

ಕೊಲ್ಕತ್ತಾ ವಿರುದ್ಧ ಮ್ಯಾಚ್ ವಿನ್ನಿಂಗ್ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 4 ಓವರ್​ಗಳಲ್ಲಿ ಎರಡು ಓವರ್ ಮೇಡನ್ ಮಾಡಿದ ಸಿರಾಜ್, 8 ರನ್ ನೀಡಿ ಮೂರು ವಿಕೆಟ್ ಪಡೆದ ಸಾಧನೆ ಮಾಡಿದ್ರು.

ಕೊಲ್ಕತ್ತಾ ವಿರುದ್ಧ ಎರಡು ಬೌಂಡರಿಗಳನ್ನ ಬಾರಿಸಿದ ವಿರಾಟ್ ಕೊಹ್ಲಿ, ಐಪಿಎಲ್ ಕರಿಯರ್​ನಲ್ಲಿ ಒಟ್ಟು 500ನೇ ಬೌಂಡರಿ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದ್ರು. 187 ಪಂದ್ಯಗಳಲ್ಲಿ ಕೊಹ್ಲಿ 500 ಬೌಂಡರಿ ಬಾರಿಸಿದ್ರೆ, 199 ಸಿಕ್ಸರ್​ಗಳನ್ನ ಸಿಡಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್​ಗೆ ಲೆಗ್ ಸ್ಪಿನ್ನರ್​ಗಳೇ ಕಂಕಟವಾಗಿದ್ದಾರೆ. ಸೀಸನ್ 13 ರಲ್ಲಿ 18 ಲೆಗ್ ಸ್ಪಿನ್ ಬಾಲ್​ಗಳನ್ನ ಎದುರಿಸಿದ ದಿನೇಶ್ ಕಾರ್ತಿಕ್ 14 ರನ್ ಗಳಿಸಿದ್ರೆ, 5 ಬಾರಿ ವಿಕೆಟ್ ಒಪ್ಪಿಸಿದ್ದಾರೆ.

8 ವರ್ಷಗಳ ಬಳಿಕ ಕೊಲ್ಕತ್ತಾ ತಂಡ ಌಂಡ್ರೋ ರಸ್ಸೆಲ್ ಹಾಗೂ ಸುನಿಲ್ ನರೈನ್​ರನ್ನ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಟ್ಟಿದೆ. 2012 ರಲ್ಲಿಯೂ ಕೆಕೆಆರ್, ಆರ್​ಸಿಬಿ ವಿರುದ್ಧ ಇಬ್ಬರು ವೆಸ್ಟ್ ಇಂಡೀಸ್ ಕ್ರಿಕೆಟಿಗರನ್ನ ತಂಡದಿಂದ ಹೊರಗಿಟ್ಟಿತ್ತು.

ಆರ್.​ಸಿ.ಬಿ. ತಂಡದ ವಿಕೆಟ್ ಕೀಪರ್ ಎಬಿ ಡಿವಿಲಿಯರ್ಸ್ ಐಪಿಎಲ್​ನಲ್ಲಿ 100ನೇ ಕ್ಯಾಚ್ ಹಿಡಿದಿದ್ದಾರೆ. ಕೆಕೆಆರ್ ಪಂದ್ಯಕ್ಕೂ ಮುನ್ನ ಎಬಿಡಿಗೆ ಎರಡು ಕ್ಯಾಚ್ ಅವಶ್ಯಕತೆಯಿತ್ತು. ಟಾಮ್ ಬೆಂಟನ್, ರಾಹುಲ್ ತ್ರಿಪಾಟಿ ಕ್ಯಾಚ್ ಹಿಡಿದ ಎಬಿಡಿ ನೂರರ ಕ್ಲಬ್ ಸೇರದ್ರು.

Published On - 9:28 am, Thu, 22 October 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ