AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
|

Updated on:Feb 18, 2021 | 8:33 PM

Share

ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು.

ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದರು. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂಬುದು ಭಾರೀ ಚರ್ಚೆ ಆಗಿತ್ತು.

ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿತ್ತು. ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು. ಉಳಿದ ಯಾವ ತಂಡದವರೂ ಬಿಡ್​ ಮಾಡದ ಕಾರಣ ಅರ್ಜುನ್​ ಮುಂಬೈ ಪಾಲಾದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್ 

Published On - 8:23 pm, Thu, 18 February 21

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?