AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
|

Updated on:Feb 18, 2021 | 8:33 PM

Share

ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು.

ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದರು. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂಬುದು ಭಾರೀ ಚರ್ಚೆ ಆಗಿತ್ತು.

ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿತ್ತು. ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು. ಉಳಿದ ಯಾವ ತಂಡದವರೂ ಬಿಡ್​ ಮಾಡದ ಕಾರಣ ಅರ್ಜುನ್​ ಮುಂಬೈ ಪಾಲಾದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್ 

Published On - 8:23 pm, Thu, 18 February 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ