AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
|

Updated on:Feb 18, 2021 | 8:33 PM

Share

ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು.

ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದರು. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂಬುದು ಭಾರೀ ಚರ್ಚೆ ಆಗಿತ್ತು.

ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿತ್ತು. ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು. ಉಳಿದ ಯಾವ ತಂಡದವರೂ ಬಿಡ್​ ಮಾಡದ ಕಾರಣ ಅರ್ಜುನ್​ ಮುಂಬೈ ಪಾಲಾದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್ 

Published On - 8:23 pm, Thu, 18 February 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?